25 ವರ್ಷ ಕಳೆದರೂ ಅಡ್ವಾಣಿಯನ್ನು ಬೆಂಬಿಡದ 'ಬಾಬ್ರಿ ಮಸೀದಿ' ಭೂತ
ತಾಂತ್ರಿಕ ಕಾರಣಗಳಿಗಾಗಿ 'ಬಾಂಬ್ರಿ ಮಸೀದಿ ಧ್ವಂಸ' ಪ್ರಕರಣದಲ್ಲಿ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಇತರರ ಮೇಲಿನ ಪ್ರಕರಣಗಳನ್ನು ಕೈ ಬಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ನವದೆಹಲಿ, ಮಾರ್ಚ್ 6: ತಾಂತ್ರಿಕ ಕಾರಣಗಳಿಗಾಗಿ ಬಾಂಬ್ರಿ ಮಸೀದಿ ಪ್ರಕರಣದಲ್ಲಿ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಇತರರ ಮೇಲಿನ ಪ್ರಕರಣಗಳನ್ನು ಕೈ ಬಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಈ ಮೂಲಕ ವಿವಾದಿತ ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷಗಳು ಕಳೆದರೂ ಅದರ ನೆರಳಿನಿಂದ ಕಳಚಿಕೊಳ್ಳಲು ಆಡ್ವಾಣಿ ಹಾಗೂ ಇತರರಿಗೆ ಸಾಧ್ಯವಾಗುತ್ತಿಲ್ಲ.
1992ರಲ್ಲಿ ವಿವಾದಿತ ಬಾಬ್ರಿ ಮಸೀದಿ ಕರಸೇವಕರಿಂದ ಧ್ವಂಸವಾಗಿತ್ತು. ಇದೆಲ್ಲಾ ನಡೆದು 25 ವರ್ಷಗಳಾಗುತ್ತಾ ಬಂತು. ಆದರೆ ಅದರ ಪ್ರಕರಣಗಳು ಮಾತ್ರ ಹಲವರನ್ನು ಇನ್ನೂ ಕಾಡುತ್ತಲೇ ಇದೆ. 2001ರಲ್ಲಿ ವಿಚಾರಣಾ ನ್ಯಾಯಾಲಯ ಅಡ್ವಾಣಿ ಮೇಲಿನ ಪ್ರಕರಣಗಳನ್ನು ತಾಂತ್ರಿಕ ಕಾರಣಗಳಿಗಾಗಿ ಕೈ ಬಿಟ್ಟಿತ್ತು. ಆದರೆ ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ರೀತಿ ತಾಂತ್ರಿಕ ಕಾರಣಗಳಿಗಾಗಿ ಪ್ರಕರಣ ಕೈಬಿಡಲು ಸಾಧ್ಯವಿಲ್ಲ ಎಂದು ಹೇಳಿದೆ.[ಭಾಸ್ಕರ್ ರಾವ್ ಗೆ ಹಿನ್ನಡೆ, ತನಿಖೆ ಮುಂದುವರೆಯಲಿ : ಸುಪ್ರೀಂ]

ಈ ಹಿಂದೆ ಸುಪ್ರೀಂ ಕೋರ್ಟ್ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಮತ್ತು ಕಲ್ಯಾಣ್ ಸಿಂಗ್ ಮೇಲಿನ ಸಂಚಿನ ಪ್ರಕರಣಗಳನ್ನು ಮತ್ತೆ ಯಾಕೆ ಆರಂಭಿಸಿಲ್ಲ ಎಂದೂ ಕೇಳಿತ್ತು. ವಿಚಾರಣಾ ನ್ಯಾಯಾಲಯ 2001ರಲ್ಲಿ ಬಿಜೆಪಿ ನಾಯಕರ ಮೇಲಿನ ಪ್ರಕರಣಗಳನ್ನು ಕೈ ಬಿಟ್ಟಿತ್ತು. ಇದನ್ನು ಅಲಹಾಬಾದ್ ಹೈಕೋರ್ಟ್ ಕೂಡ 2010ರಲ್ಲಿ ಎತ್ತಿ ಹಿಡಿದಿತ್ತು.
ಇದೆಲ್ಲಾ ಆಗಿ 9 ತಿಂಗಳ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. 'ಸಿಬಿಐ ಸುಪ್ರಿಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವಲ್ಲಿ ತಡವಾಗಿದೆ. ಹಾಗಾಗಿ ಪ್ರಕರಣವನ್ನು ಕೈಬಿಡುವಂತೆ ಅಡ್ವಾಣಿ ಮೊದಲಾದವರು ಸುಪ್ರಿಂ ಕೋರ್ಟಿಗೆ ಮನವಿ ಸಲ್ಲಿಸಿದ್ದರು.[ಗಾಯತ್ರಿ ಪ್ರಜಾಪತಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ]
ಆದರೆ ಇದನ್ನು ತಳ್ಳಿ ಹಾಕಿರುವ ಸುಪ್ರೀಂ ಕೊರ್ಟ್ ತಾಂತ್ರಿಕ ಕಾರಣಗಳಿಗಾಗಿ ಪ್ರಕರಣ ಕೈಬಿಡಲು ಸಾಧ್ಯವಿಲ್ಲ ಎಂದು ಹೇಳಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications