ಹಾನಿ ಪರಿಶೀಲನೆ ಬಳಿಕ ಕೇರಳಕ್ಕೆ ಹೆಚ್ಚುವರಿ ಪರಿಹಾರ: ಕೇಂದ್ರದ ಸ್ಪಷ್ಟನೆ
ನವದೆಹಲಿ, ಆಗಸ್ಟ್ 23: ಪ್ರವಾಹ ಪೀಡಿತ ಕೇರಳಕ್ಕೆ ಬಿಡುಗಡೆ ಮಾಡಿರುವ 600 ಕೋಟಿ ರೂ. ತಕ್ಷಣದ ನೆರವಿಗಾಗಿ ಹಂಚಿಕೆ ಮಾಡಿರುವ ನೆರವು ಮಾತ್ರ. ರಾಜ್ಯದಲ್ಲಿ ಉಂಟಾದ ಒಟ್ಟಾರೆ ಹಾನಿಯನ್ನು ಪರಿಶೀಲಿಸಿ ಇನ್ನಷ್ಟು ನೆರವನ್ನು ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ರಾಜ್ಯ ವಿಪತ್ತು ಪರಿಹಾರ ನಿಧಿಯ (ಎಸ್ಡಿಆರ್ಎಫ್) 562.45 ಕೋಟಿ ರೂ. ಜತೆಗೆ 600 ಕೋಟಿ ರೂ. ಮುಂಗಡ ನೆರವು ನೀಡಲಾಗಿದೆ. ಕೇರಳದಂತಹ ಸಾಮಾನ್ಯ ವರ್ಗದ ರಾಜ್ಯಗಳ ಎಸ್ಡಿಆರ್ಎಫ್ ನಿಧಿಗೆ ಕೇಂದ್ರವು 75%ರಷ್ಟು ಕೊಡುಗೆ ನೀಡುತ್ತದೆ.

ಮಳೆಯ ಎರಡನೆಯ ಅವಧಿಯಲ್ಲಿ ಉಂಟಾದ ಪ್ರವಾಹದಿಂದ ಸಂಭವಿಸಿದ ಹಾನಿಗಳ ವಿವರವನ್ನು ಪಿಣರಾಯಿ ವಿಜಯನ್ ಸರ್ಕಾರದಿಂದ ಪಡೆದ ಕೂಡಲೇ ಹೆಚ್ಚುವರಿ ಹಣವನ್ನು ಎನ್ಡಿಆರ್ಎಫ್ ಕಡೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅದು ಸ್ಪಷ್ಟೀಕರಣ ನೀಡಿದೆ.
ಕೇರಳ ಪ್ರವಾಹ ಪರಿಹಾರ ಬಿಡುಗಡೆಗೆ ಕೋರಿ ಜುಲೈ 21ರಂದು ಮೊದಲ ಮನವಿ ರವಾನಿಸಿದಾಗ ಕೇಂದ್ರದ ಸಚಿವಾಲಯಗಳ ತಂಡವು ರಾಜ್ಯಕ್ಕೆ ಆಗಸ್ಟ್ 7-12ರ ಅವಧಿಯಲ್ಲಿ ಭೇಟಿ ನೀಡಿ ಹಾನಿಯ ಪ್ರಮಾಣವನ್ನು ಅಂದಾಜಿಸಿತ್ತು.
ಆದರೆ, ಎರಡನೆಯ ಅವಧಿಯಲ್ಲಿ ಸುರಿದ ಮಳೆ ಭಾರಿ ಪ್ರಮಾಣದ ದುರಂತಕ್ಕೆ ಕಾರಣವಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಪೂರ್ಣಗೊಂಡ ಬಳಿಕ ಉಂಟಾದ ಹಾನಿಯ ಕುರಿತು ಹೆಚ್ಚುವರಿ ಮನವಿ ಸಲ್ಲಿಸುವುದಾಗಿ ಕೇರಳ ಸರ್ಕಾರ ತಿಳಿಸಿದೆ.
ಕೇರಳ ಸರ್ಕಾರದಿಂದ ಎರಡನೆಯ ಮನವಿ ಬಂದ ಬಳಿಕ ಹಾನಿಯ ಪ್ರಮಾಣವನ್ನು ತಿಳಿದುಕೊಳ್ಳಲು ಕೇಂದ್ರದ ತಂಡವನ್ನು ಕಳುಹಿಸಲಾಗುವುದು ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications