ವಿಶ್ವ ಪರಿಸರ ದಿನ ಇಂದು: ವಿಶ್ವಸಂಸ್ಥೆ ಘೋಷ ವಾಕ್ಯ ಏನು?
ಬೆಂಗಳೂರು, ಜೂನ್ 05: ಇಂದು ಜಗತ್ತಿನಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸುವುದು ಆ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ನಿರ್ಮಾಣ ಮಾಡುವುದು ಈ ಸದ್ಯದ ತುರ್ತು ಎಂದೇ ಹೇಳಲಾಗುತ್ತಿದೆ.
ಈ ಬಾರಿಯ ವಿಶ್ವ ಪರಿಸರ ದಿನಕ್ಕೆ ವಿಶ್ವಸಂಸ್ಥೆಯು ಬೀಟ್ ದಿ ಏರ್ ಪೊಲ್ಯೂಶನ್ (ವಾಯುಮಾಲಿನ್ಯವನ್ನು ಸೋಲಿಸಿ) #beatairpollution ಘೋಷ ವಾಕ್ಯವನ್ನು ನೀಡಿದೆ.
ವಾಯುಮಾಲಿನ್ಯವನ್ನು ತಡೆಯುವುದು ಪ್ರಸ್ತುತದ ತುರ್ತು ಎಂದು ವಿಶ್ವಸಂಸ್ಥೆ ಹೇಳುತ್ತಿದ್ದು. ವಾಯುಮಾಲಿನ್ಯ ತಡೆಯದಿದ್ದರೆ ಕರಾಳ ದಿನಗಳನ್ನು ನೋಡಬೇಕಾಗುತ್ತದೆ. ವಾಯುಮಾಲಿನ್ಯದಿಂದ ಮಾನವ ಎದುರಿಸಬೇಕಾದ ಸಂಕಷ್ಟಗಳೇನು? ವೈಯಕ್ತಿಕ ಮಟ್ಟದಲ್ಲಿ ವ್ಯಕ್ತಿಗೆ ಆಗುವ ತೊಂದರೆಗಳೇನು? ವಾತಾವರಣದ ಮೇಲೆ ಅದರ ಪ್ರಭಾವಗಳೇನು? ಎಂಬಿತ್ಯಾದಿ ವಿಷಯಗಳ ಬಗ್ಗೆ ವಿಶ್ವಸಂಸ್ಥೆಯು ಜಾಗೃತಿ ಮೂಡಿಸುತ್ತಿದೆ.

ಪರಿಸರ ದಿನಾಚರಣೆ ಪ್ರಯುಕ್ತ ಭಾರತದಲ್ಲೂ ಬಹುತೇಕ ಎಲ್ಲ ನಗರಗಳಲ್ಲೂ ಒಂದಲ್ಲಾ ಒಂದು ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಹಲವು ವರ್ಷಗಳಿಂದ ಹಲವು ಪರಿಸರ ಪರ ಸಂಘಟನೆಗಳು ಪರಿಸರ ದಿನಾಚರಣೆಯನ್ನು ಜವಾಬ್ದಾರಿಯುತವಾಗಿ ಆಚರಿಸುತ್ತಾ ಬಂದಿವೆ.
ಸಾಮಾಜಿಕ ಜಾಲತಾಣದಲ್ಲಿ ಸಹ ಪರಿಸರ ದಿನಾಚರಣೆ ಕುರಿತು ಕೋಟ್ಯಂತರ ಮಂದಿ ತಮ್ಮ ಸಂದೇಶಗಳನ್ನು, ಒರಿಸರವನ್ನು ಉಳಿಸಿಕೊಳ್ಳಲೇಬೇಕಾದ ತುರ್ತಿನ ಬಗ್ಗೆ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ತಂತ್ರಜ್ಞಾನ ಯುಗದ ಸಾಮಾಜಿಕ ಜಾಲತಾಣ ವೀರರು ತಮ್ಮ ಫ್ರೊಫೈಲ್ ಪಿಕ್ಚರ್ ಅನ್ನು ಹಸಿರು ಮಾಡಿಕೊಳ್ಳುವ ಬದಲಿಗೆ ಒಂದು ಗಿಡ ನೆಟ್ಟು ಅದರ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ ಎಂದು ಹಲವರು ಸಂದೇಶವನ್ನು ನೀಡಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications