ಚಿತ್ರಗಳಲ್ಲಿ: ಸಸಿ ನೆಟ್ಟ ಪ್ರಧಾನಿ ಮೋದಿ, ವಿರಾಟ್ ಕೊಹ್ಲಿ
ನವದೆಹಲಿ, ಜೂ. 05: ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ರೇಸ್ ಕೋರ್ಸ್ ರಸ್ತೆ ಬಳಿ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮತ್ತು ಜಾಗೃತಿಯನ್ನು ತಮ್ಮ ಕೃತಿಯ ಮೂಲಕವೇ ತೋರಿಸಿದರು. ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಗಿಡ ನೆಟ್ಟು ಪರಿಸರ ದಿನಾಚರಣೆ ಆಚರಿಸಿದರು.
ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವ್ಡೇಕರ್ , ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸಹ ಗಿಡ ನೆಟ್ಟು ಪರಿಸರದ ಪ್ರಾಮುಖ್ಯ ಸಾರಿದರು. ಉಳಿದಂತೆ ಅನೇಕ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಪರಿಸರ ದಿನವನ್ನು ಆಚರಿಸಿದವು.
ಪ್ರತಿದಿನ ಹೆಚ್ಚುತ್ತಿರುವ ವಾತಾವರಣದ ತಾಪಮಾನ, ಭೂಕಂಪ, ಕುಡಿಯುವ ನೀರಿನ ಸಮಸ್ಯೆ, ನಗರಗಳಲ್ಲಿ ಹೆಚ್ಚಾಗಿರುವ ವಾಯು ಮಾಲಿನ್ಯ, ಕಲುಷಿತ ವಾತಾವರಣ ಎಲ್ಲವನ್ನು ಒಂದು ಕ್ಷಣ ನೆನೆದರೆ ಭಯವಾಗುತ್ತದೆ. ಪ್ರತಿಯೊಬ್ಬರು ಪರಿಸರ ಸಂರಕ್ಷಣಗೆ ಇಂದಿನಿಂದಲೇ ಕಂಕಣ ಬದ್ಧರಾಗಬೇಕಿದೆ. ಪರಿಸರ ದಿನಾಚರಣೆಯ ಜತೆ ಮತ್ತಷ್ಟು ಸುದ್ದಿಗಳು ಚಿತ್ರಗಳಲ್ಲಿ....(ಪಿಟಿಐ ಚಿತ್ರಗಳು)

ಗಿಡ ನೆಡಿ, ಗಿಡ ನೆಡಿ
ವಿಶ್ವಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ರೇಸ್ ಕೋರ್ಸ್ ರಸ್ತೆ ಬಳಿ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮತ್ತು ಜಾಗೃತಿ ಮೂಡಿಸಿದರು. ಪ್ರಧಾನಿ ಸದ್ಯವೇ ಮತ್ತೊಂದು ಸುತ್ತಿನ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

ಅರಣ್ಯ ಉಳಿಸಿ, ಜೀವನ ಕಾಪಾಡಿ
ನರೇಂದ್ರ ಮೋದಿ ಕದಂಬ ಗಿಡವನ್ನು ನೆಟ್ಟು ನಂತರ ಪರಿಸರದ ಮಹತ್ವದ ಬಗ್ಗೆ ಮಾತನಾಡಿದರು. ಸದ್ಯ ದೇಶ ಎದುರಿಸುತ್ತಿರುವ ಸಮಸ್ಯಗಳಲ್ಲಿ ಪರಿಸರ ಮಾಲಿನ್ಯ ಬಹಳ ದೊಡ್ಡದು ಎಂದು ತಿಳಿಸಿಕೊಟ್ಟರು.

ಮನೆಗೊಂದು ಮರ, ಊರಿಗೊಂದು ಉದ್ಯಾನ
ಕ್ರಿಕೆಟಿಗ ವಿರಾಟ್ ಕೊಹ್ಲಿ ಪರಿಸರ ಪ್ರೇಮವನ್ನು ಮೆರೆದರು. ಬಾಂಗ್ಲಾ ವಿರುದ್ಧ ಭಾರತ ಕ್ರಿಕೆಟ್ ತಂಡ ಜೂನ್ 18 ರಿಂದ ಕ್ರಿಕೆಟ್ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದು ವಿರಾಟ್ ಭಾರತ ಟೆಸ್ಟ್ ತಂಡದ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಹಸಿರೇ ಉಸಿರು
ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಗಿಡ ನೆಟ್ಟು ಪರಿಸರದ ಪ್ರಾಮುಖ್ಯ ಸಾರಿದರು. ಕೇಂದ್ರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಹಾಜರಿದ್ದರು.

ಪ್ರಮಾಣ ಸ್ವೀಕರಿಸಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಮತ್ತು ಅಧಿಕಾರಿಗಳಿಗೆ ಪರಿಸರ ಸಂರಕ್ಷಣೆ ಪ್ರಮಾಣ ಬೋಧಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications