Get Updates
Get notified of breaking news, exclusive insights, and must-see stories!

ಲಾಲು ಮನೆಯಲ್ಲಿ 1 ಕೋಟಿ, 600 ಕೋಟಿ ಮೌಲ್ಯದ ಅಕ್ರಮ ವಹಿವಾಟು ಪತ್ತೆ

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣದಲ್ಲಿ ಸಿಬಿಐನಿಂದ ಎರಡನೇ ಬಾರಿಗೆ ವಿಚಾರಣೆಗೆ ಗೈರಾಗಿದ್ದಾರೆ.

ಗುವಾಹಟಿ, ಮಾರ್ಚ್‌ 11: ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರ ಸ್ಥಳಗಳಲ್ಲಿ ಶೋಧ ನಡೆಸಿದ ಒಂದು ದಿನದ ನಂತರ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ತನ್ನ ತನಿಖಾಧಿಕಾರಿಗಳು 1 ಕೋಟಿ ರೂಪಾಯಿ ನಗದು ಮತ್ತು 600 ಕೋಟಿ ರೂಪಾಯಿ ಮೌಲ್ಯದ ಅಕ್ರಮ ವಹಿವಾಟನ್ನು ಪತ್ತೆ ಹಚ್ಚಿದೆ.

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣದಲ್ಲಿ ಸಿಬಿಐನಿಂದ ಎರಡನೇ ಬಾರಿಗೆ ವಿಚಾರಣೆಗೆ ಗೈರಾಗಿದ್ದಾರೆ. ಸಿಬಿಐ ದಾಖಲಿಸಿರುವ ಭೂ ಉದ್ಯೋಗ ಹಗರಣ ಪ್ರಕರಣದಲ್ಲಿ ಹಣ ವರ್ಗಾವಣೆ ಪ್ರಕರಣದಲ್ಲಿ 24 ಸ್ಥಳಗಳಲ್ಲಿ ಇಡಿ ಶೋಧ ನಡೆಸಿದ್ದು, ಈ ವೇಳೆ 1900 ಅಮೆರಿಕನ್ ಡಾಲರ್, 540 ಗ್ರಾಂ ಚಿನ್ನದ ಗಟ್ಟಿ ಮತ್ತು 1.5 ಕೆಜಿಗೂ ಹೆಚ್ಚು ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದೆ.

orth 1 crore rupees, 600 crores proceeds of crime were found in Lalus house

ಇಡಿ ಮಾಡಿರುವ ಟ್ವೀಟ್‌ನಲ್ಲಿ ಈ ಶೋಧನೆಯ ಸಮಯದಲ್ಲಿ ಸುಮಾರು 600 ಕೋಟಿ ರೂಪಾಯಿಗಳ ಅಪರಾಧದ ಆದಾಯವನ್ನು ಪತ್ತೆಹಚ್ಚಿದೆ ಎಂದು ಹೇಳಿದೆ. ಯುಪಿಎ ಅವಧಿಯ ಹಗರಣದಲ್ಲಿ ಲಾಲು ಅವರು ರೈಲ್ವೆ ಸಚಿವರಾಗಿದ್ದಾಗ ಭೂಮಿಗೆ ಬದಲಾಗಿ ಜನರಿಗೆ ರೈಲ್ವೆ ಉದ್ಯೋಗಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬ ಆರೋಪದಲ್ಲಿ ತನಿಖೆಗಳು ವೇಗಗೊಂಡಿದ್ದರಿಂದ ಸಿಬಿಐ ತೇಜಸ್ವಿ ಯಾದವ್‌ ಅವರಿಗೆ ಶನಿವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಮಾಡಿದೆ.

ಈ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿ ಕ್ರಮಗಳು ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಲಾಲು ಪ್ರಸಾದ್ ಅವರೇ ಇಡಿ ಹುಡುಕಾಟದ ಬಗ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತನ್ನ ಹೆಣ್ಣುಮಕ್ಕಳು, ಪುಟ್ಟ ಮೊಮ್ಮಕ್ಕಳು ಮತ್ತು ಅವರ ವಿರುದ್ಧ ರಾಜಕೀಯ ಹೋರಾಟ ನಡೆಸಲು ಬಿಜೆಪಿ ತುಂಬಾ ಕೆಳಮಟ್ಟಕ್ಕೆ ಇಳಿದಿದೆ. ಆಧಾರರಹಿತ ಪ್ರತೀಕಾರದ ಪ್ರಕರಣಗಳಲ್ಲಿ ಗರ್ಭಿಣಿ ಸೊಸೆ 15 ಗಂಟೆಗಳ ಕಾಲ ಕುಳಿಸಿದ್ದಾರೆ ಎಂದು ಆರೋಪಿಸಿಲಾಗಿದೆ.

orth 1 crore rupees, 600 crores proceeds of crime were found in Lalus house

ನಾವು ತುರ್ತು ಪರಿಸ್ಥಿತಿಯ ಕರಾಳ ಹಂತವನ್ನೂ ನೋಡಿದ್ದೇವೆ. ನಾವು ಆ ಯುದ್ಧವನ್ನೂ ಮಾಡಿದ್ದೇವೆ. ಸಂಘ ಮತ್ತು ಬಿಜೆಪಿ ವಿರುದ್ಧ ನನ್ನ ಸೈದ್ಧಾಂತಿಕ ಹೋರಾಟವು ಮುಂದುವರಿಯುತ್ತದೆ. ನಾನು ಅವರ ಮುಂದೆ ಎಂದಿಗೂ ನಿಮ್ಮ ರಾಜಕೀಯಕ್ಕೆ ತಲೆಬಾಗಲ್ಲ. ನನ್ನ ಕುಟುಂಬ ಮತ್ತು ಪಕ್ಷದ ಯಾರೂ ತಲೆಬಾಗುವುದಿಲ್ಲ ಎಂದು ಪ್ರಸಾದ್ ಗುರುವಾರ ತಡರಾತ್ರಿ ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕರು ತೇಜಸ್ವಿಯವರ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತಿಪಕ್ಷಗಳ ಧ್ವನಿಗೆ ಬಿಜೆಪಿ ಏಕೆ ಹೆದರುತ್ತಿದೆ ಎಂದು ಪ್ರಶ್ನಿಸಿ ಮೋದಿ ಸರ್ಕಾರವು ದಮನಕಾರಿ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+