ಇ ಅಹ್ಮದ್ ಸಾವು : ಬಜೆಟ್ ಮಂಡನೆ ಮುಂದೂಡಿಕೆ ಇಲ್ಲ
ನವದೆಹಲಿ, ಫೆಬ್ರವರಿ 01 : ಕೇರಳದ ಸಂಸದ ಇ ಅಹ್ಮದ್ ಅವರು ಹಠಾತ್ ಆಗಿ ನಿಧನ ಹೊಂದಿರುವುದರಿಂದ, ಅವರ ಗೌರವಾರ್ಥವಾಗಿ ಬಜೆಟ್ ಮಂಡನೆಯನ್ನು ಮುಂದೂಡಲಾಗುವುದಾ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ.
ಆದರೆ, ಹಣಕಾಸು ಸಚಿವಾಲಯದಿಂದ ಬಂದಿರುವ ಮಾಹಿತಿಯ ಪ್ರಕಾರ, ಬಜೆಟ್ ಮಂಡನೆಯನ್ನು ಮುಂದೂಡಲಾಗುವುದಿಲ್ಲ. ಬಜೆಟ್ ಮಂಡನೆಗೆ ಮೊದಲು ಅಥವಾ ಮಂಡನೆಯ ನಂತರ ಅಹ್ಮದ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.
ಆದರೆ, ಅಂತಿಮ ನಿರ್ಧಾರವನ್ನು ಲೋಕಸಭಾಧ್ಯಕ್ಷ ಅವರು ತೆಗೆದುಕೊಳ್ಳಲಿದ್ದಾರೆ. ಅಹ್ಮದ್ ನಿಧನದಿಂದ ಬಜೆಟ್ ಅನ್ನು ಒಂದು ದಿನ ಮುಂದೂಡಲಾಗುವುದು ಎಂಬ ಮಾತುಗಳು ಸಂಸತ್ ಅಂಗಳದಲ್ಲಿ ಬಲವಾಗಿ ಕೇಳಿಬರುತ್ತಿದ್ದವು.

ಹಾಲಿ ಸಂಸದ ನಿಧನರಾದಾಗ ಸದನವನ್ನು ಮುಂದೂಡುವುದು ಸಂಪ್ರದಾಯ. ಆ ದಿನ ಶ್ರದ್ಧಾಂಜಲಿ ಸಲ್ಲಿಸಲು ಮಾತ್ರ ಮೀಸಲಾಗಿಟ್ಟಿರುತ್ತದೆ. ಆದರೆ, ಬಜೆಟ್ ಮಂಡನೆ ಅತ್ಯಂತ ಪ್ರಮುಖವಾಗಿರುವುದರಿಂದ ಬಜೆಟ್ ಮಂಡನೆ ಮುಂದೂಡಿಕೆ ಸಾಧುವಲ್ಲ ಎಂದಿದ್ದಾರೆ ಹಣಕಾಸು ಮಂತ್ರಾಲಯದ ರಾಜ್ಯ ಸಚಿವ ಸಂತೋಷ್ ಗಂಗವಾರ್.
ಬಜೆಟ್ ಅಧಿವೇಶನ ಬೆಳಿಗ್ಗೆ 10 ಗಂಟೆಗೆ ಶುರುವಾಗಲಿದೆ. ನಂತರವಷ್ಟೇ ಬಜೆಟ್ ಮಂಡನೆಯ ಬಗ್ಗೆ ತಿಳಿದುಬರಲಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications