ಮೊದಲು ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದು ಜಾಣತನ; ICMR
ನವದೆಹಲಿ, ಜುಲೈ 21: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತಗ್ಗುತ್ತಿದ್ದು, ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಡುವೆ, ಪ್ರೌಢ ಶಾಲೆಗಳನ್ನು ತೆರೆಯುವುದಕ್ಕಿಂತ ಮೊದಲು ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದು ಸೂಕ್ತ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಸಲಹೆ ನೀಡಿದೆ.
ಈ ಕುರಿತು ಮಾತನಾಡಿದ ಐಸಿಎಂಆರ್ನ ಮಹಾನಿರ್ದೇಶಕ ಡಾ. ಬಲರಾಂ ಭಾರ್ಗವ್, "ವಯಸ್ಕರಿಗಿಂತ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುವುದು ಕಂಡುಬಂದಿದೆ. ಮಕ್ಕಳಲ್ಲಿ ಸೋಂಕು ತಗುಲಿದರೂ ಅದರ ವಿರುದ್ಧ ಹೋರಾಟ ಮಾಡಲು ಅವರ ದೇಹದಲ್ಲಿ ಪ್ರತಿಕಾಯಗಳಿವೆ. ಕೆಲವು ದೇಶಗಳು ಕೊರೊನಾ ಸೋಂಕು ಹೆಚ್ಚಾಗಿದ್ದ ಸಮಯದಲ್ಲಿ ಕೂಡ ಪ್ರಾಥಮಿಕ ಶಾಲೆಗಳನ್ನು ಮುಚ್ಚಿರಲಿಲ್ಲ" ಎಂದು ಹೇಳಿದರು.

"ಇದೀಗ ದೇಶದಲ್ಲಿಯೂ ಶಾಲೆಗಳನ್ನು ತೆರೆಯುವ ಕುರಿತು ಆಲೋಚಿಸಬೇಕಿದೆ. ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆದು ಆನಂತರ ಪ್ರೌಢಶಾಲೆಗಳನ್ನು ತೆರೆಯುವುದು ಜಾಣತನ ಎನಿಸುತ್ತದೆ. ಆದರೆ ಶಾಲೆಯ ವಾಹನದ ಚಾಲಕನಿಂದ ಹಿಡಿದು ಶಿಕ್ಷಕರು, ಇನ್ನಿತರ ಬೋಧಕೇತರ ಸಿಬ್ಬಂದಿಯೂ ಲಸಿಕೆ ಪಡೆದಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು" ಎಂದು ಹೇಳಿದ್ದಾರೆ.
ಮಂಗಳವಾರ ಈ ಕುರಿತು ದೆಹಲಿಯ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಅವರು ಕೂಡ ಸಲಹೆ ನೀಡಿದ್ದರು. "ಸೋಂಕಿನ ಪ್ರಮಾಣ ಕಡಿಮೆಯಿರುವ ಪ್ರದೇಶಗಳಲ್ಲಿ ಶಾಲೆಗಳನ್ನು ಆರಂಭಿಸಿದರೆ ಯಾವುದೇ ತೊಂದರೆ ಇಲ್ಲ ಎಂದು ನಾನು ಭಾವಿಸುತ್ತೇನೆ. ಅಂಥ ಕಡೆಗಳಲ್ಲಿ ಶಾಲೆಗಳನ್ನು ತೆರೆಯಬೇಕಿದೆ. 5%ಗೂ ಕಡಿಮೆ ಪಾಸಿಟಿವಿಟಿ ದರವಿರುವ ಕಡೆಗಳಲ್ಲಿ ಶಾಲೆಗಳನ್ನು ತೆರೆಯಲು ಹಂತಹಂತವಾಗಿ ಯೋಜನೆಗಳನ್ನು ರೂಪಿಸುವತ್ತ ಸರ್ಕಾರ ಯೋಜನೆ ರೂಪಿಸಬೇಕಿದೆ" ಎಂದು ಹೇಳಿದ್ದರು.
ಈಗ ಶಾಲೆಗಳನ್ನು ತೆರೆದು ಮಕ್ಕಳ ಕಲಿಕೆಗೆ ಅವಕಾಶ ಮಾಡಿಕೊಡಲೇಬೇಕಿದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅತಿ ಮುಖ್ಯವಾದ್ದರಿಂದ ಅವರಿಗೆ ಶೈಕ್ಷಣಿಕ ಜೀವನವನ್ನು ಕಟ್ಟಿಕೊಡಬೇಕಾದ್ದು ನಮ್ಮ ಜವಾಬ್ದಾರಿಯಾಗಿದೆ. ಜೊತೆಗೆ ಇಂಟರ್ನೆಟ್ ಲಭ್ಯತೆಯ ಅಸಮಾನತೆಯನ್ನೂ ಕೊನೆಗಾಣಿಸಬೇಕಿದೆ ಎಂದು ಹೇಳಿದ್ದರು.
ಭಾರತದಲ್ಲಿ ಮಕ್ಕಳು ಈಗಾಗಲೇ ಕೊರೊನಾ ವೈರಸ್ಗೆ ಒಡ್ಡಿಕೊಂಡಿದ್ದಾರೆ ಹಾಗೂ ಅವರಲ್ಲಿ ಅನೇಕರಿಗೆ ನೈಸರ್ಗಿಕವಾಗಿ ರೋಗನಿರೋಧಕ ಶಕ್ತಿ ಅಭಿವೃದ್ಧಿಯಾಗಿದೆ. ಹೀಗಾಗಿ ಭಾರತದಲ್ಲಿ ದೊಡ್ಡವರಿಗೆ ಹೋಲಿಸಿದರೆ ಮಕ್ಕಳಲ್ಲಿ ಸೆರೊ ಪಾಸಿಟಿವಿಟಿ ದರ ಹೆಚ್ಚಾಗಿದೆ ಎಂಬುದನ್ನು ಸಮೀಕ್ಷೆಗಳು ಕೂಡ ಸಾಕ್ಷೀಕರಿಸಿವೆ. ಶೀಘ್ರವೇ ಶಾಲೆಗಳನ್ನು ಪುನರಾರಂಭಿಸುವ ಕುರಿತು ಆಲೋಚಿಸಬೇಕು ಎಂದು ತಿಳಿಸಿದ್ದರು.
ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಕೊರೊನಾ ಕಾರಣವಾಗಿ ಮೊದಲ ಬಾರಿ ದೇಶಾದ್ಯಂತ ಲಾಕ್ಡೌನ್ ಹೇರಿದ ಸಂದರ್ಭ ಶಾಲೆಗಳನ್ನು ಮುಚ್ಚಲಾಗಿತ್ತು. ಆನಂತರ ಕೊರೊನಾ ಹರಡುವಿಕೆ ತಗ್ಗಿಸಲು, ಶಾಲೆಗಳನ್ನು ತೆರೆಯದೇ ಆನ್ಲೈನ್ ಪರ್ಯಾಯ ಆಯ್ಕೆಯಲ್ಲಿ ಶಿಕ್ಷಣ ನೀಡಲು ಆರಂಭಿಸಲಾಯಿತು.
-
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications