ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ: ಮೋದಿ ಸೇರಿದಂತೆ ಗಣ್ಯರ ಶುಭಹಾರೈಕೆ
ಪತ್ರಕರ್ತರ ಸ್ವಾತಂತ್ರ್ಯ ಕಸಿದುಕೊಳ್ಳಲಾಗುತ್ತಿದೆ ಎಂಬ ಕೂಗು ಹಲವು ಕಾಲದಿಂದಲೂ ಕೇಳಿಬರುತ್ತಿದೆ. ಹಲವೆಡೆ ಪತ್ರಕರ್ತರ ಕೊಲೆಯಂಥ ಘಟನೆಗಳೂ ದಾಖಲಾಗಿವೆ.
ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಬ ಎಂದು ಕರೆಯಿಸಿಕೊಳ್ಳುವ ಪತ್ರಿಕೋದ್ಯಮಕ್ಕಿರುವ ಸಾಮಾಜಿಕ ಬದ್ಧತೆ ಹಲವು. ಆ ಬದ್ಧತೆಯನ್ನು ಉಳಿಸಿಕೊಳ್ಳಲು ಸ್ವತಂತ್ರ್ಯವಾಗಿ, ಪೂರ್ವಗ್ರಹಮುಕ್ತವಾಗಿ ಕೆಲಸ ಮಾಡಬೇಕಾದ್ದು ಅನಿವಾರ್ಯ. ಪತ್ರಿಕಾ ಸ್ವಾತಂತ್ರ್ಯವನ್ನು ರಕ್ಷಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 3 ನೇ ದಿನಾಂಕವನ್ನು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನಾಗಿ ಆಚರಿಸಲಾಗುತ್ತದೆ.
1993 ರಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಈ ದಿನವನ್ನು ಆಚರಿಸಲು ನಿರ್ಧರಿಸಿತು. ಪತ್ರಿಕಾ ಸ್ವಾತಂತ್ರ್ಯದ ಮೂಲಭೂತ ಸಿದ್ಧಾಂತಗಳ ರಕ್ಷಣೆ, ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆ, ವೃತ್ತಿ ಧರ್ಮ ಪರಿಪಾಲನೆಯ ಸಮಯದಲ್ಲಿ ಪ್ರಾಣತೆತ್ತವರಿಗೆ ಸಂತಾಪ ಸೂಚಿಸುವುದು... ಈ ಎಲ್ಲಾ ಉದ್ದೇಶಗಳಿಂದ ಈ ದಿನವನ್ನು ಆಚರಿಸಲಾಗುತ್ತದೆ.
ಇಂದು ವಿಶ್ವದಾದ್ಯಂತ ಪತ್ರಿಕಾ ಸ್ವಾತಂತ್ರ್ಯದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಈ ದಿನಕ್ಕಾಗಿ ಶುಭಾಶಯ ಕೋರಿದ್ದಾರೆ.
|
ಪತ್ರಿಕಾ ಸ್ವಾತಂತ್ರ್ಯದಿಂದ ಪ್ರಜಾಪ್ರಭುತ್ವಕ್ಕೆ ಬಲ
ಪತ್ರಿಕಾ ಸ್ವಾತಂತ್ರ್ಯ ನಮ್ಮ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತದೆ. ಪತ್ರಿಕಾ ಸ್ವಾತಂತ್ರ್ಯವನ್ನು ಬೆಂಬಲಿಸುವತ್ತ ನಮ್ಮ ಬದ್ಧತೆಯನ್ನು ಬೆಳೆಸಿಕೊಳ್ಳೋಣ. ಇದು ಮಾನವೀಯತೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
|
ಎಲ್ಲ ಪತ್ರಕರ್ತರಿಗೂ ರಕ್ಷಣೆ ಸಿಗಲಿ
ಉತ್ತಮ ಪತ್ರಿಕೋದ್ಯಮ ಸತ್ಯವನ್ನು ಹುಡುಕುತ್ತದೆ. ಎಲ್ಲ ಪತ್ರಕರ್ತರಿಗೂ ರಕ್ಷಣೆ ಸಿಗಬೇಕು. ಅವರ ಮೇಲೆ ದೌರ್ಜನ್ಯ ನಡೆಯಬಾರದು, ಬೆದರಿಕೆ ಒಡ್ಡಬಾರದು ಎಂದಿದ್ದಾರೆ ಮೊಹ್ಮದ್ ನಶೀದ್.
|
ಎಲ್ಲ ಧೈರ್ಯವಂತ ಪತ್ರಕರ್ತರಿಗೂ ನಮನ
ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವುದಕ್ಕಾಗಿ ಮತ್ತು ನಮ್ಮ ದೇಶ ಹಿತಕ್ಕಾಗಿ ಪ್ರತಿದಿನ ಧೈರ್ಯವಾಗಿ ಹೋರಾಡುತ್ತಿರುವ ಎಲ್ಲ ಧೈರ್ಯವಂತ ಪತ್ರಕರ್ತರಿಗೂ ನನ್ನ ನಮನ ಎಂದಿದ್ದಾರೆ ಜ್ಯೂತಿರಾದಿತ್ಯ ಸಿಂದಿಯಾ.
|
ಪತ್ರಕರ್ತರಿಂದಲೇ ಅಪಾಯ!
ಕೆಲವು ಪತ್ರಕರ್ತರೇ ದೇಶಕ್ಕೆ ಅತೀ ದೊಡ್ಡ ಅಪಾಯವಾಗಿದ್ದಾರೆ ಎಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದಂದು ನೆನಪಿಸಿಕೊಂಡಿದ್ದಾರೆ ಮುರ್ತುಜ್ ಎಂಬುವವರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications