ಧೈರ್ಯವಿದ್ದರೆ ಈಗ ಇರುವ ರಾಮ ಮಂದಿರ ಕೆಡವಿ: ಸುಬ್ರಮಣಿಯನ್ ಸ್ವಾಮಿ
ಆಯೋಧ್ಯ ರಾಮ ಜನ್ಮಭೂಮಿ ವಿವಾದದ ಅರ್ಜಿದಾರ ಹಾಗೂ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರದಂದು ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ
ಲಕ್ನೋ, ಮಾರ್ಚ್ 22: ಆಯೋಧ್ಯ ರಾಮ ಜನ್ಮಭೂಮಿ ವಿವಾದದ ಅರ್ಜಿದಾರ ಹಾಗೂ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರದಂದು ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೊಸ ಟ್ವೀಟ್ ಮಾಡಿದ್ದಾರೆ.
ಮುಸ್ಲಿಮರನ್ನು ಬೆದರಿಸುವಂತೆ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. ಸರಯೂ ನದಿ ತೀರದಲ್ಲಿ ಬೇಕಾದರೆ ಮಸೀದಿ ಕಟ್ಟಿಕೊಳ್ಳಿ, ಇಲ್ಲದಿದ್ದರೆ ಕಾನೂನಿನ ಮೂಲಕ(ರಾಜ್ಯಸಭೆಯಲ್ಲಿ ಮಸೂದೆ ಮಂಡನೆ ಮಾಡುವ ಮೂಲಕ) ರಾಮ ಮಂದಿರ ನಿರ್ಮಿಸುತ್ತೇವೆ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

1994ರಲ್ಲಿ ಸುಪ್ರೀಂಕೋರ್ಟ್ ಆದೇಶದದಂತೆ ವಿವಾದಿತ ಸ್ಥಳದಲ್ಲಿ ರಾಮ್ ಲಾಲ ಪುಟ್ಟ ಮಂದಿರ ಸ್ಥಾಪನೆಯಾಗಿದೆ. ಧೈರ್ಯವಿದ್ದರೆ ಯಾರಾದರೂ ಅದನ್ನು ಕೆಡವುವ ಸಾಹಸ ಮಾಡಬಹುದು ಎಂದು ಟ್ವೀಟ್ ಮಾಡಿದ್ದಾರೆ.
There is already a temporary Ramlala temple in Ramjanmabhoomi sanctioned by Supreme Court in 1994. Puja on. Can anyone dare to demolish it?
— Subramanian Swamy (@Swamy39) March 21, 2017
ರಾಮ ಜನ್ಮ ಭೂಮಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ಮಂಗಳವಾರದಂದು ಮಹತ್ವದ ತೀರ್ಪು ನೀಡಿತ್ತು. ಕೋರ್ಟ್ ಹೊರಗಡೆ ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ಆದೇಶಿಸಿತ್ತು.

ಮುಸ್ಲಿಮರಿಗೆ ಚಾಲೆಂಜ್ ಹಾಕಿದ ಸ್ವಾಮಿ
ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಮಾಡಿರುವ ಎರಡನೇ ಟ್ವೀಟ್ ತಾಂತ್ರಿಕವಾಗಿ ಸಾಧ್ಯವಿದೆ. ಇನ್ನೆರಡು ವರ್ಷಗಳಲ್ಲಿ ರಾಜ್ಯಸಭೆಯಲ್ಲಿ ಮಸೂದೆ ಮಂಡನೆ, ಸಮ್ಮತಿ, ಕಾನೂನು ಮಾಡಲು ಬೇಕಾದ ಸಂಖ್ಯಾಬಲ ಗಳಿಸಲಿದೆ. ಎಐಎಡಿಎಂಕೆ ಬೆಂಬಲ ಕೂಡಾ ಎನ್ ಡಿಎಗೆ ಸಿಗಲಿದೆ.
|
ಸರಯೂ ನದಿ ಬಳಿ ಮಸೀದಿ
ಸರಯೂ ನದಿ ಬಳಿ ಮಸೀದಿ ನಿರ್ಮಾಣ ಮಾಡಿಕೊಳ್ಳಿ. ಈ ಜಾಗ ಬಿಡಿ. ಇಲ್ಲದಿದ್ದರೆ 2018ರ ನಂತರ ಕಾನೂನಿನ ರೀತಿಯಲ್ಲೇ ಪಡೆದುಕೊಳ್ಳುತ್ತೇವೆ ಎಂದು ರಾಮ ಜನ್ಮ ಭೂಮಿ ವಿವಾದದ ಅರ್ಜಿದಾರರಲ್ಲಿ ಒಬ್ಬರಾದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
|
ಇದು ಬೆದರಿಕೆ ತಂತ್ರ
ಮಹಾಭಾರತ ಹಾಗೂ ಭಗವದ್ಗೀತೆ ಇದೇ ಪಾಠ ಹೇಳಿಕೊಟ್ಟಿದ್ಯಾ ನಿಮಗೆ? ಅಧರ್ಮಕ್ಕೆ ತಲೆ ಬಾಗುತ್ತೀರಾ? ಎಂದು ಸ್ವಾಮಿಗೆ ಪ್ರಶ್ನಿಸಿದ್ದಾರೆ.
|
ಪರಿಸರ ಹಾಳು ಮಾಡಬೇಡಿ
ವೇದಕಾಲೀನ ನದಿ ಸರಯೂ ಬಳಿ ಮಸೀದಿ ನಿರ್ಮಾಣ ಬೇಡ. ಇದರಿಂದ ಪರಿಸರ ಕೂಡಾ ನಾಶವಾಗುತ್ತದೆ.
|
ಸ್ವಾಮಿಗೆ ಚಾಲೆಂಜ್
ನೀವು ಹಾಕಿರುವ ಚಾಲೆಂಜ್ ಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಬಹುದಲ್ಲ. ಈ ರೀತಿ ಬಹಿರಂಗ ಸವಾಲು ಸರಿಯೇ?
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications