ಪೊಲೀಸ್ ಠಾಣೆ ಒಳಹೊಕ್ಕರೂ ಆಕೆಯನ್ನು ಕೊಂದ ದುರುಳ
ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯಲ್ಲಿ ಹೋಯ್ತು ಮಹಿಳೆಯೊಬ್ಬಳ ಪ್ರಾಣ; ಪೊಲೀಸ್ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಿಎಂ ಯೋಗಿ ಆದಿತ್ಯನಾಥ್ ನಿರ್ಧಾರದ ಬೆನ್ನಲ್ಲೇ ನಡೆಯಿದು ಠಾಣೆಯಲ್ಲಿ ಕೊಲೆ!!
ಮೈನ್ ಪುರಿ, ಏಪ್ರಿಲ್ 18: ಆಸ್ತಿ ವಿಚಾರಕ್ಕೆ ಸಂಬಂಧಪಟ್ಟ ಗಲಾಟೆಯೊಂದರಲ್ಲಿ ಸಿಲುಕಿ, ತನ್ನನ್ನು ಕೊಲ್ಲಲು ಬಂದ ಹಂತಕನಿಂದ ಪ್ರಾಣ ಉಳಿಸಿಕೊಳ್ಳಲು ಓಡಿದ ಮಹಿಳೆಯೊಬ್ಬಳು ಪೊಲೀಸ್ ಠಾಣೆ ಹೊಕ್ಕರೂ ಆಕೆಗೆ ರಕ್ಷಣೆ ಸಿಗದಂಥ ಘಟನೆ ಮೈನ್ ಪುರಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೈನ್ ಪುರಿಯ ಪೊಲೀಸ್ ಠಾಣೆಯ ಬಳಿಯಲ್ಲೇ ಇರುವ ಮಾರುಕಟ್ಟೆಯಲ್ಲಿನ ಜಾಗವೊಂದು ವಿವಾದದ ಕೇಂದ್ರ ಬಿಂದು. ಈ ಜಾಗಕ್ಕಾಗಿ ಎರಡು ಕುಟುಂಬದವರು ಮಂಗಳವಾರ ಪರಸ್ಪರ ಜಗಳವಾಡುತ್ತಿದ್ದರು.

ಆಗ, ಒಂದು ಗುಂಪಿನ ಮಹಿಳೆಯ ಮೇಲೆ ವಿರೋಧಿ ಗುಂಪಿನ ಯುವಕನೊಬ್ಬ ತನ್ನಲ್ಲಿದ್ದ ಪಿಸ್ತೂಲು ತೆಗೆದು ಗುಂಡು ಹಾರಿಸಲು ಮುಂದಾದ. ಆಗ, ಅಲ್ಲಿಂದ ಓಡಿದ ಆಕೆ, ಹತ್ತಿರದಲ್ಲೇ ಇದ್ದ ಪೊಲೀಸ್ ಠಾಣೆ ನುಗ್ಗಿ ಪೊಲೀಸರನ್ನು ರಕ್ಷಿಸಲು ಕೇಳಿಕೊಂಡಿದ್ದಾಳೆ.
ಹಾಗೆ ಮಹಿಳೆ ನುಗ್ಗಿದ್ದನ್ನು ನೋಡಿ ಕಕ್ಕಾಬಿಕ್ಕಿಯಾದ ಪೊಲೀಸರು ಮುಂದೇನು ಮಾಡಬೇಕೆನ್ನುವಷ್ಟರಲ್ಲಿ ಹಿಂದೆ ಓಡಿಬಂದ ಆ ಯುವಕ ಹಾಗೂ ಆತನ ಜತೆಯಲ್ಲೇ ಆಗಮಿಸಿದ ಕೆಲವಾರು ಮಂದಿ ಪೊಲೀಸರು ಕದಲದಂತೆ ಸುತ್ತುವರಿದಿದ್ದಾರೆ. ಅಷ್ಟರಲ್ಲಿ ಪಿಸ್ತೂಲು ಹಿಡಿದಿದ್ದ ಯುವಕ ಆಕೆಯ ಮೇಲೆ ಪಾಯಿಂಟ್ ಬ್ಲಾಂಕ್ ರೇಂಜ್ ನಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಿಯೇಬಿಟ್ಟಿದ್ದಾನೆ.
ಆದರೆ, ಈ ಇಡೀ ದೃಶ್ಯಕ್ಕೆಸಾಕ್ಷಿಯಾದ ಮಾರುಕಟ್ಟೆಯಲ್ಲಿದ್ದ ಜನರು ರೊಚ್ಚಿಗೆದ್ದು ಕೊಲೆಗಾರ ಹಾಗೂ ಆತ ಜತೆಗಿದ್ದ ಯುವಕರನ್ನು ಹಿಗ್ಗಾ ಮುಗ್ಗಾ ಥಳಿಸಿ, ಹಣ್ಣುಗಾಯಿ ನೀರುಗಾಯಿ ಮಾಡಿದ್ದಾರೆ. ಇದರ ಜತೆಯಲ್ಲೇ, ಪೊಲೀಸರು ತಮ್ಮನ್ನು ಜನ ಸುತ್ತುವರೆಯುತ್ತಲೇ ಸುಮ್ಮನಾಗಿದ್ದಕ್ಕೆ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications