ಪ್ರೀತಿಸಿ ಕೈಕೊಟ್ಟವನ ಮೇಲೆ ಆ್ಯಸಿಡ್ ಎರಚಿ ಕೊಂದ ಪ್ರಿಯತಮೆ
ನಾಲ್ಕು ವರ್ಷಗಳ ಕಾಲ ಪ್ರೀತಿಸಿ, ಮದುವೆಯಾಗದ್ದಕ್ಕೆ ತಕ್ಕ ಶಾಸ್ತಿ ಮಾಡಿರುವುದಾಗಿ ಹೇಳಿರುವ ಆ್ಯಸಿಡ್ ದಾಳಿ ಮಾಡಿದ ಹುಡುಗಿ.
ಗುಂಟೂರು (ಆಂಧ್ರಪ್ರದೇಶ), ಮೇ 24: ನಾಲ್ಕು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗದೇ ವಂಚಿಸಿದ ಎಂಬ ಕಾರಣಕ್ಕೆ ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮೇಲೆ ಆ್ಯಸಿಡ್ ಎರಚಿ ಆತನ ಸಾವಿಗೆ ಕಾರಣಳಾಗಿದ್ದಾಳೆ. ಕೇವಲ ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಆತ ಈಗ ಇಹಲೋಕ ತ್ಯಜಿಸಿದ್ದಾನೆ.
ಮೃತ ಇಲಿಯಾಸ್ ಹಾಗೂ ಆತನ ಪ್ರೇಮಿ ಹಿಮ ಬಿಂದು ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತಾಡಿಕೊಂಡ ಮಂಡಲದಲ್ಲಿನ ಪಾಮುಲಪಾಡು ಗ್ರಾಮದವರು.
ಪರಸ್ಪರ ಪ್ರೀತಿಸುತ್ತಿದ್ದ ಈ ಇಬ್ಬರೂ ನಾಲ್ಕು ವರ್ಷಗಳ ಕಾಲ ಪ್ರೇಮದಲ್ಲಿದ್ದರು. ಆದರೆ, ಆತ ಮದುವೆಗೆ ನಿರಾಕರಿಸಿದ ಎಂದು ಆಕೆ ಆರೋಪಿಸಿದ್ದಾಳೆ.

ಮದುವೆಗೆ ನಿರಾಕರಿಸಿದ್ದ ಯುವಕ ಇತ್ತೀಚೆಗೆ ಮನೆಯಲ್ಲಿ ನೋಡಿದ ಯುವತಿಯೊಂದಿಗೆ ಮದುವೆಯಾಗಿದ್ದ. ಇದರಿಂದ ಹಿಮ ಬಿಂದು ಕುದ್ದು ಹೋಗಿದ್ದಳು.
ಪ್ರತೀಕಾರಕ್ಕೆ ಸಿದ್ಧಳಾದ ಆಕೆ, ಹೊಸ ಮದುಮಗನಾಗಿ ಕಂಗೊಳಿಸುತ್ತಿದ್ದ ಇಲಿಯಾಸ್ ನ ಗೆಳೆಯನನ್ನು ಸಂಪರ್ಕಿಸಿದ ಹಿಮಬಿಂದು, ಇಲಿಯಾಸ್ ಬಳಿಯಿರುವ ತನ್ನ ಹಳೆಯ ಫೋಟೋಗಳನ್ನು ಹಿಂಪಡೆಯುವುದಕ್ಕಾಗಿ ಆತನನ್ನು ಭೇಟಿಯಾಗಲು ಇಚ್ಛಿಸಿರುವುದಾಗಿ ಸಂದೇಶ ಕಳುಹಿಸಿದ್ದಳು. ಇದನ್ನು ನಂಬಿದ ಆತ, ಮಾಜಿ ಪ್ರೇಯಸಿಗೆ ಆಕೆಯ ಫೋಟೋಗಳನ್ನು ಹಿಂದಿರುಗಿಸಲು ಆಕೆ ಹೇಳಿದ್ದ ವೆನಿಗಂಡ್ಲ ಹಳ್ಳಿಯ ಹೊರವಲಯಕ್ಕೆ ಬಂದಿದ್ದ.
ಆ ವೇಳೆ ಜಗಳ ತೆಗೆದ ಆಕೆ, ನೋಡನೋಡುತ್ತಿದ್ದಂತೆ ತಾನು ತನ್ನ ಬ್ಯಾಗ್ ನಲ್ಲಿ ಮೊದಲೇ ತಂದಿದ್ದ ಆ್ಯಸಿಡ್ ಬಾಟಲಿಯನ್ನು ಹೊರತೆಗೆದು ಆತನ ಮುಖಕ್ಕೆ ಎರಚಿ ಓಡಿ ಹೋದಳು. ಕೆಳಗೆ ಬಿದ್ದು ಒದ್ದಾಡುತ್ತಿದ್ದ ಆತನ ಕೂಗು ಕೇಳಿದ ಗ್ರಾಮಸ್ಥರು ಓಡಿ ಬಂದು ಆತನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ಯುವತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications