ಬೊಫೋರ್ಸ್ ಹಗರಣದ ತನಿಖೆ ಮುಂದುವರೆಸಲಿದೆ ಸಿಬಿಐ
ನವದೆಹಲಿ, ಸೆಪ್ಟೆಂಬರ್ 27 : ಬೊಫೋರ್ಸ್ ಹಗರಣದ ತನಿಖೆಯನ್ನು ಮುಂದುವರೆಸುವುದಾಗಿ ಸಿಬಿಐ ಹೇಳಿದೆ. ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಈ ಕುರಿತು ಸಿಬಿಐ ಮಾಹಿತಿ ನೀಡಿದ್ದು, ತನಿಖೆ ಮುಂದುವರೆಸುವ ಬಗ್ಗೆ ಸುಪ್ರೀಂಕೋರ್ಟ್ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಹೇಳಿದೆ.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬೊಪೋರ್ಸ್ ಹಗರಣದ ಬಗ್ಗೆ ಚರ್ಚೆ ನಡೆದಿತ್ತು. ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಲು ಹಗರಣದ ಬಗ್ಗೆ ಮಾಹಿತಿ ತಿಳಿಸಲಾಗಿತ್ತು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು.

ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಇಂದು ಸಭೆ ಸೇರಲಿದೆ. ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಸಮಿತಿಯ ಅಧ್ಯಕ್ಷರು. ಸಿಬಿಐ ಪಿಎಸಿಗೆ ಹಗರಣದ ತನಿಖೆ ಮುಂದುವರೆಸುವ ಕುರಿತು ಬರೆದಿರುವ ಪತ್ರದ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇಂದಿನ ಸಭೆಯಲ್ಲಿ ಬಾಕಿ ಇರುವ ಲೆಕ್ಕಪತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಬೊಫೋರ್ಸ್ ಹಗರಣದ ಒಂದು ಲೆಕ್ಕಪತ್ರದ ಕುರಿತು ಪರಿಶೀಲನೆ ನಡೆಯಲಿದ್ದು, ಆಗ ಸಿಬಿಐ ಬರೆದಿರುವ ಪತ್ರದ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.
After so many years the govt is bringing up bofors issue again, it is politically motivated to defame Cong: Mallikarjun Kharge, PAC Chairman pic.twitter.com/8raCDeIswg
— ANI (@ANI) September 27, 2017
2017ರ ಜುಲೈನಲ್ಲಿ ಬಿಜೆಡಿ ಸಂಸದ ಭ್ರತೃಹರಿ ಮಹತಾಬ್ ನೇತೃತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ರಕ್ಷಣಾ ಉಪ ಸಮಿತಿ ಬೊಫೋರ್ಸ್ ಹಗರಣದ ಮರು ತನಿಖೆಗೆ ಶಿಫಾರಸು ಮಾಡಿತ್ತು. ಆದರೆ, ಸಿಬಿಐ ಉಪ ಸಮಿತಿಗೆ ಸಿಬಿಐಗೆ ಶಿಫಾರಸು ಮಾಡುವ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿತ್ತು.
ಕೇಂದ್ರ ಸರ್ಕಾರ ಅಥವ ಸುಪ್ರೀಂಕೋರ್ಟ್ ಆದೇಶ ನೀಡಿದರೆ ಮಾತ್ರ ಮರು ತನಿಖೆ ನಡೆಸಲಾಗುತ್ತದೆ ಎಂದು ಸಿಬಿಐ ಹೇಳಿತ್ತು. ಈಗ ಸುಪ್ರೀಂಕೋರ್ಟ್ ತನಿಖೆ ಮುದುವರೆಸುವುದಾಗಿ ಹೇಳಿದ್ದು, ಅನುಮತಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications