Get Updates
Get notified of breaking news, exclusive insights, and must-see stories!

Wrestlers protest: ವಿಶ್ವಮಟ್ಟದಲ್ಲಿ ಸುದ್ದಿಯಾದ ಪ್ರತಿಭಟನೆ, WFI ಅಮಾನತು ಮಾಡುವ ಎಚ್ಚರಿಕೆ ನೀಡಿದ ವಿಶ್ವ ಕುಸ್ತಿ ಸಂಸ್ಥೆ!

ನವದೆಹಲಿ, ಮೇ. 31: ದೇಶದ ಕುಸ್ತಿಪಟುಗಳನ್ನು ಸರ್ಕಾರ, ಪೊಲಿಸರು ನಡೆಸಿಕೊಳ್ಳುತ್ತಿರುವ ಬಗ್ಗೆ ದೇಶದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಟೀಕೆಗಳು ವ್ಯಕ್ತವಾಗಿದ್ದು, ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್‌ಗೆ ಎಚ್ಚರಿಕೆ ನೀಡಿದೆ. ಕ್ರೀಡಾಪಟುಗಳ ಮೇಲೆ ನಡೆದ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿರುವ ವಿಶ್ವಮಟ್ಟದ ಕುಸ್ತಿ ಆಡಳಿತ ಸಂಸ್ಥೆಯಾದ ಯುನೈಟೆಡ್‌ ವರ್ಲ್ಡ್‌ ವ್ರೆಸ್ಲಿಂಗ್‌ (UWW) ಭಾರತಕ್ಕೆ ಎಚ್ಚರಿಕೆ ನೀಡಿದೆ.

ವಿಶ್ವ ಕುಸ್ತಿ ಆಡಳಿತ ಮಂಡಳಿ (ಯುಡಬ್ಲ್ಯೂಡಬ್ಲ್ಯು) ಮಂಗಳವಾರ, ಮೇ 30 ರಂದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿದೆ. ನವದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳನ್ನು ತಾತ್ಕಾಲಿಕವಾಗಿ ಬಂಧಿಸಿರುವ ಬಗ್ಗೆ ನಿರಾಶೆಯನ್ನು ವ್ಯಕ್ತಪಡಿಸಿ, ಇತ್ತೀಚಿನ ಘಟನೆಗಳನ್ನು ಆಡಳಿತವು ಗಮನಿಸಿದೆ ಎಂದು ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಹೇಳಿದೆ.

World wrestling body threatens to suspend Wrestling Federation of India

ಮುಂದಿನ ಚುನಾಯಿತ ಸಾಮಾನ್ಯ ಸಭೆಯ ಬಗ್ಗೆ ಮಾಹಿತಿ ನೀಡದಿದ್ದರೆ ಭಾರತದ ಕುಸ್ತಿ ಫೆಡರೇಶನ್ ಅನ್ನು ಅಮಾನತುಗೊಳಿಸುವುದಾಗಿ ವಿಶ್ವ ಕುಸ್ತಿ ಆಡಳಿತ ಮಂಡಳಿ ಬೆದರಿಕೆ ಹಾಕಿದೆ. ಕುಸ್ತಿಪಟುಗಳ ಆರಂಭಿಕ ಪ್ರತಿಭಟನೆಯ ನಂತರ ಕ್ರೀಡಾ ಸಚಿವಾಲಯವು ಡಬ್ಲ್ಯುಎಫ್‌ಐ ಮತ್ತು ಅದರ ಚಟುವಟಿಕೆಗಳನ್ನು ಅಮಾನತುಗೊಳಿಸಿದ ನಂತರ ಮುಂದಿನ ಚುನಾಯಿತ ಸಾಮಾನ್ಯ ಸಭೆಯನ್ನು ನಡೆಸಲು 45 ದಿನಗಳ ಗಡುವನ್ನು ಜನವರಿಯಲ್ಲಿ ನಿಗದಿಪಡಿಸಲಾಯಿತು.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ವಿಶ್ವ ಪದಕ ವಿಜೇತೆ ವಿನೇಶ್ ಫೋಗಟ್, WFI ಮಾಜಿ ಮುಖ್ಯಸ್ಥ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರೆಸಿದ್ದಾರೆ. ಇವರು ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ.

World wrestling body threatens to suspend Wrestling Federation of India

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತ್ವರಿತ ಕ್ರಮಕ್ಕೆ ಆಗ್ರಹಿಸಿ ಮೇ 30 ರ ಮಂಗಳವಾರದಂದು ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಮುಳುಗಿಸುವುದಾಗಿ ಹೇಳಿದ ಹಾಕಿದ ಕೆಲವೇ ಗಂಟೆಗಳ ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ ಹೇಳಿಕೆ ಬಂದಿದೆ.

ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗೆಯಲ್ಲಿ ಮುಳುಗಿಸಲು ಮಂಗಳವಾರ ಹರಿದ್ವಾರದ ಹರ್ ಕಿ ಪೌರಿಗೆ ತಲುಪಿದ್ದರು. ಆದರೆ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ನರೇಶ್ ಟಿಕಾಯತ್ ಸೇರಿದಂತೆ ರೈತ ಮಾತಿಗೆ ಒಪ್ಪಿಗೆ ಸೂಚಿಸಿ ತಮ್ಮ ನಿರ್ಧಾರ ಬದಲಿಸಿದ್ದರು. ಆರೋಪಿ ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ 5 ದಿನಗಳ ಗಡುವು ನೀಡಿದ್ದಾರೆ.

ಇದಕ್ಕೂ ಮುನ್ನ ಜಂತರ್ ಮಂತರ್ ಸ್ಥಳದಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರನ್ನು ಬಂಧಿಸಲಾಗಿತ್ತು. ಮೇ 28 ರ ಭಾನುವಾರದಂದು ಪೊಲೀಸರು ಪ್ರತಿಭಟನಾ ಪ್ರದೇಶವನ್ನು ತೆರವುಗೊಳಿಸಿದರು. ಜಂತರ್ ಮಂತರ್ ನಲ್ಲಿ ಕುಸ್ತಿಪಟುಗಳಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+