ತಾಯಿ, ಮಗಳನ್ನು ಬಸ್ ನಿಂದ ಹೊರದಬ್ಬಿದ ಕಾಮುಕರು
ಮೋಗಾ (ಪಂಜಾಬ್), ಮಾ. 1: ದೇಶದಲ್ಲಿ ಕಾಮುಕರ ಅಟ್ಟಹಾಸಕ್ಕೆ ಎಣೆ ಇಲ್ಲದಂತಾಗಿದೆ. ದೆಹಲಿ ನಿರ್ಭಯಾ ರೀತಿಯದ್ದೇ ಮತ್ತೊಂದು ಪ್ರಕರಣ ಪಂಜಾಬ್ ನ ಮೋಗಾ ಜಿಲ್ಲೆಯಲ್ಲಿ ಸಂಭವಿಸಿದೆ.
ಚಲಿಸುವ ಬಸ್ಸಿನಲ್ಲಿ ನಿರ್ವಾಹಕ ಹಾಗೂ ಕ್ಲೀನರ್ ಹಾಗೂ ಮತ್ತೊಬ್ಬ ಅಪರಿಚಿತ ವ್ಯಕ್ತಿ ತಾಯಿ ಮತ್ತು ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅವರನ್ನು ಬಸ್ಸಿನಿಂದ ಹೊರದೂಡಿದ್ದಾರೆ. ಘಟನೆಯಲ್ಲಿ 16 ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತಾಯಿ ತೀವ್ರವಾಗಿ ಗಾಯಗೊಂಡಿದ್ದಾರೆ.[ನಿವೃತ್ತ ಐಎಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರ]

ತಾಯಿ ಮಗಳು ಪ್ರಯಾಣಿಸುತ್ತಿದ್ದ 'ಆರ್ಬಿಟ್ ಏವಿಯೇಷನ್' ಕಂಪನಿಯ ಬಸ್, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಕುಟುಂಬದ ಒಡೆತನಕ್ಕೆ ಸೇರಿದೆ ಎನ್ನಲಾಗಿದೆ. 35 ವರ್ಷದ ಮಹಿಳೆ ಹಾಗೂ ಅವರ ಪುತ್ರಿ ಮತ್ತು ಪುತ್ರ ಬಸ್ ಏರಿದ್ದರು. ಮೋಗಾ ಜಿಲ್ಲೆಯಿಂದ ಹತ್ತು ಕಿ.ಮೀ. ಚಲಿಸಿದ ಬಸ್ ಟೋಲ್ ಪ್ಲಾಜಾ ಬಳಿ ನಿಂತಿತು. ಬಸ್ ನಿರ್ವಾಹಕ, ಕ್ಲೀನರ್ ಹಾಗೂ ಮತ್ತೊಬ್ಬ ವ್ಯಕ್ತಿ (ಗುರುತು ಪತ್ತೆಯಾಗಿಲ್ಲ) ಮಹಿಳೆ ಹಾಗೂ ಅವರ ಮಗಳ ಮೇಲೆ ಎರಗಿದ್ದಾರೆ. ಲೈಂಗಿಕ ದೌರ್ಜನ್ಯವೆಸಗಿ, ಅವರನ್ನು ಬಸ್ಸಿನಿಂದ ಹೊರಕ್ಕೆ ದೂಡಿದ್ದಾರೆ. ಪರಿಣಾಮ ಮಗಳು ಸಾವನ್ನಪ್ಪಿದ್ದು ತಾಯಿ ತೀವ್ರ ತೆರನಾಗಿ ಗಾಯಗೊಂಡಿದ್ದಾರೆ.
ನಿರ್ವಾಹಕ ಸುಖ್ವಿಂದರ್, ಕ್ಲೀನರ್ ಗುರುದೀಪ್ ಎಂಬುವರನ್ನು ಬಂಧಿಸಲಾಗಿದೆ. ಇವರಿಬ್ಬರ ಜತೆ ಇದ್ದ ಮತ್ತೂಬ್ಬ ವ್ಯಕ್ತಿ ಯಾರೆಂದು ಗೊತ್ತಾಗಿಲ್ಲ. ಶೋಷಣೆಗೊಳಗಾದ ಮಹಿಳೆ ಚಾಲಕನ ವಿರುದ್ಧ ಯಾವುದೇ ಆರೋಪ ಮಾಡಿಲ್ಲ ಎಂದು ಮೊಗಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಚ್.ಎಸ್. ಪನ್ನು ತಿಳಿಸಿದ್ದಾರೆ. ಆದರೆ ಮಹಿಳೆ ಹಾಗೂ ಆಕೆಯ ಪುತ್ರಿಯೇ ಬಸ್ನಿಂದ ಜಿಗಿದಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದು ಗೊಂದಲ ಸೃಷ್ಟಿಸಿದೆ.
ಘಟನೆಯನ್ನು ರಾಜಕೀಯ ಪಕ್ಷಗಳು ಖಂಡಿಸಿವೆ. ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ವಿಷಾದ ವ್ಯಕ್ತಪಡಿಸಿದ್ದು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications