Parliament Winter Session: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ: ಮಾಧ್ಯಮಗಳಿಗೆ ಮೋದಿ ಮಾಹಿತಿ
ನವದೆಹಲಿ, ಡಿಸೆಂಬರ್ 01: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು (ಸೋಮವಾರ) ಆರಂಭವಾಗಲಿದೆ. ಈ ಅಧಿವೇಶನಕ್ಕೆ ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ತಯಾರಿ ನಡೆಸಿದ್ದು, ವಿಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಯನ್ನು ತಮ್ಮ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದರೆ, ಆಡಳಿತ ಪಕ್ಷವು ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಳಸಲಿದೆ ಎಂದು ನೀರಿಕ್ಷಿಸಲಾಗಿದೆ.
ಡಿಸೆಂಬರ್ 1 ರಂದು (ಸೋಮವಾರ) ಬೆಳಿಗ್ಗೆ 10:00 ಗಂಟೆಗೆ ಹದಿನೆಂಟನೇ ಲೋಕಸಭೆಯ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾನ್ಯತೆ ಪಡೆದ ಮಾಧ್ಯಮ ಪ್ರತಿನಿಧಿಗಳಿಗೆ ಸಂಸತ್ ಭವನದ ಹನ್ಸ್ ದ್ವಾರದಲ್ಲಿ ಮಾಹಿತಿ ನೀಡಲಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1 ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 19 ರವರೆಗೆ ನಡೆಯಲಿದೆ.

ಮೂಲಗಳ ಪ್ರಕಾರ, ಸಂಸತ್ತು ಹಲವಾರು ಶಾಸಕಾಂಗ ಮತ್ತು ಹಣಕಾಸು ವ್ಯವಹಾರಗಳನ್ನು ಕೈಗೆತ್ತಿಕೊಳ್ಳಲು ಸಜ್ಜಾಗಿದ್ದು, ರಾಷ್ಟ್ರಪತಿಗಳು ಆರೋಗ್ಯ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, 2025, ಮಣಿಪುರ ಸರಕು ಮತ್ತು ಸೇವಾ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ 2025, ಮತ್ತು ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ಸೇರಿದಂತೆ ಪ್ರಮುಖ ಮಸೂದೆಗಳನ್ನು ಪರಿಚಯಿಸಲು ಶಿಫಾರಸು ಮಾಡುತ್ತಾರೆ ಎನ್ನಲಾಗಿದೆ.
ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಪಶ್ಚಿಮ ಬಂಗಾಳದಲ್ಲಿ ನಡೆಸಲು ಉದ್ದೇಶಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಪ್ರತಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿಯಲಿವೆ. ಪಶ್ಚಿಮ ಬಂಗಾಳದಲ್ಲಿ ಓರ್ವ ಚುನಾವಣಾಧಿಕಾರಿಯ ಸಾವು, ಸಂಸತ್ತಿನಲ್ಲಿ ಪ್ರತಿಧ್ವನಿಸಲಿರುವುದು ನಿಶ್ಚಿತವಾಗಿದೆ. ಅದರಲ್ಲೂ ಪ್ರಮುಖವಾಗಿ ಟಿಎಂಸಿ ಈ ಪ್ರಕರಣದ ಬಗ್ಗೆ ಏರು ಧ್ವನಿಯಲ್ಲಿ ಮಾತನಾಡಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications