ರಾಷ್ಟ್ರಪತಿ ಚುನಾವಣೆ: ಶಿವಸೇನೆ ಸತತ ಮೂರನೇ ಬಾರಿ ಬಿಜೆಪಿಗೆ ಕೈಕೊಡುತ್ತಾ?
ಕಳೆದೆರಡು ರಾಷ್ಟ್ರಪತಿ ಚುನಾವಣೆಗಳಲ್ಲಿ ಬಿಜೆಪಿ ಕಣಕ್ಕಿಳಿಸಿದ್ದ ಅಭ್ಯರ್ಥಿಗೆ, ಬಿಜೆಪಿಯ ಮಿತ್ರ ಪಕ್ಷವಾದ ಶಿವಸೇನೆ ಬೆಂಬಲಿಸಿರಲಿಲ್ಲ. ಹಾಗಾಗಿ, ಈ ಬಾರಿಯ ರಾಷ್ಟ್ರಪತಿ ಚುನಾವಣೆ ವೇಳೆ ಅದು ಬಿಜೆಪಿಗೆ ವಿರುದ್ಧವಾಗಿಯೇ ನಡೆದುಕೊಳ್ಳುತ್ತದೆಯೇ?
ನವದೆಹಲಿ, ಜೂನ್ 9: ರಾಷ್ಟ್ರಪತಿ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮುಂದಿನ ತಿಂಗಳ 20ರಂದು ಭಾರತವು ಹೊಸ ರಾಷ್ಟ್ರಪತಿಯನ್ನು ನೋಡಲಿದೆ.
ಎಲ್ಲಾ ಪಕ್ಷಗಳಂತೆ ಬಿಜೆಪಿಯೂ ರಾಷ್ಟ್ರಪತಿ ಚುನಾವಣೆಗೆ ತನ್ನ ಮಿತ್ರಪಕ್ಷಗಳೊಂದಿಗೆ ಚುನಾವಣಾ ಕಾರ್ಯತಂತ್ರ ರೂಪಿಸುತ್ತಿದೆ. ಆದರೆ, ಬಿಜೆಪಿಯ ಮುಂದಾಳತ್ವದಲ್ಲಿ ರೂಪಿತಗೊಂಡಿರುವ ಎನ್ ಡಿಎ ಮಿತ್ರ ಪಕ್ಷವಾದ ಶಿವಸೇನೆ, ಸತತ ಮೂರನೇ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಆಯ್ಕೆಯ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಿಲ್ಲವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ.

ಹೌದು. ಇಂಥದ್ದೊಂದು ಪ್ರಶ್ನೆ ಕಾಡಲೂ ಕಾರಣವಿದೆ. ಈ ಹಿಂದೆ ನಡೆದ ಎರಡು ರಾಷ್ಟ್ರಪತಿ ಚುನಾವಣೆಗಳಲ್ಲಿ ಎನ್ ಡಿಎ ವಲಯದ ಪ್ರಭಾವಿ ಪಕ್ಷವಾಗಿದ್ದರೂ, ಅದು ಬಿಜೆಪಿಯು ಚುನಾವಣಾ ಕಣಕ್ಕಿಳಿಸಿದ್ದ ಅಭ್ಯರ್ಥಿಯನ್ನು ಬಿಟ್ಟು ವಿರೋಧ ಪಕ್ಷಗಳ ಅಭ್ಯರ್ಥಿಗೆ ಮತ ಹಾಕಿ, ಅವರು ಗೆಲ್ಲುವಲ್ಲಿ ತನ್ನದೂ ಒಂದು ಕಾಣಿಕೆ ಸಲ್ಲಿಸಿದೆ.
2007ರಲ್ಲಿ ನಡೆದಿದ್ದ ರಾಷ್ಟ್ರಪತಿ ಚುನಾವಣೆ ವೇಳೆ ಪ್ರತಿಭಾ ಪಾಟೀಲ್ ಅವರನ್ನು ಶಿವಸೇನೆ ಬೆಂಬಲಿಸಿತ್ತು. 2012ರಲ್ಲಿ ನಡೆದಿದ್ದ ಚುನಾವಣೆ ವೇಳೆ ಅದು ಪ್ರಣಬ್ ಮುಖರ್ಜಿಯವರನ್ನು ಬೆಂಬಲಿಸಿತ್ತು. ಈ ಇಬ್ಬರೂ ಆಗ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು.
ಆ ಎರಡೂ ಚುನಾವಣೆಗಳಲ್ಲಿ ವಿರೋಧಿ ವಲಯದ ಅಭ್ಯರ್ಥಿಯನ್ನು ಬೆಂಬಲಿಸಿದ್ದ ಶಿವಸೇನೆ ಈಗ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲಕಾರಿ. ಅಲ್ಲದೆ, ಈ ಬಾರಿಯೂ ತಾನು ಸ್ವತಂತ್ರವಾಗಿ ಆಲೋಚಿಸಿ, ಅವಲೋಕಿಸಿ ತನಗೆ ಸೂಕ್ತ ಎನಿಸುವವರಿಗೇ ಮತ ಹಾಕುವುದಾಗಿ ಶಿವಸೇನೆ ಹೇಳಿರುವುದು ಬಿಜೆಪಿಗೆ ಮತ್ತೊಮ್ಮೆ ಇರುಸು ಮುರುಸು ತಂದಿರುವುದಂತೂ ಸ್ಪಷ್ಟ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications