ಕೊರೊನಾ ವೈರಸ್ ಲಸಿಕೆ ಪೂರೈಕೆಗೆ ಭಾರತದ ಸಹಕಾರ ಬೇಕು: ಬಿಲ್ ಗೇಟ್ಸ್
ನವದೆಹಲಿ, ಸೆಪ್ಟೆಂಬರ್ 15: ಜಾಗತಿಕ ಮಟ್ಟದಲ್ಲಿ ಭಾರತವು ಮುಂಚೂಣಿ ಲಸಿಕೆ ಉತ್ಪಾದಕ ದೇಶವಾಗಿರುವುದರಿಂದ ಇಡೀ ಜಗತ್ತು ಭಾರತದತ್ತ ನೋಡುತ್ತಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಹೇಳಿದ್ದಾರೆ.
'ಭಾರತವು ಮುಂಚೂಣಿ ಲಸಿಕೆ ಉತ್ಪಾದನಾ ದೇಶವಾಗಿದೆ. ಕೋವಿಡ್ 19 ಲಸಿಕೆಗಳ ಉತ್ಪಾದನೆಗೆ ನಮಗೆ ಭಾರತದ ಸಹಕಾರ ಬೇಕಿದೆ. ಅಭಿವೃದ್ಧಿಶೀಲ ದೇಶಗಳಿಗೆ ಲಸಿಕೆಯಲ್ಲಿ ಕೆಲವು ಲಭ್ಯವಾಗಬಹುದು ಎಂಬ ಕಾರಣಕ್ಕೆ ಜಗತ್ತು ಭಾರತದತ್ತ ನೀಡುತ್ತಿದೆ' ಎಂದು ಬಿಲ್ ಗೇಟ್ಸ್ ತಿಳಿಸಿದ್ದಾರೆ.
ಪಿಟಿಐ ಜತೆ ಮಾತನಾಡಿರುವ ಬಿಲ್ ಗೇಟ್ಸ್, ಕೊರೊನಾ ವೈರಸ್ ಲಸಿಕೆಗಾಗಿ ಭಾರತದೊಂದಿಗೆ ಮಧ್ಯಸ್ಥಿಕೆ ವಹಿಸುವ ತಮ್ಮ ಯೋಜನೆ ಬಗ್ಗೆ ತಿಳಿಸಿದ್ದಾರೆ. 'ಲಸಿಕೆಯನ್ನು ತೆಗೆದುಕೊಳ್ಳುವ ಮತ್ತು ಭಾರತದಲ್ಲಿ ಉತ್ಪಾದನೆ ಮಾಡುವುದರಲ್ಲಿ ಮಧ್ಯಸ್ಥಿಕೆ ವಹಿಸಲು ಯೋಜನೆ ಇದೆ. ಆ ಲಸಿಕೆ ಆಸ್ಟ್ರಾಜೆನೆಕಾ, ಆಕ್ಸ್ಫರ್ಡ್, ನೋವಾವ್ಯಾಕ್ಸ್ ಅಥವಾ ಜಾನ್ಸನ್ ಆಂಡ್ ಜಾನ್ಸನ್ ಯಾರಿಂದ ಬಂದರೂ ಅದಕ್ಕೆ ಸಿದ್ಧ' ಎಂದಿದ್ದಾರೆ.

'ಮುಂದಿನ ವರ್ಷದ ವೇಳೆಗೆ ಭಾರತದಲ್ಲಿ ಭಾರಿ ದೊಡ್ಡ ಮಟ್ಟದಲ್ಲಿ ಕೋವಿಡ್ 19 ಲಸಿಕೆ ಉತ್ಪಾದನೆ ಶುರುವಾಗುವ ಸಾಧ್ಯತೆ ಇದೆ. ಖಂಡಿತವಾಗಿಯೂ ನಾವು ಭಾರತದಿಂದ ಎಷ್ಟು ಸಾಧ್ಯವೋ ಅಷ್ಟು ಬೇಗ ಲಸಿಕೆ ಪಡೆಯಲು ಬಯಸಿದ್ದೇವೆ. ಅದು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ತಿಳಿದ ಬಳಿಕ ಮುಂದಿನ ವರ್ಷ ನಮ್ಮ ಯೀಜನೆಗಳ ಮೇಲೆ ಗಮನ ಹರಿಸುತ್ತೇವೆ' ಎಂದು ಹೇಳಿದ್ದಾರೆ.
ಹಲವು ಲಸಿಕೆಗಳು ಮುಂದಿನ ವರ್ಷ ಮೊದಲ ಮೂರು ತಿಂಗಳಲ್ಲಿ ಲಭ್ಯವಾಗುವ ಆಶಾವಾದ ಹೊಂದಿದ್ದೇನೆ. ಇನ್ನು ಕೆಲವು ಲಸಿಕೆಗಳು ಅವುಗಳ ಅಂತಿಮ ಹಂತದಲ್ಲಿ ಇರಲಿವೆ ಎಂದು ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications