ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಬಿಡೆವು: ಗೋವಾ ಸಚಿವ
Recommended Video

ಪಣಜಿ, ಡಿಸೆಂಬರ್ 29: 'ಮಹದಾಯಿಯ ಒಂದು ಹನಿ ನೀರನ್ನೂ ನಾವು ಕರ್ನಾಟಕದೊಂದಿಗೆ ಹಂಚಿಕೊಳ್ಳುವುದಿಲ್ಲ' ಎಂದು ಗೋವಾದ ಜಲ ಸಂಪನ್ಮೂಲ ಸಚಿವ ವಿನೋದ್ ಪಾಲ್ಯಂಕರ್ ಗುಡುಗಿದ್ದಾರೆ.
ಮಹದಾಯಿ ಕುರಿತು ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರಿಗೆ ಬರದಿರುವ ಪತ್ರ ಕರ್ನಾಟಕದಲ್ಲಿ ಮಾತ್ರವಲ್ಲದೆ ಗೋವಾ ರಾಜಕೀಯದಲ್ಲಿಯೂ ಸಂಚಲನ ಮೂಡಿಸಿದ್ದು, ಗೋವಾದಲ್ಲಿ ಆಡಳಿತಾರೂಢ ಬಿಜೆಪಿಯ ಮಿತ್ರ ಪಕ್ಷಗಳು ಹಾಗೂ ವಿರೋಧ ಪಕ್ಷ ಕಾಂಗ್ರೆಸ್ ಇದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿವೆ.

ಗೋವಾ ಜಲಸಂಪನ್ಮೂಲ ಸಚಿವ ಪಾಲಿನೇಕರ್ ಅವರು ಮನೋಹರ ಪರಿಕ್ಕರ್ ಅವರು ಬರೆದಿರುವ ಪತ್ರವನ್ನು 'ರಾಜಕೀಯ ಗಿಮಿಕ್' ಎಂದು ಕರೆದಿದ್ದು, ಪರಿಕ್ಕರ್ ಅವರು ರಾಜಕೀಯ ಲಾಭಕ್ಕಾಗಿ ಪತ್ರ ಬರೆದಿದ್ದಾರೆ, ಪತ್ರದ ಬರೆದುದರ ಕುರಿತು ಸಚಿವ ಸಂಪುಟದ ಗಮನಕ್ಕೆ ತಂದಿಲ್ಲ ಎಂದಿದ್ದಾರೆ.
'ಕರ್ನಾಟಕ ಬಿಜೆಪಿ ಅಧ್ಯಕ್ಷರಿಗೆ ಗೋವಾ ಮುಖ್ಯಮಂತ್ರಿ ಬರೆದಿರುವ ಪತ್ರದ ಪ್ರತಿಯನ್ನು ನನಗಂತೂ ಕಳಿಸಿಲ್ಲ, ಆದರೆ ನಾನಂತೂ ನನ್ನ ನಿಲುವು ಸ್ಪಷ್ಟಪಡಿಸುತ್ತಿದ್ದೇನೆ, ನಾವು ಒಂದು ಹನಿ ನೀರನ್ನು ಕೂಡ ಕರ್ನಾಟಕದೊಂದಿಗೆ ಹಂಚಿಕೊಳ್ಳುವುದಿಲ್ಲ' ಎಂದು ಖಡಾಖಂಡಿತವಾಗಿ ಅವರು ಹೇಳಿದರು.
ಮನೋಹರ ಪರಿಕ್ಕರ್ ಅವರು ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರಕ್ಕೆ ಗೋವಾದ ಸಮ್ಮಿಶ್ರ ಸರ್ಕಾರದ ಸದಸ್ಯರಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಕೂಡ ಮನೋಹರ ಪರಿಕ್ಕರ್ ಅವರು ಬರೆದಿರುವ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೋಹರ್ ಅವರ ಈ ನಡೆಯಿಂದಾಗಿ ಸರ್ಕಾರದಲ್ಲಿ ಬಿರುಕು ಮೂಡುವ ಸ್ಥಿತಿ ನಿರ್ಮಾಣವಾಗಿದೆ.
ಇತ್ತ ಕಡೆ ಮಹದಾಯಿ ಹೋರಾಟ ದಿನೇ ದಿನೇ ಜೋರಾಗುತ್ತಿದ್ದು, ಸುಮ್ಮನೇ ಮಲಗಿದ್ದ ಹಾವನ್ನು ಕೆಣಕಿ ಕಚ್ಚಿಸಿಕೊಂಡ ಸ್ಥಿತಿಯಲ್ಲಿ ಯಡಿಯೂರಪ್ಪ ಅವರು ಸಿಲುಕಿದ್ದಾರೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications