ಲಾಲೂ ಶಿಕ್ಷೆ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ: ತೇಜಸ್ವಿ ಯಾದವ್
ರಾಂಚಿ, ಡಿಸೆಂಬರ್ 24: ಮೇವು ಹಗರಣದ ಎರಡನೇ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಶಿಕ್ಷೆಗೆ ಗುರಿಯಾಗಿರುವುದನ್ನು ತಮ್ಮ ಕುಟುಂಬದ ಮೇಲೆ ನಡೆದ ಸಂಚು ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ. ವಿಶೇಷ ಸಿಬಿಐ ನ್ಯಾಯಾಲಯದ ಆದೇಶದ ವಿರುದ್ಧ ಜಾರ್ಖಂಡ್ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದಿದ್ದಾರೆ.
ತೀರ್ಪಿನ ಬಗ್ಗೆ ಆರ್.ಜೆ.ಡಿ ಆಂತಂಕಗೊಂಡಿಲ್ಲ, ಈ ರೀತಿಯ ಸಂಚಿನ ವಿರುದ್ಧ ಹೋರಾಡಲಾಗುವುದು ಎಂದಿದ್ದಾರೆ.

"ಇದೊಂದು ಲಾಲೂಜೀ ಮತ್ತು ಅವರ ಕುಟುಂಬದ ಮೇಲಿನ ಸಂಚು. ನಾವು ಹೈಕೋರ್ಟ್ ಗೆ ಈ ಸಂಬಂಧ ಮೇಲ್ಮನವಿ ಸಲ್ಲಿಸಲಿದ್ದೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ," ಎಂದು ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
"ಆರ್.ಜೆ.ಡಿ ದುರ್ಬಲ ಪಕ್ಷವಲ್ಲ. ಲಾಲು ಪ್ರಸಾದ್ ಯಾದವ್ ದೋಷಿಯಾಗಿರುವುದರಿಂದ ಪಕ್ಷ ದುರ್ಬಲವಾಗುವುದಿಲ್ಲ. ಎಲ್ಲಾ ಆರ್.ಜೆ.ಡಿ ಕಾರ್ಯಕರ್ತರೂ ನಾಯಕರಿದ್ದಂತೆ. ಲಾಲೂ ಪ್ರಸಾದ್ ಯಾದವ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೂ ನಾವು ಪಕ್ಷದ ವ್ಯವಹಾರಗಳನ್ನು ನಡೆಸುತ್ತೇವೆ," ಎಂದಿದ್ದಾರೆ.
ಇನ್ನು ಜಾರ್ಖಂಡ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೀಪಕ್ ಪ್ರಕಾಶ್ ತೇಜಸ್ವಿ ಯಾದವ್ ವಾದವನ್ನು ತಳ್ಳಿ ಹಾಕಿದ್ದಾರೆ.
ಇದು ಕಾಂಗ್ರೆಸ್ ನ ಸಂಚು ಎಂಬುದನ್ನು ಲಾಲೂ ಪ್ರಸಾದ್ ಯಾದವ್ ಅರ್ಥ ಮಾಡಿಕೊಳ್ಳಬೇಕು. ಇಡೀ ಮೇವು ಹಗರಣ ಬೆಳಕಿಗೆ ಬಂದಿದ್ದು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮತ್ತು ಪ್ರಕರಣದ ತನಿಖೆ ಮತ್ತು ವಿಚಾರಣೆ ನಡೆದಿದ್ದೂ ಕಾಂಗ್ರೆಸ್ ಅವಧಿಯಲ್ಲಿ ಎಂದು ಹೇಳಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications