ಮುಸ್ಲಿಮರಿಂದ ಅಲ್ಪಸಂಖ್ಯಾತ ಸ್ಥಾನಮಾನ ಹಿಂಪಡೆಯಿರಿ: ತೊಗಾಡಿಯಾ
ಜೈಪುರ, ಜುಲೈ 04: 'ಮುಸ್ಲಿಮರಿಗೆ ನೀಡಿರುವ ಅಲ್ಪಸಂಖ್ಯಾತ ಸ್ಥಾನಮಾನವನ್ನು ಹಿಂಪಡೆಯಬೇಕು ಮತ್ತು ಜನಸಂಖ್ಯೆಯನ್ನು ನಿಯಂತ್ರಿಸುವ ಸಲುವಾಗಿ ಅವರಿಗೂ 'ಟು ಚೈಲ್ಡ್ ಪಾಲಿಸಿ'ಯನ್ನು ಅನ್ವಯಿಸುವಂಥೆ ಮಾಡಬೇಕು' ಎಂದು ವಿಶ್ವ ಹಿಂದು ಪರಿಷತ್ತಿನ ಮಾಜಿ ಮುಖಂಡ ಪ್ರವೀಣ್ ಭಾಯಿ ತೊಗಾಡಿಯಾ ಹೇಳಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ, ಅವರು ಮಾತನಾಡುತ್ತಿದ್ದರು. ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಹಿಂದು ಪರಿಷತ್ತನ್ನು ಸ್ಥಾಪಿಸಿರುವ ತೊಗಾಡಿಯಾ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧವೂ ಹರಿಹಾಯ್ದರು.
ಮುಸ್ಲಿಮರಿಗೆ ನೀಡಿದ ಅಲ್ಪಸಂಖ್ಯಾತ ಸ್ಥಾನಮಾನವನ್ನು ವಾಪಸ್ ಪಡೆದು, ಅವರಿಗೂ ಟು ಚೈಲ್ಡ್ ಪಾಲಿಸಿ ಅನ್ವಯವಾಗುವಂತೆ ಮಾಡಿದರೆ, 20 ಕೋಟಿ ಹಿಂದು ವೋಟ್ ಬ್ಯಾಂಕ್ ಪಡೆಯಬಹುದು ಎಂದಿದ್ದಾರೆ.

'ನಾಣು ಎಂದಿಗೂ ಹಿಂದುತ್ವದ ಅಜೆಂಡಾ ಇಟ್ಟುಕೊಂಡೇ ಹೋರಾಡುವವನು. ಗುಣಮಟ್ಟದ ಶಿಕ್ಷಣ, ಉದ್ಯೋಗಾವಕಾಶ, ಕಾರ್ಮಿಕರ ರಕ್ಷಣೆ, ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇವುಗಳ ಬಗ್ಗೆ ನಾನು ಹೆಚ್ಚು ಗಮನ ಹರಿಸುತ್ತೇನೆ' ಎಂದು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಣದುಬ್ಬರವನ್ನು ಕಡಿಮೆ ಮಾಡುವಲ್ಲಿ, ರೈತರ ಆತ್ಮಹತ್ಯೆಯನ್ನು ನಿಯಂತ್ರಣಕ್ಕೆ ತರುವಲ್ಲಿ, ಉದ್ಯೋಗ ಸೃಷ್ಟಿಯಲ್ಲಿ ಮತ್ತು ಮಹಿಳೆಯರ ರಕ್ಷಣೆಯ ವಿಷಯದಲ್ಲಿ ಸಂಪೂರ್ಣ ವಿಫಲವಾಗಿ ಎಂದು ತೊಗಾಡಿಯಾ ದೂರಿದರು.
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications