ಕತ್ತೆ ಮೇಲೆ ಕೂರಿಸಿ ಮಹಿಳೆ ಬೆತ್ತಲೆ ಮೆರವಣಿಗೆ
ರಾಜಸ್ಥಾನ, ನ.11 : ಹತ್ತಿರದ ಸಂಬಂಧಿಯನ್ನು ಕೊಲೆ ಮಾಡಿದ್ದಾಳೆಂದು ಆರೋಪಿಸಿ 50 ವರ್ಷದ ಮಹಿಳೆಯನ್ನು ಕತ್ತೆ ಮೇಲೆ ಕೂರಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪ್ರಸಂಗ ರಾಜಸ್ಥಾನದಲ್ಲಿ ವರದಿಯಾಗಿದೆ. ಗ್ರಾಮದ 'ಕಾಂಗರೂ ಕೋರ್ಟ್' ಇಂಥದ್ದೊಂದು ಕೆಟ್ಟ ತೀರ್ಮಾನ ನೀಡಿದ್ದು ಇದಕ್ಕೆ ಸಂಬಂಧಿಸಿ 39 ಜನರನ್ನು ಬಂಧಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ದಕ್ಷಿಣ ರಾಜಸ್ಥಾನದ ರಾಜ್ಸ್ ಮಂಡ್ ಜಿಲ್ಲೆಯಲ್ಲಿ ಶನಿವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಸ್ವಯಂ ಘೋಷಿತ ಕೋರ್ಟ್ ಈ ತೀರ್ಮಾನ ನೀಡಿದ್ದು ಆಕೆಯ ಕೂದಲನ್ನು ಕತ್ತರಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಲಾಗಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆ ತನ್ನ ಭಾಮೈದ ನನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.[2 ಲಕ್ಷಕ್ಕೆ ಬೆಳಗಾವಿ ಮಗು ರಾಜಸ್ಥಾನದಲ್ಲಿ ಮಾರಾಟ]

ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅತ್ತಿಗೆ ತನ್ನ ಗಂಡನನ್ನು ಕೊಲೆ ಮಾಡಲಾಗಿದೆ. ಇದಕ್ಕೆ ಮಹಿಳೆಯೆ ಕಾರಣ ಎಂದು ಕಾಂಗರೂ ಕೋರ್ಟ್ ಗೆ ದೂರು ನೀಡಿದ್ದಳು. ಇದನ್ನು ಗಣನೆಗೆ ತೆಗೆದುಕೊಂಡ ಒಂದು ಗುಂಪು ಮಹಿಳೆಯನ್ನು ದೋಷಿ ಎಂದು ತೀರ್ಮಾನಿಸಿ ಬೆತ್ತಲೆ ಮೆರವಣಿಗೆ ಮಾಡುವಂತೆ ಆದೇಶ ನೀಡಿದೆ. ಘಟನೆ ನಂತರ ಮಹಿಳೆ ಗಂಡ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಆಕೆಯ ಕುಟುಂಬದವರು ಸೇರಿದಂತೆ 39 ಜನರನ್ನು ಬಂಧಿಸಲಾಗಿದೆ.[ರಾಜಸ್ಥಾನದಲ್ಲಿ ಅತ್ಯಾಚಾರ, ಮುಂದೇನಾಯ್ತೆಂದರೆ..]
ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು ಅನೇಕರು ಕ್ರಿಮಿನಲ್ ಹಿನ್ನಲೆ ಉಳ್ಳವರಾಗಿದ್ದಾರೆ. ಭಾರತೀಯ ದಂಡ ಸಂಹಿತೆ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಹಿಳೆ ಶಾಕ್ ಗೆ ಒಳಗಾಗಿದ್ದು ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಸುಧೀರ್ ಜೋಷಿ ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications