ಮಂಗಳಗ್ರಹದಲ್ಲೇ ವಾಸಿಸ್ತಾಳಂತೆ ಈ 19ರ ಬಾಲೆ!
ನವದೆಹಲಿ, ಫೆ. 18: ಮಂಗಳ ಗ್ರಹಕ್ಕೆ ಏಕಮುಖ ಪ್ರಯಾಣ ಎಷ್ಟು ಯಶಸ್ಸು ಗಳಿಸುವುದೋ ಗೊತ್ತಿಲ್ಲ. ಆದರೆ, ಈ ಪ್ರಯಾಣಕ್ಕೆ ಹದಿಹರೆಯದವರಿಂದ ಹಿಡಿದು ಮಧ್ಯವಸ್ಕರವರೆಗೆ ಹಲವರು ತಯಾರಾಗಿದ್ದಾರೆ. ಭಾರತದಿಂದ ಅರ್ಜಿ ಸಲ್ಲಿಸಿದ್ದ 100 ಜನರಲ್ಲಿ ಮೂವರು ಅಂತಿಮ ಆಯ್ಕೆ ಹಂತದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಇವರಲ್ಲೊಬ್ಬರಾದ ಕೇರಳದ ಪಾಲಕ್ಕಾಡ್ ನಿವಾಸಿಯಾಗಿರುವ 19 ವರ್ಷ ವಯಸ್ಸಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶ್ರದ್ಧಾ ಪ್ರಸಾದ್ ಮಂಗಳ ಗ್ರಹದಲ್ಲಿಯೇ ವಾಸಿಸುವ ಕನಸು ಕಾಣುತ್ತಿದ್ದಾರೆ.
ಈ ಪ್ರಯಾಣಕ್ಕೆ ಸುಮಾರು 2.5 ಲಕ್ಷ ಜನ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ನಾನು ಆಯ್ಕೆಯಾಗಿರುವುದು ನನಗೆ ಸಂತಸ ತಂದಿದೆ. ನನ್ನ ಪಾಲಕರು ಮೊದಲು ಆತಂಕಗೊಂಡಿದ್ದರು. ಆದರೆ, ಆಯ್ಕೆ ಪ್ರಕ್ರಿಯೆ ಗಮನಿಸಿದ ಮೇಲೆ ಅವರೂ ಸಂತಸದಿಂದಿದ್ದಾರೆ. [ಮಂಗಳನ ಅಂಗಳಕ್ಕೆ ಮೂವರು ಭಾರತೀಯರು]
ಅಮೃತಾ ವಿಶ್ವವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಶ್ರದ್ಧಾ ತನ್ನ ನಿರ್ಧಾರಕ್ಕೆ ಸ್ನೇಹಿತರೂ ಬೆಂಬಲ ಸೂಚಿಸಿದ್ದಾರೆಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಆಯ್ಕೆಯ ನಾಲ್ಕನೇ ಹಂತದಲ್ಲಿಯೂ ಯಶಸ್ಸು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. [ಮಂಗಳನಲ್ಲಿ ಮೋಡವಿದೆಯಂತೆ]

ನೆದರ್ಲ್ಯಾಂಡ್ ಮೂಲದ ಸ್ವಯಂ ಸೇವಾ ಸಂಸ್ಥೆಯೊಂದು ಮಂಗಳ ಗ್ರಹಕ್ಕೆ ಏಕಮುಖ ಯಾನ ಹಮ್ಮಿಕೊಂಡಿದೆ. ಮಂಗಳ ಗ್ರಹದಲ್ಲಿ ಮಾನವರ ಕಾಲೋನಿ ನಿರ್ಮಿಸುವುದು ಈ ಯೋಜನೆಯ ಉದ್ದೇಶ ಎಂದು ಸಂಸ್ಥೆ ತಿಳಿಸಿದೆ. ಮಂಗಳ ಗ್ರಹಕ್ಕೆ ಏಕಮುಖ ಯಾನಕ್ಕೆ ಆಸಕ್ತರಿಂದ ಆಹ್ವಾನಿಸಿದ್ದ ಸಂಸ್ಥೆ ಅಂತಿಮ ಹಂತದ ಪರೀಕ್ಷೆಗೆ ಆಯ್ಕೆಯಾದವರ ಪಟ್ಟಿಯನ್ನು ಮಂಗಳವಾರವಷ್ಟೇ ಬಿಡುಗಡೆ ಮಾಡಿತ್ತು. [ಮಂಗಳ ಗ್ರಹದ ವಿಡಿಯೋ ನೋಡಿ]
ಭಾರತದಿಂದ ಮೂವರು ನಾಲ್ಕನೇ ಹಾಗೂ ಅಂತಿಮ ಹಂತದ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ. ಕೇರಳದ ಪಾಲಕ್ಕಾಡ್ ನಿವಾಸಿ ಶ್ರದ್ಧಾ ಪ್ರಸಾದ್ (19), ಸೆಂಟ್ರಲ್ ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ವಿಜ್ಞಾನ ವಿಷಯದಲ್ಲಿ ಡಾಕ್ಟರೇಟ್ ವಿದ್ಯಾರ್ಥಿಯಾಗಿರುವ ತನ್ಜೀತ್ಸಿಂಗ್ ಭಾಟಿಯಾ (29) ಹಾಗೂ ದುಬೈನಲ್ಲಿ ವಾಸಿಸುತ್ತಿರುವ ರಿತಿಕಾ ಸಿಂಗ್ (29) ಭಾರತದಿಂದ ಆಯ್ಕೆಯಾದವರು.
ಅರ್ಜಿ ಸಲ್ಲಿಸಿದವರು ಈಗಾಗಲೇ ಆನ್ಲೈನ್ ಸಂದರ್ಶನ, ವ್ಯಕ್ತಿತ್ವ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಎದುರಿಸಿದ್ದಾರೆ. ನಾಲ್ಕನೇ ಹಾಗೂ ಅಂತಿಮ ಸುತ್ತಿನ ಅರ್ಹತಾ ಪರೀಕ್ಷೆಯನ್ನು ಇನ್ನು ಮೇಲಷ್ಟೇ ನಡೆಸಬೇಕಾಗಿದೆ. [ಗಗನಕ್ಕೆ ಹಾರಲಿದ್ದಾನೆ ಭಾರತದ ಮಾನವ]
2024ರಲ್ಲಿ ನಡೆಯಲಿರುವ ಈ ಪ್ರಯಾಣ ನಡೆಸುವ ಯೋಜನೆ ಇದೆ. ಮಂಗಳಗ್ರಹಕ್ಕೆ 50 ಪುರುಷರು ಹಾಗೂ 50 ಮಹಿಳೆಯರು ಪಯಣ ಬೆಳೆಸಲಿದ್ದಾರೆ. ಅಮೆರಿಕದಿಂದ 39, ಯುರೋಪ್ನಿಂದ 31, ಏಷ್ಯಾದಿಂದ 16, ಆಫ್ರಿಕಾದಿಂದ 7 ಹಾಗೂ ಒಷೇನಿಯಾದಿಂದ 7 ಜನ ಪ್ರಯಾಣ ಬೆಳೆಸುವ ನಿರೀಕ್ಷೆ ಇದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications