ತಾನೇ ಕೆಲಸ ಮಾಡಿದ ಸಿನಿಮಾದ ಕತೆಯಂತೆ ಆಗಿದೆ ಮಗನ ಬದುಕು
Recommended Video

ಚೆನ್ನೈ, ಫೆಬ್ರವರಿ 27: ತಮಿಳು ಸಿನಿಮಾ ನಿರ್ದೇಶಕ ಮಣಿರತ್ನಂ ಅವರು 2017 ರಲ್ಲಿ ಒಂದು ಸಿನಿಮಾ ಮಾಡಿದ್ದರು, 'ಕಾಟ್ರು ವಿಲೆಯಾಡಿ' ಎಂದು ಅದರ ಹೆಸರು. ಆ ಚಿತ್ರಕ್ಕೂ ಇಂದು ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಅವರು ಪಾಕ್ ಸೈನ್ಯಕ್ಕೆ ಸೆರೆ ಸಿಕ್ಕಿರುವುದಕ್ಕೂ ಮನಕಲುಕುವ ಸಂಬಂಧವೊಂದಿದೆ.
ಆ ಸಿನಿಮಾದಲ್ಲಿಯೂ ಸಹ ನಾಯಕ ಏರ್ ವಿಂಗ್ ಕಮಾಂಡರ್ ಆಗಿರುತ್ತಾನೆ ಮತ್ತು ಪಾಕಿಸ್ತಾನದ ಸೈನ್ಯಕ್ಕೆ ಸೆರೆಸಿಕ್ಕುತ್ತಾನೆ. ಇಷ್ಟೆ ಆಗಿದ್ದರೆ ಇದು ದೊಡ್ಡ ವಿಷಯವಲ್ಲ. ಆದರೆ ಆ ಸಿನಿಮಾದ ಕತೆಗೆ ಸಹಾಯ ಮಾಡಿದವರು ಇಂದು ಪಾಕ್ ಸೇನೆಯ ಬಂಧನದಲ್ಲಿರುವ ಅಭಿನಂದನ್ ಅವರ ತಂದೆಯೇ!
ಹೌದು, ಪಾಕ್ ಸೇನೆಗೆ ಸೆರೆ ಸಿಕ್ಕಿರುವ ಅಭಿನಂದನ್ ಅವರ ತಂದೆ ವಾರ್ತಮನ್ ಅವರು ಏರ್ ಮಾರ್ಷಲ್ ಕಾರ್ಯ ನಿರ್ವಹಿಸಿದವರು. ಅವರು 'ಕಾಟ್ರು ವಿಲೆಯಾಡು' ಸಿನಿಮಾದ ಕತೆಗೆ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.

ಅವರು ಸಹಾಯ ಮಾಡಿದ ಸಿನಿಮಾದ ಕತೆಯ ನಾಯಕನ ಪರಿಸ್ಥಿತಿಯಲ್ಲಿ ಇಂದು ಸ್ವತಃ ತಮ್ಮ ಮಗ ಇದ್ದಾನೆ ಆದರೆ ಅದು ಸಿನಿಮಾ, ಅಲ್ಲಿ ನಾಯಕ ತಪ್ಪಿಸಿಕೊಂಡು ಬರುತ್ತಾನೆ ಆದರೆ ಇದು ನಿಜ ಜೀವನ. ಇಲ್ಲಿ 'ಹಿರೋಯಿಸಂ'ಗೆ ಅವಕಾಶ ಕಡಿಮೆ.
ಅಭಿನಂದನ್ ಅವರ ತಂದೆ ವಾರ್ತಮನ್ ಅವರು ಭಾರತೀಯ ವಾಯು ಸೇನೆಯಲ್ಲಿ ಬಹುಕಾಲ ಸೇವೆ ಸಲ್ಲಿಸಿದವರು. ಏರ್ ಮಾರ್ಷಲ್ ಅಂತಹಾ ಉನ್ನತ ಹುದ್ದೆಗಳನ್ನು ನಿಭಾಯಿಸಿ ನಿವೃತ್ತರಾಗಿದ್ದಾರೆ.
ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ ಅವರಿಗೆ ಸೇನೆಯ ನಿಷ್ಠೆ ಕರ್ತವ್ಯಪ್ರಜ್ಞೆ, ತ್ಯಾಗ, ಬಲಿದಾನಗಳ ಅರಿವು ಇದೆ. ಆದರೆ ತಮ್ಮ ಕರುಳ ಕುಡಿ ಪಾಕ್ನಲ್ಲಿ ಭಯದ ನೆರಳಲ್ಲಿ ಒದ್ದಾಡುತ್ತಿರುವುದು ಹಿರಿಯ ಜೀವಕ್ಕೆ ಅಪಾರ ನೋವು ತಂದಿರಲು ಸಾಕು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications