Narendra Modi: ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ‘ತಲಾಖ್’ ಶಾಕ್!
ನವದೆಹಲಿ: ಇನ್ನೇನು ಲೋಕಸಭೆ ಚುನಾವಣೆ ಬಂದೇ ಬಿಡ್ತು. ಲೋಕಸಭೆ ಚುನಾವಣೆಗೆ ಇನ್ನೂ 10 ತಿಂಗಳು ಬಾಕಿ ಇರುವ ಸಂದರ್ಭದಲ್ಲೇ ಬಿಜೆಪಿ ಹೊಸ ಅಸ್ತ್ರಗಳನ್ನು ಹೂಡುತ್ತಿದೆ. ವಿಪಕ್ಷಗಳ ತಂತ್ರಕ್ಕೆ ಬಿಜೆಪಿ ರಣತಂತ್ರ ರೂಪಿಸುತ್ತಿದ್ದು, ಅದರಲ್ಲೂ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ 'ತಲಾಖ್' ಶಾಕ್ ನೀಡಿದ್ದಾರೆ. ಹಾಗಾದರೆ ಏನಿದು 'ತಲಾಖ್' ಶಾಕ್?
ಅಂದಹಾಗೆ ಲೋಕಸಭೆ ಚುನಾವಣೆಗೆ ನಾಯಕರನ್ನು ಸಜ್ಜುಗೊಳಿಸುತ್ತಿರುವ ಬಿಜೆಪಿ ಇದೀಗ ಹೊಸ ಹೊಸ ಪ್ಲಾನ್ ಮಾಡುತ್ತಿದೆ. ಈ ಪೈಕಿ ಪ್ರಧಾನಿ ಮೋದಿ ಅವರೇ ನೇರವಾಗಿ ತಮ್ಮ ಪಕ್ಷದ, ವಿವಿಧ ಭಾಗಗಳ ಸಂಸದರನ್ನು ಹಾಗೂ ಪ್ರಮುಖ ಮುಖಂಡರನ್ನು ಭೇಟಿ ಮಾಡಿ ಸಭೆ ನಡೆಸುತ್ತಿದ್ದಾರೆ. ಹೀಗೆ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ನ ಬಿಜೆಪಿ ನೇತೃತ್ವದ ಎನ್ಡಿಎ ಸಂಸದರ ಸಭೆಯಲ್ಲಿ ಪಿಎಂ ಮೋದಿ ಹೊಸ ಅಸ್ತ್ರ ಪ್ರಯೋಗಿಸಿದ್ದಾರೆ. ಈ ಅಸ್ತ್ರ ವಿರೋಧ ಪಕ್ಷಗಳ ಒಕ್ಕೂಟಕ್ಕೆ ದೊಡ್ಡ ಆಘಾತ ನೀಡುವ ಮುನ್ಸೂಚನೆ ಕೊಟ್ಟಂತಿದೆ.

'ತಲಾಖ್' ಅಸ್ತ್ರ ತ್ವರಿತ ಪ್ರಯೋಗ!
ಅಷ್ಟಕ್ಕೂ ಎನ್ಡಿಎ ಸರ್ಕಾರದ ಅವಧಿಯಲ್ಲಿ ಅಂದರೆ ಪ್ರಧಾನಿ ಮೋದಿ ಅವರ ಸರ್ಕಾರ
ತ್ರಿವಳಿ ತಲಾಖ್ ನಿಷೇಧಿಸಲು ಕ್ರಮವನ್ನು ಕೈಗೊಂಡಿತ್ತು. ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆಯನ್ನ 2019ರಲ್ಲಿ ಸಂಸತ್ತು ಅಂಗೀಕರಿಸಿತು, ಹೀಗೆ ತ್ವರಿತ ತ್ರಿವಳಿ ತಲಾಖ್ ಅಭ್ಯಾಸವನ್ನು ಕಾನೂನುಬಾಹಿರ ಎಂದು ಘೋಷಿಸುವ ಜೊತೆಗೆ ಪತಿಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನೂ ನೀಡಲಾಗಿತ್ತು. ಈಗ ಇದೇ ಅಸ್ತ್ರವನ್ನು ಹಿಡಿದು ಮುಂಬರುವ ಲೋಕಸಭೆಯಲ್ಲಿ ಹೊಸ ಗೇಮ್ ಪ್ಲ್ಯಾನ್ ರೂಪಿಸಿದೆ. ಖುದ್ದು ಪ್ರಧಾನಿ ಮೋದಿ ಅವರೇ ಈ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ ಅನ್ನೋ ಮಾತು ಹರಿದಾಡ್ತಿದೆ.
ಪ್ರಧಾನಿ ಮೋದಿ ಸಲಹೆ ಏನು?
ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ನ ಬಿಜೆಪಿ ನೇತೃತ್ವದ ಎನ್ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡುವಾಗ, ಪ್ರಮುಖವಾಗಿ 'ತಲಾಖ್' ವಿಚಾರ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ತಮ್ಮ ಸರ್ಕಾರದ ನಿರ್ಧಾರವು ಮುಸ್ಲಿಂ ಮಹಿಳೆಯರ ಸುರಕ್ಷತೆಯ ಪ್ರಜ್ಞೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಲಾಖ್ ವಿಚಾರವನ್ನ ಮುಂಬರುವ ರಕ್ಷಾ ಬಂಧನದ ಸಮಯದಲ್ಲಿ ಫಲಾನುಭವಿಗಳಿಗೆ ತಲುಪಿಸಲು ಸಲಹೆಯನ್ನ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಮುಸ್ಲಿಂ ಮಹಿಳೆಯರಿಗಾಗಿ ತಮ್ಮ ಸರ್ಕಾರದ ಸುಧಾರಣಾ ಕ್ರಮಗಳನ್ನು ಮೋದಿ ಆಗಾಗ ಪ್ರತಿಪಾದಿಸುತ್ತಲೇ ಬಂದಿದ್ದಾರೆ ಎಂಬುದು ಗಮನಾರ್ಹ.

'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪ್ರಸ್ತಾಪ
ಅಂದಹಾಗೆ ಇತ್ತೀಚೆಗೆ ತಮ್ಮ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪ್ರಮಖವಾದ ವಿಚಾರ ಪ್ರಸ್ತಾಪಿಸಿದ್ದರು ಪ್ರಧಾನಿ. ಈ ವರ್ಷ 4,000ಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರು 'ಮೆಹ್ರಮ್' ಇಲ್ಲದೆ ಹಜ್ ಯಾತ್ರೆಗೆ ತೆರಳಿರುವುದು 'ದೊಡ್ಡ ಪರಿವರ್ತನೆ' ಎಂದಿದ್ದರು. ತಮ್ಮ ಸರ್ಕಾರ ಕಳೆದ ಕೆಲ ವರ್ಷದಿಂದ ತಂದ ಬದಲಾವಣೆಯಿಂದ ಹೆಚ್ಚು ಜನರು ವಾರ್ಷಿಕ ತೀರ್ಥಯಾತ್ರೆಗೆ ಹೋಗಲು ಅವಕಾಶ ಪಡೆಯುತ್ತಿದ್ದಾರೆಂಬ ವಿಚಾರವನ್ನ ಪಿಎಂ ಮೋದಿ ಪ್ರತಿಪಾದಿಸಿದ್ದರು.
'ಇಂಡಿಯಾ' ವಿರುದ್ಧ ತೀವ್ರ ವಾಗ್ದಾಳಿ!
ಅಷ್ಟಕ್ಕೂ ಸಭೆಯಲ್ಲಿ ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ' ವಿರುದ್ಧ ಕೂಡ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಯುಪಿಎ ಹಗರಣಗಳ ಸುಳಿಯಲ್ಲಿ ಸಿಲುಕಿದ್ದ ಕಾರಣದಿಂದ 'ಇಂಡಿಯಾ' ಎಂದು ಹೆಸರು ಬದಲಾಯಿಸಿಕೊಂಡಿದೆ. ಆದರೆ ಜನ ಇದನ್ನು ಎಂದಿಗೂ ಒಪ್ಪಿಕೊಳ್ಳಲ್ಲ ಎನ್ನುವ ಮೂಲಕ ಮತ್ತೊಂದು ಅಸ್ತ್ರವನ್ನೂ ಪ್ರಧಾನಿ ಮೋದಿ ಸಭೆಯಲ್ಲಿ ಪ್ರಯೋಗಿಸಿದ್ದಾರೆ. ಆಡಳಿತಾರೂಢ ಮೈತ್ರಿಕೂಟ ಸಮಾಜ ಮತ್ತು ದೇಶಕ್ಕೆ ಸೇವೆ ಸಲ್ಲಿಸುತ್ತಿದೆ ಮತ್ತು ಜನರ ಆಶೀರ್ವಾದ ಪಡೆಯುತ್ತಿದೆ. ಸರ್ಕಾರದ ಉತ್ತಮ ಕೆಲಸಗಳ ಬಗ್ಗೆ ಸಕಾರಾತ್ಮಕ ಸಂದೇಶದ ಜೊತೆ ಜನರ ಬಳಿಗೆ ಹೋಗಲು ಸಂಸದರಿಗೆ ಪ್ರಧಾನಿ ಸೂಚಿಸಿದ್ದಾರೆ ಎನ್ನಲಾಗಿದೆ.
ಒಟ್ನಲ್ಲಿ ಒಂದು ಕಡೆ ವಿಪಕ್ಷಗಳು ಉಚಿತ ಉಡುಗೊರೆ ವಿಚಾರವನ್ನು ಹಿಡಿದು ಮತದಾರರ ಮನ ಗೆಲ್ಲಲು ಯತ್ನಿಸುತ್ತಿವೆ. ಅದೇ ರೀತಿ ಇದೀಗ ಬಿಜೆಪಿ ತಮ್ಮ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ 'ತಲಾಖ್' ಮತ್ತಿತರ ನಿರ್ಧಾರಗಳನ್ನು ಹಿಡಿದು ಅಸ್ತ್ರ ಪ್ರಯೋಗಿಸುತ್ತಿದೆ. ಈ ಬೆಳವಣಿಗೆಗಳು ಚುನಾವಣೆಯಲ್ಲಿ ಯಾವ ರೀತಿ ಪ್ರಭಾವ ಬೀರಲಿವೆ ಅನ್ನೋದನ್ನ ಕಾದು ನೋಡಬೇಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications