'ಇಂತಹ ಅವಮಾನಕ್ಕೆ ಒಳಗಾಗಿ ಪ್ರಶಸ್ತಿ, ಪದಕ ಇಟ್ಟುಕೊಂಡು ಪ್ರಯೋಜನವಿಲ್ಲ': ದೇಶದ ಹೆಮ್ಮೆಯ ಕ್ರೀಡಾಪಟುಗಳ ನೋವಿನ ನುಡಿ
ನವದೆಹಲಿ, ಮೇ. 04: ದೆಹಲಿ ಪೊಲೀಸರ ವರ್ತನೆಯಿಂದ ಮನನೊಂದ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಗುರುವಾರ ತಮ್ಮ ಪದಕ ಮತ್ತು ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಲು ಮುಂದಾಗಿದ್ದಾರೆ. ಇಂತಹ ಅವಮಾನಕ್ಕೆ ಒಳಗಾಗಿದ್ದು, ಈ ಗೌರವಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದು ನೋವಿನಿಂದ ಮಾತನಾಡಿದ್ದಾರೆ.
ಅಪ್ರಾಪ್ತ ವಯಸ್ಕರು ಸೇರಿದಂತೆ ಏಳು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23 ರಿಂದ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಜಂತರ್ಮಂತರ್ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ರಾತ್ರಿ ತಂಗಲು ಮಡಚಲು ಹಾಸಿಗೆಗಳನ್ನು ತರುತ್ತಿದ್ದಾಗ ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ನಡುವೆ ಘರ್ಷಣೆ ಸಂಭವಿಸಿದೆ.
"ಕುಸ್ತಿಪಟುಗಳನ್ನು ಈ ರೀತಿ ನಡೆಸಿಕೊಂಡರೆ, ನಾವು ಪದಕಗಳನ್ನು ಗೆದ್ದು ಏನು ಮಾಡುತ್ತೇವೆ..? ಬದಲಿಗೆ ನಾವು ಸಾಮಾನ್ಯ ಜೀವನವನ್ನು ನಡೆಸುತ್ತೇವೆ. ನಾವು ಗೆದ್ದ ಎಲ್ಲಾ ಪದಕಗಳು ಮತ್ತು ಪ್ರಶಸ್ತಿಗಳನ್ನು ಭಾರತ ಸರ್ಕಾರಕ್ಕೆ ಹಿಂದಿರುಗಿಸುತ್ತೇವೆ" ಎಂದು ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
"ಪೊಲೀಸರು ನಮ್ಮನ್ನು ತಳ್ಳಿದಾಗ, ನಿಂದಿಸಿದಾಗ, ಅನುಚಿತವಾಗಿ ವರ್ತಿಸಿದಾಗ ನಾವು ಪದ್ಮಶ್ರೀ ಪುರಸ್ಕೃತರು ಎಂಬುದನ್ನು ಸಹ ನೋಡುವುದಿಲ್ಲ. ನಾನು ಮಾತ್ರವಲ್ಲ, ಸಾಕ್ಷಿ ಮಲಿಕ್ಗೂ ಕೂಡ ಇದೇ ಆಗಿದೆ. ಅವರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಬೀದಿಯಲ್ಲಿ ಕುಳಿತು ನ್ಯಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದಾರೆ. ಆದರೆ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ" ಎಂದು ನೋವಿನಿಂದ ಸಂಕಟ ಹೊರಹಾಕಿದ್ದಾರೆ.

ನಿನ್ನೆ ರಾತ್ರಿ ಕುಸ್ತಿಪಟುಗಳು ಮತ್ತು ಕೆಲವು ದೆಹಲಿ ಪೊಲೀಸ್ ಸಿಬ್ಬಂದಿಗಳ ನಡುವಿನ ಗಲಾಟೆಯ ನಂತರ ಜಂತರ್ ಮಂತರ್ ಸ್ಥಳದಲ್ಲಿ ಭಾರೀ ಭದ್ರತೆಯನ್ನು ಬಿಗಿ ಮಾಡಲಾಗಿದೆ. ಗಲಾಟೆಯಲ್ಲಿ ಇಬ್ಬರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.
"ಎಲ್ಲಾ ಪದಕಗಳು ತೆಗೆದುಕೊಳ್ಳಿ. ನಮಗೆ ತುಂಬಾ ಅವಮಾನ ಮಾಡಲಾಗಿದೆ. ನಾವು ನಮ್ಮ ಗೌರವಕ್ಕಾಗಿ ಹೋರಾಡುತ್ತಿದ್ದೇವೆ. ಆದರೆ ನಮ್ಮನ್ನು ಅವರ ಕಾಲುಗಳ ಕೆಳಗೆ ತುಳಿಯಲಾಗುತ್ತಿದೆ. ಎಲ್ಲಾ ಪುರುಷರಿಗೆ ಮಹಿಳೆಯರನ್ನು ನಿಂದಿಸುವ ಹಕ್ಕು ಇದೆಯೇ?. ನಾವು ನಮ್ಮ ಎಲ್ಲಾ ಪದಕಗಳನ್ನು ಹಿಂದಿರುಗಿಸುತ್ತೇವೆ. ನಮ್ಮ ಪ್ರಾಣವನ್ನು ಸಹ ಕೊಡುತ್ತೇವೆ. ಆದರೆ ಕನಿಷ್ಠ ನಮಗೆ ನ್ಯಾಯವನ್ನು ಒದಗಿಸಿ" ಎಂದು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ವಿನೇಶ್ ಫೋಗಟ್ ಖಾರವಾಗಿ ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications