ತೀವ್ರಗೊಳ್ಳಲಿದೆ ಯಾಸ್ ಚಂಡಮಾರುತ; ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಸೂಚನೆ
ನವದೆಹಲಿ, ಮೇ 25: ಬಂಗಾಳ ಕೊಲ್ಲಿಯ ಪೂರ್ವ ಕೇಂದ್ರ ಭಾಗದಲ್ಲಿ ವಾಯುಭಾರ ಕುಸಿತದಿಂದ ಯಾಸ್ ಚಂಡಮಾರುತ ಸೃಷ್ಟಿಯಾಗಿದ್ದು, ಮೇ 23ರಿಂದ ಮೇ 27ರವರೆಗೂ ಚಂಡಮಾರುತ ತನ್ನ ಆರ್ಭಟ ತೋರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಲಿದ್ದು, ಸೋಮವಾರ ರಾತ್ರಿಯೂ ಈ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗಿರುವುದಾಗಿ ಮಾಹಿತಿ ನೀಡಿದೆ.
ಸೋಮವಾರ ರಾತ್ರಿ 11.30ರ ನಂತರ ಒಡಿಶಾದ ಪಾರದೀಪ್ ದಕ್ಷಿಣ ಆಗ್ನೇಯ ಭಾಗದ 390 ಕಿ.ಮೀ ಕೇಂದ್ರದಲ್ಲಿ, ಬಾಲಾಸೋರ್ನ ದಕ್ಷಿಣ ಆಗ್ನೇಯದ 490 ಕಿ.ಮೀ ಕೇಂದ್ರದಲ್ಲಿ, ಪಶ್ಚಿಮ ಬಂಗಾಳದ ದಿಗಾದಲ್ಲಿನ ದಕ್ಷಿಣ ಆಗ್ನೇಯ ದಿಕ್ಕಿನ 470 ಕಿ.ಮೀ ಕೇಂದ್ರದಲ್ಲಿ ಹಾಗೂ ಬಾಂಗ್ಲಾದೇಶದ ಖೇಪುಪಾರಾದ 500 ಕಿ.ಮೀ ಕೇಂದ್ರಿತವಾಗಿ ಚಂಡಮಾರುತದ ಪ್ರಭಾವ ಗೋಚರಿಸಿರುವುದಾಗಿ ಇಲಾಖೆ ತಿಳಿಸಿದೆ. ಮುಂದೆ ಓದಿ...

ಮುಂದಿನ ಕೆಲವು ಗಂಟೆಗಳಲ್ಲಿ ತೀವ್ರಗೊಳ್ಳಲಿದೆ ಚಂಡಮಾರುತ
ಮುಂದಿನ ಕೆಲವು ಗಂಟೆಗಳಲ್ಲಿ ಚಂಡಮಾರುತ ಉತ್ತರ ವಾಯವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುತ್ತದೆ ಎಂದು ಇಲಾಖೆ ತಿಳಿಸಿದೆ. ಬುಧವಾರ ಬೆಳಿಗ್ಗೆ ಪಶ್ಚಿಮ ಬಂಗಾಳ ಕರಾವಳಿ ಪ್ರದೇಶಗಳು ಹಾಗೂ ಉತ್ತರ ಒಡಿಶಾಗೆ ಚಂಡಮಾರುತ ಅಪ್ಪಳಿಸಲಿದೆ ಎಂದು ಇಲಾಖೆ ತಿಳಿಸಿದೆ. ಚಂಡಮಾರುತದಿಂದ ಉತ್ತರ ಒಡಿಶಾದ ಜಿಲ್ಲೆಗಳು, ವಿಶೇಷವಾಗಿ ಮಯೂರ್ಭಂಜ್, ಭದ್ರಾಕ್ ಮತ್ತು ಬಾಲಸೋರ್ ಜಿಲ್ಲೆಗಳು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದೆ. ಚಂಡಮಾರುತದಿಂದಾಗಿ ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 26ರಂದು ಚಂಡಮಾರುತದಿಂದ ಹೆಚ್ಚಿನ ಹಾನಿ
ಚಂಡಮಾರುತದಿಂದಾಗಿ ಉತ್ತರ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಮೇ 26ರಂದು ಹೆಚ್ಚಿನ ಹಾನಿಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದು ಉತ್ತರ ಒಡಿಶಾ - ಪಶ್ಚಿಮ ಬಂಗಾಳ ಹಾದು ಪಾರದೀಪ್ ಮತ್ತು ಸಾಗರ ದ್ವೀಪಗಳ ನಡುವೆ ಮೇ 26ಕ್ಕೆ ತಲುಪಿ ಗಂಭೀರ ಸ್ವರೂಪ ಪಡೆಯಲಿದೆ ಎಂದು ತಿಳಿಸಿದ್ದಾರೆ.

ಒಡಿಶಾದಲ್ಲಿ ಅಬ್ಬರದ ಮಳೆ ಸೂಚನೆ
ಪುರಿ, ಜಗತ್ಸಿಂಗ್ ಪುರ, ಖರ್ದಾ, ಕಟಕ್, ಕೇಂದ್ರಪಾರಾ, ಜೈಪುರ, ಭಾದ್ರಾಕ್, ಬಾಲಸೋರ್ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಲಿದೆ. ಪ್ರವಾಹ ಉಂಟಾಗುವ ಸೂಚನೆಯಿಂದೆ ಎಂದು ಇಲಾಖೆ ತಿಳಿಸಿದೆ. ಗಂಜಾಂ, ಧೆಂಕಾಲನ್, ಮಯೂರ್ ಬಂಜ್ ಜಿಲ್ಲೆಗಳಲ್ಲಿ ದಾಖಲೆಯ ಮಳೆಯಾಗಲಿದೆ ಎಂದು ತಿಳಿಸಿದೆ.

ರಾಜ್ಯಗಳಲ್ಲಿ ಎನ್ಡಿಆರ್ಎಫ್ ತಂಡ
ಚಂಡಮಾರುತ ಪ್ರಭಾವ ತೀವ್ರಗೊಳ್ಳಲಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಅಂಡಮಾನ್ ನಿಕೋಬಾರ್ ದ್ವೀಪಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ಕಳುಹಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ 35 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಚಂಡಮಾರುತದ ಪ್ರಭಾವ ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿಯೂ ಹೆಚ್ಚಾಗುವ ನಿರೀಕ್ಷೆಯಿದ್ದು ಎನ್ಡಿಆರ್ಎಫ್ ಪಡೆ ಸನ್ನದ್ಧವಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications