ಜೂನ್ 15 ರವರೆಗೆ ಪ್ರತಿಭಟನೆ ಸ್ಥಗಿತಗೊಳಿಸಲು ಕುಸ್ತಿಪಟುಗಳ ಒಪ್ಪಿಗೆ: ಪ್ರಕರಣ ಕೈಬಿಡುತ್ತೇವೆ ಎಂದ ಅನುರಾಗ್ ಠಾಕೂರ್
ನವದೆಹಲಿ, ಜೂನ್. 07: ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ಜೂನ್ 15 ರೊಳಗೆ ಪೊಲೀಸರು ಪೂರ್ಣಗೊಳಿಸುವವರೆಗೆ ಕಾಯುವಂತೆ ಸರಕಾರವು ಸೂಚಿಸಿದ ನಂತರ ಪ್ರತಿಭಟನಾನಿರತ ಕುಸ್ತಿಪಟುಗಳು ಬುಧವಾರ ತಮ್ಮ ಪ್ರತಿಭಟನೆಯನ್ನು ಒಂದು ವಾರದವರೆಗೆ ಸ್ಥಗಿತಗೊಳಿಸಲು ಒಪ್ಪಿಕೊಂಡಿದ್ದಾರೆ.
ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗಿನ ಸುಮಾರು ಐದು ಗಂಟೆಗಳ ಸಭೆಯ ನಂತರ ಕುಸ್ತಿಪಟುಗಳು, ಮೇ 28 ರಂದು ಹೊಸ ಸಂಸತ್ ಭವನದತ್ತ 'ಮಹಿಳಾ ಸಮ್ಮಾನ್ ಮಹಾಪಚಾಯತ್' ನಡೆಸಲು ಅನುಮತಿಯಿಲ್ಲದೆ ಮೆರವಣಿಗೆ ನಡೆಸಿದಾಗ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ ಎಫ್ಐಆರ್ಗಳನ್ನು ಹಿಂಪಡೆಯುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಅವರ ಪತಿ ಸತ್ಯವರ್ತ್ ಕಡಿಯಾನ್ ಮತ್ತು ಜಿತೇಂದರ್ ಕಿನ್ಹಾ ಉಪಸ್ಥಿತರಿದ್ದರು. ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧದ ಪ್ರತಿಭಟನೆಯ ಪ್ರಮುಖ ನಾಯಕರಲ್ಲಿ ಒಬ್ಬರಾದ ಡಬಲ್ ವರ್ಲ್ಡ್ ಪದಕ ವಿಜೇತ ವಿನೇಶ್ ಫೋಗಟ್ ಅವರು ಸಭೆಯಲ್ಲಿ ಭಾಗಿಯಾಗಿರಲಿಲ್ಲ.
"ಜೂನ್ 15 ರೊಳಗೆ ಪೊಲೀಸ್ ತನಿಖೆ ಪೂರ್ಣಗೊಳ್ಳಲಿದೆ ಎಂದು ನಮಗೆ ತಿಳಿಸಲಾಗಿದೆ. ಅಲ್ಲಿಯವರೆಗೆ, ಪ್ರತಿಭಟನೆಯನ್ನು ಅಮಾನತುಗೊಳಿಸುವಂತೆ ನಮಗೆ ತಿಳಿಸಲಾಗಿದೆ" ಎಂದು ಸಭೆಯ ನಂತರ ಸಾಕ್ಷಿ ಮಲಿಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಇಬ್ಬರೂ ತಮ್ಮ ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದು ಹೇಳಿದ್ದು, ಸರ್ಕಾರದ ವಿನಂತಿಯಂತೆ ಅವರು ಜೂನ್ 15 ರವರೆಗೆ ಮಾತ್ರ ತಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದ್ದಾರೆ.

ಕುಸ್ತಿಪಟುಗಳ ಸಭೆ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಮಾಜಿ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣದ ಆರೋಪ ಪಟ್ಟಿಯನ್ನು ಜೂನ್ 15 ರೊಳಗೆ ಸಲ್ಲಿಸಲಾಗುವುದು. ಜೂನ್ 30 ರೊಳಗೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಗೆ ಚುನಾವಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕುಸ್ತಿಪಟುಗಳ ಪ್ರತಿಯೊಂದು ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದ ಅವರು, ಡಬ್ಲ್ಯುಎಫ್ಐ ಮಹಿಳೆಯ ನೇತೃತ್ವದಲ್ಲಿ ಆಂತರಿಕ ದೂರು ಸಮಿತಿಯನ್ನು ಸಹ ಹೊಂದಿರುತ್ತದೆ. ಕುಸ್ತಿಪಟುಗಳು ವಿವಿಧ ಅಕಾಡೆಮಿಗಳು ಮತ್ತು ಕ್ರೀಡಾಪಟುಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ. ಬ್ರಿಜ್ಭೂಷಣ್ ಶರಣ್ ಸಿಂಗ್ ಮತ್ತು ಅವರ ಸಹಚರರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications