ಭಾರತ ಭೂಪಟ ತಪ್ಪಾಗಿ ಪ್ರಕಟಿಸಿದರೆ ಶಿಕ್ಷೆಯಂತೆ, ಏಕೆ?
ನವದೆಹಲಿ, ಮೇ 06: ಭಾರತದ ನಕಾಶೆಯಲ್ಲಿ ಸ್ವಲ್ಪವೂ ಲೋಪವಾಗದಂತೆ ಪ್ರಕಟಿಸುವುದು ಎಲ್ಲರ ಕರ್ತವ್ಯವಾಗಿದೆ. ವಿವಾದಿತ ತಾಣಗಳೆಂದು ಪರಿಗಣಿಸಿರುವ ಪ್ರದೇಶಗಳನ್ನು ನಕಾಶೆಯಿಂದ ತೆಗೆದು ಹಾಕಿದರೆ ದಂಡಾರ್ಹ ಅಪರಾಧವಾಗುತ್ತದೆ. ನಕಾಶೆ ತಿದ್ದಿದ್ದರೆ ಅಂಥ ವ್ಯಕ್ತಿ ಅಥವಾ ಸಂಸ್ಥೆಗೆ ನೂರು ಕೋಟಿ ರು ತನಕ ದಂಡ ಹಾಗೂ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ರೂಪಿಸಿದೆ.
ಕೇಂದ್ರ ಸರ್ಕಾರ ಭೌಗೋಳಿಕ ಮಾಹಿತಿ ನಿಯಂತ್ರಣ ಮಸೂದೆ (ಜಿಯೋ ಸ್ಪೇಷಿಯಲ್ ಇನ್ಪಾಮೇಷನ್ ರೆಗ್ಯುಲೇಟರಿ ಬಿಲ್) ಕರಡು ಪ್ರತಿಯನ್ನು ಸಿದ್ಧವಾಗಿದ್ದು, ಈ ಮಸೂದೆಗೆ ಸಂಸತ್ನಲ್ಲಿ ಅಂಗೀಕಾರ ದೊರೆಯಬೇಕಿದೆ.

ಒಮ್ಮೆ ಕಾನೂನು ಜಾರಿಗೊಂಡರೆ ಭಾರತದ ಭೂಪಟವನ್ನು ತಪ್ಪಾಗಿ ಮುದ್ರಿಸುವ, ಪ್ರಕಟಿಸುವ ಹಾಗೂ ಪ್ರಸರಣಗೊಳಿಸುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಈ ಮಸೂದೆ ಪ್ರಿಂಟ್ ಮಾಧ್ಯಮ ಮಾತ್ರವಲ್ಲದೆ ಅಂತರ್ಜಾಲ, ಸಾಮಾಜಿಕ ಜಾಲ ತಾಣಗಳಿಗೂ ಅನ್ವಯಿಸುತ್ತದೆ. ಲೋಪವಿರುವ ನಕಾಶೆಯನ್ನು ಹಂಚಿದರೂ ಸೈಬರ್ ಕ್ರೈಮ್ ಪೊಲೀಸರ ಕಣ್ಣಿಗೆ ಬೀಳುತ್ತೀರಿ ಎಚ್ಚರ!
ಏಕೆ ಇಷ್ಟು ಕಠಿಣ ಕ್ರಮ: ಇತ್ತೀಚೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ಲೋಕೇಶನ್ನಲ್ಲಿ ಜಮ್ಮು-ಕಾಶ್ಮೀರದ ಕೆಲ ಭಾಗಗಳು ಪಾಕಿಸ್ತಾನಕ್ಕೆ ಸೇರಿದ್ದು ಎಂದು ತೋರಿಸಲಾಗಿತ್ತು. ಈ ಪ್ರಮಾದವನ್ನು ಸಾರ್ವಜನಿಕರು ಟ್ವಿಟ್ಟರ್ ಗಮನಕ್ಕೆ ತಂದು ಸರಿಪಡಿಸಿದ್ದರು. ಅರುಣಾಚಲ ಪ್ರದೇಶವನ್ನು ಒಳಗೊಂಡ ಚೀನಾ ಭೂಪಟದ ಚಿತ್ರ ಕೂಡಾ ಅಂತರ್ಜಾಲದಲ್ಲಿ ಹರಿದಾಡಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.
ಇದಲ್ಲದೆ, ಉಪಗ್ರಹದಿಂದ ಬಂದ ಚಿತ್ರ, ವಿಮಾನ, ಬಲೂನ್, ಡ್ರೋನ್ ಅಥವಾ ಬಾಹ್ಯಾಕಾಶ ನೌಕೆಯಿಂದ ಭಾರತದ ಯಾವುದೇ ಭಾಗದ ಫೋಟೋ, ನಕ್ಷೆಗಳನ್ನು ಸಂಗ್ರಹಿಸುವುದಕ್ಕೂ ಕೇಂದ್ರ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications