ಗುಜರಾತಿನಲ್ಲಿ ಜಾದೂಗಾರರು ಮಾಡಲಿದ್ದಾರಾ ಮೋಡಿ!
ಅಹ್ಮದಾಬಾದ್, ನವೆಂಬರ್ 22 : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಇನ್ನೂ ಪ್ರಚಾರಕ್ಕಿಳಿಯದ ನರೇಂದ್ರ ಮೋದಿಯವರು ಏನು ಮಾಡಲಿದ್ದಾರೋ ಇನ್ನೂ ಖಚಿತವಾಗಿಲ್ಲ, ಆದರೆ, ಜಾದೂಗಾರರು ಮಾತ್ರ ಮತದಾರರ ಮೇಲೆ ಇಂದ್ರಜಾಲ ಬೀಸಲು ರೆಡಿಯಾಗಿದ್ದಾರೆ.
ವಿನೂತನ ವಿಧಾನಗಳ ಮೂಲಕ ಮತದಾರರನ್ನು ಸೆಳೆಯುವುದು ಭಾರತೀಯ ಜನತಾ ಪಕ್ಷದ ತಂತ್ರಗಾರಿಕೆ. ಇದಕ್ಕಾಗಿ ಮಾಂತ್ರಿಕರ ಸೇನೆ ಸಿದ್ಧವಾಗಿದೆ. ಇಂಥ ತಂತ್ರಗಾರಿಕೆ ಫಲ ಕೊಡುತ್ತಾ ಅಥವಾ ಬಿಜೆಪಿಗೆ ತಿರುಗುಬಾಣವಾಗುತ್ತಾ? ಡಿಸೆಂಬರ್ 18ರಂದು, ಸೋಮವಾರ ಉತ್ತರ ಸಿಗಲಿದೆ.
ಬುಧವಾರದಿಂದ ಜಾದೂಗಾರರ ಒಂದು ತಂಡ ಎಲ್ಲ 182 ಕ್ಷೇತ್ರಗಳನ್ನು ಸುತ್ತಲಿದ್ದು, ಮತದಾರರನ್ನು ಉಚಿತವಾಗಿ ರಂಜಿಸಲಿದ್ದಾರೆ. ಜೊತೆಗೆ, ಭಾರತೀಯ ಜನತಾ ಪಕ್ಷದ 'ವಿಕಾಸ'ದ ಸಂದೇಶವನ್ನು ಮತದಾರರಿಗೆ ಮನದಟ್ಟು ಮಾಡಿಕೊಡಲು ಶ್ರಮಿಸಲಿದ್ದಾರೆ.

ಇದಕ್ಕೂ ಮೊದಲು ಬೀದಿ ನಾಟಕ, ಶಾಸ್ತ್ರೀಯ ನೃತ್ಯ, 3ಡಿ ತಂತ್ರಜ್ಞಾನಗಳ ಮೂಲಕ ಮತದಾರರನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸಿದೆ. ಪಾಟೀದಾರ್ ಜನಾಂಗದ ನಾಯಕ ಹಾರ್ದಿಕ್ ಪಟೇಲ್ ಸ್ನೇಹ ಸಂಪಾದಿಸಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸಲು ಪಣ ತೊಟ್ಟಿರುವ ಹಿನ್ನೆಲೆಯಲ್ಲಿ ಬಿಜೆಪಿ ಇಂಥ ತಂತ್ರಗಾರಿಕೆಯನ್ನು ರೂಪಿಸಲೇಬೇಕಿದೆ.
ಮತದಾರರು ಬಿಜೆಪಿಗೆ ಮತ ಹಾಕುವಂತೆ ಮಾಡಲು ಮತ್ತು ಅವರನ್ನು ರಂಜಿಸಲು ಮಾಂತ್ರಿಕರಿಗಾಗಿ ಈಗಾಗಲೆ ಸೂಕ್ತವಾದಂಥ ಸಂಭಾಷಣೆಗಳನ್ನು ರಚಿಸಲಾಗಿದೆ. ಪಕ್ಷದ ಬೆಳವಣಿಗೆ ಮಂತ್ರ ಮತ್ತು ಭರವಸೆಗಳನ್ನು ಮನದಟ್ಟು ಮಾಡಲು ಮಾಂತ್ರಿಕತೆಯ ತಂತ್ರ ಕೆಲಸ ಮಾಡಲಿದೆ ಎಂದು ಬಿಜೆಪಿ ಬಲವಾಗಿ ನಂಬಿದೆ.
ಮಾಂತ್ರಿಕರು ಬುಧವಾರದಿಂದಲೇ ಗುಜರಾತಿ ಹಳ್ಳಿಹಳ್ಳಿಗಳನ್ನು ಸುತ್ತಲಿದ್ದಾರೆ. ಒಳಕಲಹಗಳು, ಕೆಲ ಜಾತಿವಾದಿ ಪಕ್ಷಗಳು ಬೆಂಬಲಿಸದೆ ಇರುವುದು, ಕೆಲ ನಾಯಕರು ಪಕ್ಷಾಂತರ ಮಾಡಿರುವುದರಿಂದ ಜರ್ಜರಿತವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಜಾದೂಗಾರಿಕೆಯಿಂದಾಗಿ ಬಿಜೆಪಿಯನ್ನು ಟೀಕಿಸಲು ಮತ್ತೊಂದು ಮಾತಿನ ಅಸ್ತ್ರ ಸಿಕ್ಕಂತಾಗಿದೆ.
ರಾಹುಲ್ ಗಾಂಧಿಯವರು ಗುಜರಾತಿನ ಊರೂರನ್ನು ಸುತ್ತುತ್ತಿರುವುದರಿಂದ ಬಿಜೆಪಿ ಬೆದರಿದೆ. ಅಸಲಿಗೆ, ನರೇಂದ್ರ ಮೋದಿಯವರ ಬದಲಾಗಿ ಕೇಂದ್ರದಲ್ಲಿ ಡಾ. ಮನಮೋಹನ ಸಿಂಗ್ ಅವರ ಸರಕಾರವಿದ್ದಾಗ ಗುಜರಾತನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಬಿಜೆಪಿಗೆ ಗೊತ್ತಿರುವುದು ರಾಹುಲ್ ಇಮೇಜಿಗೆ ಮಸಿ ಬಳಿಯುವುದು ಮಾತ್ರ ಎಂದು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭರತ್ ಸಿನ್ಹ್ ಸೋಳಂಕಿ ಅವರು ಟೀಕಿಸಿದ್ದಾರೆ.
ಬಿಜೆಪಿ ಪಕ್ಷವೇ ಜಾದೂಗಾರರ ಪಕ್ಷ. ಅವರು 50 ಲಕ್ಷ ಬಡವರಿಗೆ ಮನೆ ಕಟ್ಟಿಸಿ ಕೊಡುತ್ತೇನೆಂದು ವಾಗ್ದಾನ ನೀಡಿದ್ದರು. ಅವರು ಕೇವಲ 2 ಲಕ್ಷ ಜನರಿಗೆ ಮಾತ್ರ ವಸತಿ ಕಲ್ಪಿಸುವಲ್ಲಿ ಸಫಲರಾಗಿದ್ದಾರೆ. ಉಳಿದೆಲ್ಲವನ್ನು ಜಾದೂಗಾರರಂತೆ ಗುಳುಂ ಮಾಡಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
22 ವರ್ಷಗಳ ಬಿಜೆಪಿಯ ಆಡಳಿತದ ನಂತರವೂ, 40 ಕಿ.ಮೀ. ಉದ್ದದ ನರ್ಮದಾ ಉಪನಾಲೆಯ ಕಾಮಗಾರಿ ಇನ್ನೂ ಮುಗಿದಿಲ್ಲ. ಇದು ಗುಜರಾತ್ ರಾಜ್ಯದಲ್ಲಾದರೆ, ಬಿಜೆಪಿ ಆಡಳಿತದಲ್ಲಿ ಕಾಶ್ಮೀರದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿದೆ. ನೂರಾರು ಜವಾನರು ಬಿಜೆಪಿಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭರತ್ ಸಿನ್ಹ್ ಸೋಳಂಕಿ ಅವರು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications