ಚಿತ್ರಗಳಲ್ಲಿ: ಸಸಿ ನೆಟ್ಟ ಪ್ರಧಾನಿ ಮೋದಿ, ವಿರಾಟ್ ಕೊಹ್ಲಿ
ನವದೆಹಲಿ, ಜೂ. 05: ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ರೇಸ್ ಕೋರ್ಸ್ ರಸ್ತೆ ಬಳಿ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮತ್ತು ಜಾಗೃತಿಯನ್ನು ತಮ್ಮ ಕೃತಿಯ ಮೂಲಕವೇ ತೋರಿಸಿದರು. ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಗಿಡ ನೆಟ್ಟು ಪರಿಸರ ದಿನಾಚರಣೆ ಆಚರಿಸಿದರು.
ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವ್ಡೇಕರ್ , ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸಹ ಗಿಡ ನೆಟ್ಟು ಪರಿಸರದ ಪ್ರಾಮುಖ್ಯ ಸಾರಿದರು. ಉಳಿದಂತೆ ಅನೇಕ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಪರಿಸರ ದಿನವನ್ನು ಆಚರಿಸಿದವು.
ಪ್ರತಿದಿನ ಹೆಚ್ಚುತ್ತಿರುವ ವಾತಾವರಣದ ತಾಪಮಾನ, ಭೂಕಂಪ, ಕುಡಿಯುವ ನೀರಿನ ಸಮಸ್ಯೆ, ನಗರಗಳಲ್ಲಿ ಹೆಚ್ಚಾಗಿರುವ ವಾಯು ಮಾಲಿನ್ಯ, ಕಲುಷಿತ ವಾತಾವರಣ ಎಲ್ಲವನ್ನು ಒಂದು ಕ್ಷಣ ನೆನೆದರೆ ಭಯವಾಗುತ್ತದೆ. ಪ್ರತಿಯೊಬ್ಬರು ಪರಿಸರ ಸಂರಕ್ಷಣಗೆ ಇಂದಿನಿಂದಲೇ ಕಂಕಣ ಬದ್ಧರಾಗಬೇಕಿದೆ. ಪರಿಸರ ದಿನಾಚರಣೆಯ ಜತೆ ಮತ್ತಷ್ಟು ಸುದ್ದಿಗಳು ಚಿತ್ರಗಳಲ್ಲಿ....(ಪಿಟಿಐ ಚಿತ್ರಗಳು)

ಗಿಡ ನೆಡಿ, ಗಿಡ ನೆಡಿ
ವಿಶ್ವಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ರೇಸ್ ಕೋರ್ಸ್ ರಸ್ತೆ ಬಳಿ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮತ್ತು ಜಾಗೃತಿ ಮೂಡಿಸಿದರು. ಪ್ರಧಾನಿ ಸದ್ಯವೇ ಮತ್ತೊಂದು ಸುತ್ತಿನ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

ಅರಣ್ಯ ಉಳಿಸಿ, ಜೀವನ ಕಾಪಾಡಿ
ನರೇಂದ್ರ ಮೋದಿ ಕದಂಬ ಗಿಡವನ್ನು ನೆಟ್ಟು ನಂತರ ಪರಿಸರದ ಮಹತ್ವದ ಬಗ್ಗೆ ಮಾತನಾಡಿದರು. ಸದ್ಯ ದೇಶ ಎದುರಿಸುತ್ತಿರುವ ಸಮಸ್ಯಗಳಲ್ಲಿ ಪರಿಸರ ಮಾಲಿನ್ಯ ಬಹಳ ದೊಡ್ಡದು ಎಂದು ತಿಳಿಸಿಕೊಟ್ಟರು.

ಮನೆಗೊಂದು ಮರ, ಊರಿಗೊಂದು ಉದ್ಯಾನ
ಕ್ರಿಕೆಟಿಗ ವಿರಾಟ್ ಕೊಹ್ಲಿ ಪರಿಸರ ಪ್ರೇಮವನ್ನು ಮೆರೆದರು. ಬಾಂಗ್ಲಾ ವಿರುದ್ಧ ಭಾರತ ಕ್ರಿಕೆಟ್ ತಂಡ ಜೂನ್ 18 ರಿಂದ ಕ್ರಿಕೆಟ್ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದು ವಿರಾಟ್ ಭಾರತ ಟೆಸ್ಟ್ ತಂಡದ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಹಸಿರೇ ಉಸಿರು
ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಗಿಡ ನೆಟ್ಟು ಪರಿಸರದ ಪ್ರಾಮುಖ್ಯ ಸಾರಿದರು. ಕೇಂದ್ರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಹಾಜರಿದ್ದರು.

ಪ್ರಮಾಣ ಸ್ವೀಕರಿಸಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಮತ್ತು ಅಧಿಕಾರಿಗಳಿಗೆ ಪರಿಸರ ಸಂರಕ್ಷಣೆ ಪ್ರಮಾಣ ಬೋಧಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications