ಉಗ್ರರ ಹೆಣದ ಲೆಕ್ಕ ಕೇಳುವವರು ಪಾಕಿಸ್ತಾನಕ್ಕೆ ಒಮ್ಮೆ ಹೋಗಿ: ರಾಜ್ ನಾಥ್
ಬಾಲಕೋಟ್ ನ ಜೈಶ್-ಇ-ಮೊಹ್ಮದ್ ತರಬೇತಿ ಕೇಂದ್ರದ ಮೇಲೆ ಭಾರತೀಯ ವಾಯು ಸೇನೆ ನಡೆಸಿದ ದಾಳಿಯಲ್ಲಿ ಎಷ್ಟು ಭಯೋತ್ಪಾದಕರು ಹತ್ಯೆಯಾದರು ಎಂಬ ವಿಚಾರ "ಇಂದಲ್ಲ ನಾಳೆ" ಗೊತ್ತಾಗಲಿದೆ ಎಂದು ಮಂಗಳವಾರ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಹೇಳಿದ್ದಾರೆ.
ಭಾರತವು ಆ ಸ್ಥಳದ ಮೇಲೆ ದಾಳಿ ನಡೆಸುವ ಮುನ್ನ ಮುನ್ನೂರು ಮೊಬೈಲ್ ಫೋನ್ ಗಳು ಅಲ್ಲಿ ಸಕ್ರಿಯವಾಗಿವೆ ಎಂದು ನ್ಯಾಷನಲ್ ಟೆಕ್ನಿಕಲ್ ರೀಸರ್ಚ್ ಆರ್ಗನೈಸೇಷನ್ (ಎನ್ ಟಿಆರ್ ಒ) ತಿಳಿಸಿತ್ತು ಎಂದು ರಾಜ್ ನಾಥ್ ಸಿಂಗ್ ಅವರು ಹೇಳಿದ್ದಾರೆ.
ಎಷ್ಟು ಉಗ್ರರು ದಾಳಿಯಲ್ಲಿ ಸತ್ತರು ಎಂದು ಗೊತ್ತಾಗಬೇಕಿದ್ದರೆ ಕಾಂಗ್ರೆಸ್ ನವರು ಪಾಕಿಸ್ತಾನಕ್ಕೆ ಹೋಗಿ, ಶವಗಳ ಲೆಕ್ಕ ಹಾಕಿಕೊಂಡು ಬರಲಿ ಎಂದು ಸಲಹೆ ಮಾಡಿದ್ದಾರೆ.

ಭಾರತೀಯ ವಾಯು ಸೇನೆ ದಾಳಿಯಲ್ಲಿ ಎಷ್ಟು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಕೆಲವು ನಾಯಕರು ಪ್ರಶ್ನಿಸುತ್ತಿದ್ದಾರೆ. ಇಂದಲ್ಲ ನಾಳೆ ಅದು ಗೊತ್ತಾಗುತ್ತದೆ. ಪಾಕಿಸ್ತಾನ ಮತ್ತು ಅದರ ನಾಯಕರ ಹೃದಯಕ್ಕೆ ಗೊತ್ತು ಎಷ್ಟು ಜನರು ಸತ್ತಿದ್ದಾರೆ ಎಂಬ ಸಂಗತಿ ಎಂದು ರಾಜ್ ನಾಥ್ ಸಿಂಗ್ ಹೇಳಿದ್ದಾರೆ.
ಬಿಎಸ್ ಎಫ್ ನ ಗಡಿ ಯೋಜನೆ ಉದ್ಘಾಟನೆ ಮಾಡಿದ ನಂತರ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಎಷ್ಟು ಜನ ಸತ್ತಿದ್ದಾರೆ, ಎಷ್ಟು ಜನ ಸತ್ತಿದ್ದಾರೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ದಾಳಿ ಆದ ನಂತರ ನಮ್ಮ ವಾಯು ಸೇನೆ ಹೋಗಿ ಒಂದು ಎರಡು ಮೂರು ಅಂತ ಲೆಕ್ಕ ಹಾಕಬೇಕಿತ್ತಾ? ಇದೆಂಥ ಜೋಕ್? ಎಂದು ಪ್ರಶ್ನಿಸಿದ್ದಾರೆ.
ಎನ್ ಟಿಆರ್ ಒ ಬಳಿ ನಿಖರ ವ್ಯವಸ್ಥೆ ಇದೆ. ಬಾಲಕೋಟ್ ನ ಆ ಸ್ಥಳದಲ್ಲಿ ಮುನ್ನೂರು ಮೊಬೈಲ್ ಫೋನ್ ಗಳು ಸಕ್ರಿಯವಾಗಿದ್ದವು ಎಂದಿದ್ದಾರೆ. ಈ ಮೊಬೈಲ್ ಫೋನ್ ಗಳನ್ನು ಮರಗಳು ಬಳಸುತ್ತಿದ್ದವಾ? ನೀವೀಗ (ವಿಪಕ್ಷಗಳು) ಎನ್ ಟಿಆರ್ ಒ ಕೂಡ ನಂಬಲ್ಲವಾ? ಎಂದಿದ್ದಾರೆ.
ಸರಕಾರ ರಚಿಸುವುದಕ್ಕೆ ಮಾತ್ರ ರಾಜಕಾರಣ ಮಾಡಬಾರದು. ದೇಶ ನಿರ್ಮಾಣಕ್ಕೂ ರಾಜಕಾರಣ ಮಾಡಬೇಕು. ಕಾಂಗ್ರೆಸ್ ನ ನನ್ನ ಸ್ನೇಹಿತರು ಅವರಿಗೆ ಸತ್ತವರ ಸಂಖ್ಯೆಯನ್ನು ತಿಳಿಸಬೇಕು ಅನ್ನೋದಾದರೆ, ನೀವು ಪಾಕಿಸ್ತಾನಕ್ಕೆ ಹೋಗಲು ಬಯಸಿದರೆ ಹೋಗಿ, ಲೆಕ್ಕ ಹಾಕಿ ಮತ್ತು ಅಲ್ಲಿ ಜನರನ್ನು ಕೇಳಿ. ನಮ್ಮ ವಾಯು ಸೇನೆಯವರು ಎಷ್ಟು ಜನರನ್ನು ಕೊಂದರು ಎಂದು ತಿಳಿದುಕೊಳ್ಳಿ ಎಂದು ರಾಜ್ ನಾಥ್ ಸಿಂಗ್ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications