ವರ್ಮಾ ವಿರುದ್ಧ ಮಹಿಳೆಯರಿಂದ ಉಪವಾಸ ಸತ್ಯಾಗ್ರಹ
ವಿಶಾಖಪಟ್ಟಣಂ, ಫೆಬ್ರವರಿ 22: ವಿವಾದಿತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ 'ಗಾಡ್ ಸೆಕ್ಸ್ ಅಂಡ್ ಟ್ರೂಥ್' (ಜಿಎಸ್ಟಿ) ವಿರುದ್ಧ ಮಹಿಳಾ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ. ಈ ವೆಬ್ ಸರಣಿ ನಿರ್ಮಿಸಿದ್ದಕ್ಕಾಗಿ ಪೊಲೀಸರಿಂದ ವಿಚಾರಣೆಗೊಳಲ್ಪಟ್ಟ ವರ್ಮಾ ಅವರು ನಿಟ್ಟುಸಿರು ಬಿಡುವಷ್ಟರಲ್ಲೇ ಮತ್ತೊಂದು ಆತಂಕ ಎದುರಾಗಿದೆ.
ಅಖಿಲ ಭಾರತ ಡೆಮೊಕ್ರಾಟಿಕ್ ಮಹಿಳೆ ಅಸೋಸಿಯೇಷನ್ (ಎಐಡಿಡಬ್ಲ್ಯೂಎ) ನ ಸದಸ್ಯರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ವರ್ಮಾ ವಿರುದ್ಧ ವೈಜಾಗ್ ಪೊಲೀಸರು ಎಫ್ಐಆರ್ ಹಾಕಲು ಹಿಂದೇಟು ಹಾಕಿದ ಹಿನ್ನಲೆಯಲ್ಲಿ ಈ ರೀತಿ ಪ್ರತಿಭಟಿಸುತ್ತಿದ್ದಾರೆ.

ಭಾರತೀಯ ಚಿತ್ರರಂಗದ ವಿವಾದಿತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ 'ಗಾಡ್ ಸೆಕ್ಸ್ ಅಂಡ್ ಟ್ರೂಥ್' (ಜಿಎಸ್ಟಿ) ಮತ್ತೆ ಸುದ್ದಿಯಲ್ಲಿದೆ. ಆದರೆ, ಈಗ ಇದ್ದಕ್ಕಿದ್ದಂತೆ ಪವರ್ ಸ್ಟಾರ್ ಪವನ್ ಕಲ್ಯಾಣ್ ವಿರುದ್ಧ ತಿರುಗಿ ಬಿದ್ದಿದ್ದು, ಅವರನ್ನು ಪೋರ್ನ್ ಸ್ಟಾರ್ ಎಂದು ಕರೆದಿದ್ದಾರೆ.
ವರ್ಮಾ ಅವರ ಗಾಡ್ ಸೆಕ್ಸ್ ಟ್ರೂಥ್ ವೆಬ್ ಸರಣಿ ವಿರುದ್ಧ ಮಹಿಳಾ ಸಂಘಟನೆಗಳು ದೂರು ನೀಡಿದ್ದರು. ಈ ವಿಷಯವಾಗಿ ಸೆಂಟ್ರಲ್ ಕೈಂ ವಿಭಾಗ ಪೊಲೀಸರ ಮುಂದೆ ಹಾಜರಾಗಿದ್ದ ವರ್ಮಾ ಅವರು ಪೊಲೀಸರ ಪ್ರಶ್ನೆಗಳ ಸುರಿಮಳೆಯನ್ನು ಎದುರಿಸಿದ್ದಾರೆ. ಚಿತ್ರದ ಬಗ್ಗೆ ಆಕ್ಷೇಪವಲ್ಲದೆ, ಚಿತ್ರದ ಆರ್ಥಿಕ ವ್ಯವಹಾರ, ಸೈಬರ್ ಕ್ರೈಂ, ಕಾಪಿರೈಟ್ ಬಗ್ಗೆ ಕೂಡಾ ಪ್ರಶ್ನೆಗಳು ಬಂದಿತ್ತು. ಆದರೆ, ಇಡೀ ವೆಬ್ ಸರಣಿಯನ್ನು ವಿದೇಶದಲ್ಲಿ ಚಿತ್ರೀಕರಿಸಲಾಗಿದ್ದು, ಅಲ್ಲಿನ ಕಾನೂನಿನ ಪ್ರಕಾರ ಎಲ್ಲಾ ನಿಯಮ ಪಾಲಿಸಿದ್ದೇವೆ ಎಂದು ವರ್ಮಾ ಹೇಳಿದ್ದರು.
ಈ ಚಿತ್ರದಲ್ಲಿ ಮಹಿಳೆಯನ್ನು ಅಶ್ಲೀಲವಾಗಿ ತೋರಿಸಲಾಗಿದೆ. ಇದನ್ನು ಯಾರು ನೋಡಬೇಕು, ನೋಡಬಾರದು ಎಂಬ ನಿರ್ಬಂಧವೂ ಇಲ್ಲ. ವೆಬ್ ನಲ್ಲಿ ಮುಕ್ತವಾಗಿ ಬಿಡಲಾಗಿದೆ. ಹೀಗಾಗಿ, ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಕಾರ್ಯಕರ್ತೆ ಮಣಿ ಎಂಬುವರು ವಿಶಾಖಪಟ್ಟಣಂನ ವೈಜಾಗ್ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications