ಪುಟ್ಟ ಕಂದನ ಎದುರೇ ತಾಯಿಯನ್ನ ಮರಕ್ಕೆ ಕಟ್ಟಿ ಥಳಿತ, ಸಿಎಂ ಕ್ಷೇತ್ರದಲ್ಲೇ ಅಮಾನವೀಯ ಘಟನೆ
ಪ್ರಜಾರಾಜ್ಯ ಎಂದು ಭಾಷಣ ಬಿಗಿಯುವ ಮುಖ್ಯಮಂತ್ರಿಯ ಸ್ವಕ್ಷೇತ್ರದಲ್ಲೇ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. 80,000 ರೂಪಾಯಿ ಸಾಲ ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ತನ್ನ ಪುಟ್ಟ ಕಂದಮ್ಮನ ಎದುರೇ ಮರಕ್ಕೆ ಕಟ್ಟಿಹಾಕಿ ಬಳಿಕ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿದೆಯಲ್ಲ ಎಂದು ಎಲ್ಲರೂ ಆಕ್ರೋಶ ಹೊರಹಾಕುತ್ತಿದ್ದಾರೆ. ಮಹಿಳೆಯನ್ನು ಕಟ್ಟಿ ಥಳಿಸಿರುವ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಸ್ವಂತ ಕ್ಷೇತ್ರ ಕುಪ್ಪಂನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸಾಲ ಮರುಪಾವತಿಸಲು ವಿಫಲವಾದ ಕಾರಣ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿರುವ ಆಘಾತಕಾರಿ ಘಟನೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸ್ಥಳೀಯರು ಮತ್ತು ಪೊಲೀಸರ ಪ್ರಕಾರ, ಕುಪ್ಪಂ ಮಂಡಲದ ನಾರಾಯಣಪುರಂ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯ ಪತಿ ತಿಮ್ಮರಾಯಪ್ಪ ಸುಮಾರು ಮೂರು ವರ್ಷಗಳ ಹಿಂದೆ ಅದೇ ಗ್ರಾಮದ ಮುನಿಕಣ್ಣಪ್ಪ ಎಂಬ ವ್ಯಕ್ತಿಯಿಂದ 80,000 ರೂಪಾಯಿ ಸಾಲ ಪಡೆದಿದ್ದರು. ಅದನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಪ್ರಸ್ತುತ ದಂಪತಿ ಇಬ್ಬರೂ ತಮ್ಮ ಮಕ್ಕಳೊಂದಿಗೆ ವಾಸಿಸಲು ಗ್ರಾಮವನ್ನು ತೊರೆದಿದ್ದರು. ಆ ಮಹಿಳೆಯು ತನ್ನ ಮಗನ ಅಧ್ಯಯನ ಪ್ರಮಾಣಪತ್ರಕ್ಕಾಗಿ ಗ್ರಾಮಕ್ಕೆ ಬಂದಿದ್ದರು. ವಿಷಯ ತಿಳಿದ ಮುನಿಕಣ್ಣಪ್ಪ ಮತ್ತು ಅವರ ಕುಟುಂಬ ಸದಸ್ಯರು ಆ ಮಹಿಳೆಯನ್ನ ಅವಮಾನಿಸಿ, ಅವರ ಮಗುವಿನ ಮುಂದೆಯೇ ಹಗ್ಗದಿಂದ ಮರಕ್ಕೆ ಕಟ್ಟಿ ಸಾಲ ಮರುಪಾವತಿಸುವಂತೆ ಪೀಡಿಸಿದ್ದಾರೆ.
ಕಠಿಣ ಕ್ರಮಕ್ಕೆ ಸಿಎಂ ನಾಯ್ಡು ಆದೇಶ
ಈ ಮಾಹಿತಿ ತಿಳಿದ ನಂತರ ಕುಪ್ಪಂ ನಗರ ಪೊಲೀಸರು ನಾರಾಯಣಪುರಂ ತಲುಪಿ ಆ ಮಹಿಳೆಯನ್ನು ಅಲ್ಲಿಂದ ಬಿಡಿಸಿದ್ದಾರೆ. ಬಳಿಕ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆ ಗ್ರಾಮದ ಮುನಿಕೃಷ್ಣಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಕುಪ್ಪಂನಲ್ಲಿ ನಡೆದ ಘಟನೆ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ.
ಕುಪ್ಪಂ ಮಂಡಲದ ನಾರಾಯಣಪುರಂ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಅಮಾನವೀಯ ಹಲ್ಲೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಂಗಳವಾರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಚಿತ್ತೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ ತೆಲುಗು ದೇಶಂ ಪಕ್ಷದ (ಟಿಡಿಪಿ) ಸದಸ್ಯ ಎಂದು ಹೇಳಲಾಗುವ ಮಣಿಕಪ್ಪ, ಅವರ ಪತ್ನಿ ಮತ್ತು ಇತರರನ್ನು ಬಂಧಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ನಾಯ್ಡು ಪೊಲೀಸ್ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
-
ವಿದ್ಯಾರ್ಥಿಗಳ ಮುಖದಲ್ಲಿ ನಗು ಮೂಡಿಸುತ್ತಿರುವ 'ಚನ್ನಾ ವಾಲಿ ದಾದಿ': Viral Video ನೋಡಿ ಮನಸೋತ ನೆಟ್ಟಿಗರು -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು












Click it and Unblock the Notifications