ರಕ್ತಕ್ಕೆ ಯಾವುದೇ ಜಾತಿಯಿಲ್ಲ, ರಕ್ತದಾನ ಮಾಡಿ, ಜೀವ ಉಳಿಸಿ
ರಕ್ತ ಎಂದರೆ ಜೀವ ಜಲ. ನಮ್ಮನ್ನೆಲ್ಲ ಬದುಕಿಸಿರುವುದು ಅದೇ. ಅನಾರೋಗ್ಯ ಪೀಡಿತನಾದ ಅಥವಾ ಅಪಘಾತಕ್ಕೆ ತುತ್ತಾದ ವ್ಯಕ್ತಿ ಸೂಕ್ತ ಗ್ರೂಪಿನ ರಕ್ತ ಸಿಗದ ಕಾರಣವೇ ಸಾವನ್ನಪ್ಪಿದ ಸಾಕಷ್ಟು ಘಟನೆಗಳು ನಮ್ಮ ಮುಂದಿವೆ. ಒಟ್ಟಿನಲ್ಲಿ ನಮ್ಮನ್ನೆಲ್ಲ ಬದುಕುಳಿಸಿರುವುದೇ ಈ ಕೆಂಪುದ್ರವ.
ಹೀಗಿರುವಾಗ, ಸಂಕಷ್ಟದಲ್ಲಿರುವ, ರಕ್ತದ ಅಗತ್ಯವಿರುವ ವ್ಯಕ್ತಿಗೆ ರಕ್ತದಾನ ಮಾಡಬೇಕಾದ ಅಗತ್ಯವನ್ನು ಅರ್ಥಮಾಡಿಸಲು ರಕ್ತದಾನ ದಿನವನ್ನು ಆಚರಿಸಲಾಗುತ್ತದೆ.
ರಕ್ತದಾನದ ಕುರಿತು ಜಾಗೃತಿ ಮೂಡಿಸುವ ಮತ್ತು ರಕ್ತದಾನ ಮಾಡಿ ಪರರ ಪ್ರಾಣ ಉಳಿಸಿದ ದಾನಿಗಳಿಗೆ ಕೃತಜ್ಞತೆ ಹೇಳುವ ಸಲುವಾಗಿ ಪ್ರತಿ ವರ್ಷ ಜೂನ್ 14 ನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನ ವಿಶ್ವದ ಬೇರೆ ಬೇರೆ ರಾಷ್ಟ್ರಗಳ ಜನರು ರಕ್ತದಾನದ ಕುರಿತು ಅರಿವು ಮೂಡಿಸುವ ಮೂಲಕ ಮತ್ತು ರಕ್ತದಾನ ಮಾಡುವ ಮೂಲಕ ಈ ದಿನವನ್ನು ಆಚರಿಸುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ 2004 ರಲ್ಲಿ ಆರಂಭವಾದ ಈ ಆಚರಣೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ ಸದಸ್ಯ ರಾಷ್ಟ್ರಗಳು ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿವೆ.
ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕಾರ್ಯ ಸಾಂಆಜಿಕ ಜಾಲತಾನಗಳಲ್ಲಿ ಜೋರಾಗಿಯೇ ನಡೆಯುತ್ತಿದೆ. ಅ ಅದರ ಭಾಗವಾಗಿ ಟ್ವಿಟ್ಟರ್ ನಲ್ಲಿ #DonateBloodSaveLife ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ.
|
ನೀವು ಹೀರೋ ಆಗಬೇಕೆ? ರಕ್ತದಾನ ಮಾಡಿ!
ನೀವು ಹೀರೋ ಆಗಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ ಒಂದು ರೂಪಾಯಿಯನ್ನು ಖರ್ಚು ಮಾಡದೆ ಹೀರೊ ಆಗುವುದಕ್ಕೆ ಒಂದು ಮಾರ್ಗವಿದೆ. ರಕ್ತದಾನ ಮಾಡಿ. ನಿಮ್ಮ ರಕ್ತದ ಕೆಲವೇ ಕೆಲವು ಹನಿಗಳು ಒಬ್ಬರ ಜೀವ ಉಳಿಸಬಹುದು, ನಿಮ್ಮನ್ನು ಹೀರೋ ಆಗಿ ಮಾಡಬಹುದು ಎಂದು ಕೋಮಲ್ ಸಿಂಗ್ಲಾ ಟ್ವೀಟ್ ಮಾಡಿದ್ದಾರೆ.
|
ರಕ್ತದಾನ ಹಲವು ರೋಗಗಳಿಗೆ ಪರಿಹಾರ!
ರಕ್ತದಾನ ಮಾಡಿ. ಏಕೆಂದರೆ ಅದರ ಕೊರತೆಯಿಂದ ಯಾರೂ ಜೀವ ಕಳೆದುಕೊಳ್ಳಬಾರದು. ಇದು ದಾನಿಗೆ ಸಾರ್ಥಕತೆಯನ್ನು ನೀಡುತ್ತದೆ. ರಕ್ತದಾನ ಮಾಡುವುದರಿಂದ ಯಾವುದೇ ರೀತಿಯ ಅಶಕ್ತತೆ ಆಗುವುದಿಲ್ಲ. ಬದಲಾಗಿ ಇದು ಹಲವು ರೋಗಗಳಿಗೆ ಪರಿಹಾರ ನೀಡಬಹುದು. ರಕ್ತದಾನ ಮಾಡುವುದಕ್ಕಿಂತ ಹೆಚ್ಚಿನ ಸೇವೆ ಮನುಕುಲದಲ್ಲಿ ಬೇರೆ ಇಲ್ಲ ಎಂದಿದ್ದಾರೆ ತರುಣ್ ತಾನೆಜಾ.
|
ನಮ್ಮೆಲ್ಲರ ರಕ್ತವೂ ಒಂದೇ!
ನಾವೆಲ್ಲರೂ ಒಂದು, ನಮ್ಮೆಲ್ಲರ ಜಾತಿ ಮಾನವೀಯತೆ. ನಮ್ಮೆಲ್ಲರ ನರಗಳಲ್ಲಿ ಹರಿಯುತ್ತಿರುವ ರಕ್ತವೂ ಒಂದೆ. ಅದು ನಮ್ಮ ಜಾತಿಯನ್ನು ನೋಡಿ ಹರಿಯುವುದಿಲ್ಲ! ಆದ್ದರಿಂದ ರಕ್ತದಾನ ಮಾಡಿ. ದೇವರ ಆಅಶೀರ್ವಾದ ಪಡೆಯಿರಿ ಎಂದೊಬ್ಬರು ಟ್ವೀಟ್ ಮಾಡಿದ್ದಾರೆ.
|
ಮಾನವೀಯತೆ ಬದುಕಿರುವುದಕ್ಕೆ ಸಾಕ್ಷಿ ಅದು!
ರಕ್ತದಾನ ಕೇವಲ ಒಂದು ಜೀವವನ್ನು ಉಳಿಸುವುದಿಲ್ಲ. ಬದಲಾಗಿ ಆದು ಈ ಜಗತ್ತಿನಲ್ಲಿ ಮಾನವೀಯತೆಯ ಇರುವನ್ನು ನೆನಪಿಸುತ್ತದೆ. ನಮ್ಮಿಂದ ರಕ್ತದಾನ ಮಾಡುವುದಕ್ಕೆ ಸಾಧ್ಯವಿದೆ ಎಂದಾದರೆ ನಾವದನ್ನು ಮಾಡಲೇಬೇಕು ಎಂದಿದ್ದಾರೆ ಇನ್ನೊಬ್ಬರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications