ಭಾರತ ಭೂಪಟ ತಪ್ಪಾಗಿ ಪ್ರಕಟಿಸಿದರೆ ಶಿಕ್ಷೆಯಂತೆ, ಏಕೆ?
ನವದೆಹಲಿ, ಮೇ 06: ಭಾರತದ ನಕಾಶೆಯಲ್ಲಿ ಸ್ವಲ್ಪವೂ ಲೋಪವಾಗದಂತೆ ಪ್ರಕಟಿಸುವುದು ಎಲ್ಲರ ಕರ್ತವ್ಯವಾಗಿದೆ. ವಿವಾದಿತ ತಾಣಗಳೆಂದು ಪರಿಗಣಿಸಿರುವ ಪ್ರದೇಶಗಳನ್ನು ನಕಾಶೆಯಿಂದ ತೆಗೆದು ಹಾಕಿದರೆ ದಂಡಾರ್ಹ ಅಪರಾಧವಾಗುತ್ತದೆ. ನಕಾಶೆ ತಿದ್ದಿದ್ದರೆ ಅಂಥ ವ್ಯಕ್ತಿ ಅಥವಾ ಸಂಸ್ಥೆಗೆ ನೂರು ಕೋಟಿ ರು ತನಕ ದಂಡ ಹಾಗೂ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ರೂಪಿಸಿದೆ.
ಕೇಂದ್ರ ಸರ್ಕಾರ ಭೌಗೋಳಿಕ ಮಾಹಿತಿ ನಿಯಂತ್ರಣ ಮಸೂದೆ (ಜಿಯೋ ಸ್ಪೇಷಿಯಲ್ ಇನ್ಪಾಮೇಷನ್ ರೆಗ್ಯುಲೇಟರಿ ಬಿಲ್) ಕರಡು ಪ್ರತಿಯನ್ನು ಸಿದ್ಧವಾಗಿದ್ದು, ಈ ಮಸೂದೆಗೆ ಸಂಸತ್ನಲ್ಲಿ ಅಂಗೀಕಾರ ದೊರೆಯಬೇಕಿದೆ.

ಒಮ್ಮೆ ಕಾನೂನು ಜಾರಿಗೊಂಡರೆ ಭಾರತದ ಭೂಪಟವನ್ನು ತಪ್ಪಾಗಿ ಮುದ್ರಿಸುವ, ಪ್ರಕಟಿಸುವ ಹಾಗೂ ಪ್ರಸರಣಗೊಳಿಸುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಈ ಮಸೂದೆ ಪ್ರಿಂಟ್ ಮಾಧ್ಯಮ ಮಾತ್ರವಲ್ಲದೆ ಅಂತರ್ಜಾಲ, ಸಾಮಾಜಿಕ ಜಾಲ ತಾಣಗಳಿಗೂ ಅನ್ವಯಿಸುತ್ತದೆ. ಲೋಪವಿರುವ ನಕಾಶೆಯನ್ನು ಹಂಚಿದರೂ ಸೈಬರ್ ಕ್ರೈಮ್ ಪೊಲೀಸರ ಕಣ್ಣಿಗೆ ಬೀಳುತ್ತೀರಿ ಎಚ್ಚರ!
ಏಕೆ ಇಷ್ಟು ಕಠಿಣ ಕ್ರಮ: ಇತ್ತೀಚೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ಲೋಕೇಶನ್ನಲ್ಲಿ ಜಮ್ಮು-ಕಾಶ್ಮೀರದ ಕೆಲ ಭಾಗಗಳು ಪಾಕಿಸ್ತಾನಕ್ಕೆ ಸೇರಿದ್ದು ಎಂದು ತೋರಿಸಲಾಗಿತ್ತು. ಈ ಪ್ರಮಾದವನ್ನು ಸಾರ್ವಜನಿಕರು ಟ್ವಿಟ್ಟರ್ ಗಮನಕ್ಕೆ ತಂದು ಸರಿಪಡಿಸಿದ್ದರು. ಅರುಣಾಚಲ ಪ್ರದೇಶವನ್ನು ಒಳಗೊಂಡ ಚೀನಾ ಭೂಪಟದ ಚಿತ್ರ ಕೂಡಾ ಅಂತರ್ಜಾಲದಲ್ಲಿ ಹರಿದಾಡಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.
ಇದಲ್ಲದೆ, ಉಪಗ್ರಹದಿಂದ ಬಂದ ಚಿತ್ರ, ವಿಮಾನ, ಬಲೂನ್, ಡ್ರೋನ್ ಅಥವಾ ಬಾಹ್ಯಾಕಾಶ ನೌಕೆಯಿಂದ ಭಾರತದ ಯಾವುದೇ ಭಾಗದ ಫೋಟೋ, ನಕ್ಷೆಗಳನ್ನು ಸಂಗ್ರಹಿಸುವುದಕ್ಕೂ ಕೇಂದ್ರ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications