ಲಾಲು ಮನೆಯಲ್ಲಿ 1 ಕೋಟಿ, 600 ಕೋಟಿ ಮೌಲ್ಯದ ಅಕ್ರಮ ವಹಿವಾಟು ಪತ್ತೆ
ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣದಲ್ಲಿ ಸಿಬಿಐನಿಂದ ಎರಡನೇ ಬಾರಿಗೆ ವಿಚಾರಣೆಗೆ ಗೈರಾಗಿದ್ದಾರೆ.
ಗುವಾಹಟಿ, ಮಾರ್ಚ್ 11: ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರ ಸ್ಥಳಗಳಲ್ಲಿ ಶೋಧ ನಡೆಸಿದ ಒಂದು ದಿನದ ನಂತರ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ತನ್ನ ತನಿಖಾಧಿಕಾರಿಗಳು 1 ಕೋಟಿ ರೂಪಾಯಿ ನಗದು ಮತ್ತು 600 ಕೋಟಿ ರೂಪಾಯಿ ಮೌಲ್ಯದ ಅಕ್ರಮ ವಹಿವಾಟನ್ನು ಪತ್ತೆ ಹಚ್ಚಿದೆ.
ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣದಲ್ಲಿ ಸಿಬಿಐನಿಂದ ಎರಡನೇ ಬಾರಿಗೆ ವಿಚಾರಣೆಗೆ ಗೈರಾಗಿದ್ದಾರೆ. ಸಿಬಿಐ ದಾಖಲಿಸಿರುವ ಭೂ ಉದ್ಯೋಗ ಹಗರಣ ಪ್ರಕರಣದಲ್ಲಿ ಹಣ ವರ್ಗಾವಣೆ ಪ್ರಕರಣದಲ್ಲಿ 24 ಸ್ಥಳಗಳಲ್ಲಿ ಇಡಿ ಶೋಧ ನಡೆಸಿದ್ದು, ಈ ವೇಳೆ 1900 ಅಮೆರಿಕನ್ ಡಾಲರ್, 540 ಗ್ರಾಂ ಚಿನ್ನದ ಗಟ್ಟಿ ಮತ್ತು 1.5 ಕೆಜಿಗೂ ಹೆಚ್ಚು ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದೆ.

ಇಡಿ ಮಾಡಿರುವ ಟ್ವೀಟ್ನಲ್ಲಿ ಈ ಶೋಧನೆಯ ಸಮಯದಲ್ಲಿ ಸುಮಾರು 600 ಕೋಟಿ ರೂಪಾಯಿಗಳ ಅಪರಾಧದ ಆದಾಯವನ್ನು ಪತ್ತೆಹಚ್ಚಿದೆ ಎಂದು ಹೇಳಿದೆ. ಯುಪಿಎ ಅವಧಿಯ ಹಗರಣದಲ್ಲಿ ಲಾಲು ಅವರು ರೈಲ್ವೆ ಸಚಿವರಾಗಿದ್ದಾಗ ಭೂಮಿಗೆ ಬದಲಾಗಿ ಜನರಿಗೆ ರೈಲ್ವೆ ಉದ್ಯೋಗಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬ ಆರೋಪದಲ್ಲಿ ತನಿಖೆಗಳು ವೇಗಗೊಂಡಿದ್ದರಿಂದ ಸಿಬಿಐ ತೇಜಸ್ವಿ ಯಾದವ್ ಅವರಿಗೆ ಶನಿವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಮಾಡಿದೆ.
ಈ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿ ಕ್ರಮಗಳು ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಲಾಲು ಪ್ರಸಾದ್ ಅವರೇ ಇಡಿ ಹುಡುಕಾಟದ ಬಗ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತನ್ನ ಹೆಣ್ಣುಮಕ್ಕಳು, ಪುಟ್ಟ ಮೊಮ್ಮಕ್ಕಳು ಮತ್ತು ಅವರ ವಿರುದ್ಧ ರಾಜಕೀಯ ಹೋರಾಟ ನಡೆಸಲು ಬಿಜೆಪಿ ತುಂಬಾ ಕೆಳಮಟ್ಟಕ್ಕೆ ಇಳಿದಿದೆ. ಆಧಾರರಹಿತ ಪ್ರತೀಕಾರದ ಪ್ರಕರಣಗಳಲ್ಲಿ ಗರ್ಭಿಣಿ ಸೊಸೆ 15 ಗಂಟೆಗಳ ಕಾಲ ಕುಳಿಸಿದ್ದಾರೆ ಎಂದು ಆರೋಪಿಸಿಲಾಗಿದೆ.

ನಾವು ತುರ್ತು ಪರಿಸ್ಥಿತಿಯ ಕರಾಳ ಹಂತವನ್ನೂ ನೋಡಿದ್ದೇವೆ. ನಾವು ಆ ಯುದ್ಧವನ್ನೂ ಮಾಡಿದ್ದೇವೆ. ಸಂಘ ಮತ್ತು ಬಿಜೆಪಿ ವಿರುದ್ಧ ನನ್ನ ಸೈದ್ಧಾಂತಿಕ ಹೋರಾಟವು ಮುಂದುವರಿಯುತ್ತದೆ. ನಾನು ಅವರ ಮುಂದೆ ಎಂದಿಗೂ ನಿಮ್ಮ ರಾಜಕೀಯಕ್ಕೆ ತಲೆಬಾಗಲ್ಲ. ನನ್ನ ಕುಟುಂಬ ಮತ್ತು ಪಕ್ಷದ ಯಾರೂ ತಲೆಬಾಗುವುದಿಲ್ಲ ಎಂದು ಪ್ರಸಾದ್ ಗುರುವಾರ ತಡರಾತ್ರಿ ಟ್ವೀಟ್ ಮಾಡಿದ್ದಾರೆ.
ವಿರೋಧ ಪಕ್ಷದ ನಾಯಕರು ತೇಜಸ್ವಿಯವರ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತಿಪಕ್ಷಗಳ ಧ್ವನಿಗೆ ಬಿಜೆಪಿ ಏಕೆ ಹೆದರುತ್ತಿದೆ ಎಂದು ಪ್ರಶ್ನಿಸಿ ಮೋದಿ ಸರ್ಕಾರವು ದಮನಕಾರಿ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications