ಜುಲೈ1 ರಿಂದ ಜಿಎಸ್ಟಿ ಜಾರಿಗೊಳ್ಳುವುದು ಅನುಮಾನ?
ಭಾರತೀಯ ಅರ್ಥ ವ್ಯವಸ್ಥೆಯ ಮೇಲೆ ಭಾರೀ ದೊಡ್ಡ ಪರಿಣಾಮ ಬೀರಲಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜುಲೈ 1ರಿಂದ ಜಾರಿಗೊಳ್ಳಲಿದ
ನವದೆಹಲಿ, ಜೂನ್ 13: 'ಒಂದೇ ದೇಶ, ಒಂದೇ ತೆರಿಗೆ' ಚಿಂತನೆಯಡಿ ಕೇಂದ್ರ ಸರ್ಕಾರ ಜಾರಿಗೆ ತರಲು ಯತ್ನಿಸುತ್ತಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಈ ಹಿಂದೆ ನಿರ್ಧರಿಸಿದಂತೆ ಜುಲೈ 1ರಿಂದ ಜಾರಿಗೆ ಬರುವುದು ಬಹುತೇಕ ಅನುಮಾನ ಎಂದು ಮೂಲಗಳು ತಿಳಿಸಿವೆ. ಏನಿಲ್ಲವೆಂದರೂ, ಕನಿಷ್ಠ ಮೂರು ತಿಂಗಳ ಮಟ್ಟಿಗೆ ಜಿಎಸ್ ಟಿ ಜಾರಿ ಮುಂದೂಡಲ್ಪಡಲಿದೆ ಎಂದು ಹೇಳಲಾಗುತ್ತಿದೆ.
ಜಿಎಸ್ ಟಿ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರಗಳು ತಮ್ಮ ತೆರಿಗೆ ವ್ಯವಸ್ಥೆಯಲ್ಲಿ ಹಾಗೂ ರಾಜ್ಯಗಳಿಂದ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಕೆಲವಾರು ತೆರಿಗೆ ಮಾರ್ಗಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಬೇಕಿರುವುದ ಸಾಕಷ್ಟು ಮಾರ್ಪಾಟುಗಳನ್ನು ಮಾಡಿಕೊಳ್ಳಬೇಕೆಂದು ಕೆಲ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರವನ್ನು ಕೋರಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ತೆರಿಗೆ ವ್ಯವಸ್ಥೆಯು ಜಾರಿಗೊಳ್ಳುವುದು ಅನುಮಾನ ಎಂದು ಹೇಳಲಾಗಿದೆ.

ವದಂತಿ ತಳ್ಳಿಹಾಕಿದ ಕಾರ್ಯದರ್ಶಿ: ಈ ಬಗೆಯ ಕೆಲ ಸುದ್ದಿಗಳನ್ನು ಆದಾಯ ಇಲಾಖೆ ಕಾರ್ಯದರ್ಶಿ ಹಸ್ಮುಕ್ ಅದಿಯಾ ತಳ್ಳಿ ಹಾಕಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆದಾಯ ತೆರಿಗೆಯ ಹಿರಿಯ ಅಧಿಕಾರಿಗಳು, ವದಂತಿಗಳನ್ನು ಅಲ್ಲಗಳೆದಿದ್ದಾರೆ.
ಜಿಎಸ್ಟಿ ಬಗ್ಗೆ ಗೊಂದಲಗಳು ಉಂಟಾಗಿರುವುದರಿಂದ ಅದರ ಅನುಷ್ಠಾನವನ್ನು ಕನಿಷ್ಠ ಒಂದು ತಿಂಗಳ ಮಟ್ಟಿಗಾದರೂ ಮುಂದೂಡುವಂತೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅಮಿತ್ ಮಿತ್ರಾ ಮನವಿ ಮಾಡಿದ್ದರಾದರೂ ಜುಲೈ 1 ರಿಂದ ಜಿಎಸ್ಟಿ ಕಾರ್ಯರೂಪಕ್ಕೆ ಬರಲಿದೆ ಎಂದು ಇಂದು ಆದಾಯ ಇಲಾಖೆ ಉನ್ನತ ಅಧಿಕಾರಿಗಳು ಟ್ವಿಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications