ವಿಶ್ವ ಜೀವವೈವಿಧ್ಯ ದಿನ: ನಿಸರ್ಗ ಎಂಬ ವಿಸ್ಮಯದ ಗೂಡು
ನಿಸರ್ಗ ಎಂದರೆ ಪ್ರಶ್ನಾತೀತ ವಿಸ್ಮಯ. ಹಸಿರು ಕಾನನದ ನಡುವಲ್ಲಿ ಚಿಲಿಪಿಲಿಗುಟ್ಟುವ ಹಕ್ಕಿಗಳು, ಗರ್ಜಿಸುವ ಹುಲಿ, ಘೀಳಿಡುವ ಆನೆ ಎಲ್ಲವೂ ರುದ್ರ ರಮಣೀಯವೇ. ವಿಸ್ಮಯಗಳ ತವರೂರು ಈ ಭೂಮಿಯಲ್ಲಿ ಅದೆಷ್ಟು ಜೀವಜಂತುಗಳಿವೆಯೋ, ಲೆಕ್ಕಕ್ಕೆ ಸಿಕ್ಕವು ಒಂದಷ್ಟಾದರೆ, ಲೆಕ್ಕದ ಪರಿಧಿಗೇ ಬಾರದವು ಮತ್ತೆಷ್ಟೋ. ಈ ಜಗತ್ತಿನ ಸೌಂದರ್ಯ ಅಡಗಿರುವುದೇ ಜೀವ ವೈವಿಧ್ಯಗಳಿಂದಾಗಿ.
ಆಹಾರ ಸರಪಣಿಯಲ್ಲಿ ಯಾವುದೇ ಕೊಂಡಿ ಕಳಚಿದರೂ ಈ ಭೂಮಿಗೆ ಅಪಾಯ ತಪ್ಪಿದ್ದಲ್ಲ. ಆಹಾರ ಸರಪಳಿಯ ಕೊಂಡಿ ಎಂದಿಗೂ ಮುರಿಯದಂತೆ, ಅಡಿಗಡಿಗೆ ಸಲಹೆ ಜತನ ಮಾಡುತ್ತಿರುವ ಸೃಷ್ಟಿಶಕ್ತಿಯೆದುರು ಮನುಷ್ಯ ತಲೆಬಾಗಲೇಬೇಕು.
ಅದಕ್ಕೆಂದೇ ಈ ಜೀವವೈವಿಧ್ಯವನ್ನು ಕಾಪಾಡುವ, ಅವನ್ನು ಉಳಿಸಿ, ಬೆಳೆಸುವ ಸಂಕಲ್ಪದೊಂದಿಗೆ ಪ್ರತಿ ವರ್ಷ ಮೇ 22 ಅನ್ನು ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನವನ್ನಾಗಿ ಆಚರಿಸಲಾಗುತ್ತದೆ.

ಜೀವ ವೈವಿಧ್ಯದಿನ
1993ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಜೀವ ವೈವಿಧ್ಯ ದಿನವನ್ನು ಆಚರಿಸಲಾಯಿತು. ಇದೀಗ 25 ವರ್ಷಗಳಿಂದ ಈ ದಿನವನ್ನು ಆಚರಿಸಲಾಗುತ್ತಿದ್ದು, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಜೀವ ವೈವಿಧ್ಯ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಸಂಕಲ್ಪ ಮಾಡಲಾಗುತ್ತಿದೆ.

ಮರಗಳ ಮಾರಣಹೋಮ
ಅಭಿವೃದ್ಧಿಯ ಹೆಸರಿನಲ್ಲಿ ಅವ್ಯಾಹತವಾಗಿ ನಡೆದ ಮರಗಳ ಮಾರಣಹೋಮದಿಂದಾಗಿ ಕಾಡು ಖಾಲಿ ಖಾಲಿಯಾಗುತ್ತಿದೆ. ಆದ್ದರಿಂದಲೇ ಇಂದು ಹಲವು ಪ್ರಾಣಿಗಳು ಅಳಿವಿನಂಚಿಗೆ ತಲುಪಿವೆ. ಹಲವು ಅಪರೂಪದ ಪ್ರಭೇದದ ಜೀವಿಗಳನ್ನು ಉಳಿಸಿಕೊಳ್ಳುವುದು ಹರಸಾಹಸ ಎನ್ನಿಸಿದೆ. ಆಹಾರವಿಲ್ಲದೆ, ನೀರಿಲ್ಲದೆ ಪ್ರಾಣಿ-ಪಕ್ಷಿಗಳು ಸಾಯುತ್ತಿವೆ.
|
ಮೂಕ ಪ್ರಾಣಿಗಳ ಪರ ನಿಲ್ಲಿ
ಜೀವ ವೈವಿಧ್ಯವನ್ನು ರಕ್ಷಿಸುವುದು ಎಂದರೆ ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ಕಅಪಾಡುವುದು. ಅದಕ್ಕೆಂದೇ ನಾವು ನಮ್ಮ ಅರಣ್ಯ ಮತ್ತು ಸಮುದ್ರವನ್ನು ರಕ್ಷಿಸಬೇಕಿದೆ. ತಮ್ ಕುರಿತು ಮಾತನಾಡಲಾಗದವರ ಪರವಾಗಿ ನಿಲ್ಲೋಣ ಎಂದು ಗ್ರೀನ್ ಪೀಸ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸರ್ಕಾರಗಳು ಇನ್ನೂ ಹೆಚ್ಚಿನದನ್ನು ಮಾಡಬೇಕಿದೆ
ವನ್ಯಜೀವಿಗಳ ರಕ್ಷಣೆ ಮತ್ತು ಪರಿಸರ ರಕ್ಷಣೆಗಾಗಿ ಸರ್ಕಾರಗಳು ಸಾಕಷ್ಟನ್ನು ಮಾಡುತ್ತಿವೆ. ಆದರೆ ಇನ್ನೂ ಹೆಚ್ಚಿನದನ್ನು ಮಾಡಬಹುದು. ಯಾವುದೇ ಪ್ರಾಣಿಗಳೂ ಅಳಿವಿನಂಚಿಗೆ ಹೋಗುವುದಕ್ಕೆ ಬಿಡಕೂಡದು ಎಂದು ಮಿಚ್ ಆಡಮ್ಸ್ ಎಂಬುವವರು ಟ್ವೀಟ್ ಮಾಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications