ಯಾಕೂಬ್ ಕೇಸಿನಲ್ಲಿ ನ್ಯಾ. ಕುರಿಯನ್ ಅಪಸ್ವರ ಹಾಡಿದ್ದೇಕೆ?
ನವದೆಹಲಿ, ಜುಲೈ 28 : ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಜೋಸೆಫ್ ಕುರಿಯನ್ ಅವರು ಎತ್ತಿರುವ ಹೊಸ ಸಂಗತಿ ಮತ್ತು ನೀಡಿರುವ ನಿರ್ಣಯದಿಂದಾಗಿ, ಇನ್ನೆರಡು ದಿನಗಳಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಲಿರುವ ಪಾತಕಿ ಯಾಕೂಬ್ ಮೆಮನ್ಗೆ ನಾಗಪುರ ಜೈಲಿನಲ್ಲಿಯೇ ಸಕ್ಕರೆ ಹಾಕಿ ಹಾಲು ಕುಡಿದಂತಾಗಿದೆ.
1993ರ ಮುಂಬೈ ಸರಣಿ ಸ್ಫೋಟದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಪ್ರಮುಖನಾಗಿರುವ ಯಾಕೂಬ್ ಮೆಮನ್ ಸಲ್ಲಿಸಿದ್ದ ಮೇಲ್ಮನವಿಯನ್ನು (W.P. [crl] 129/2015) ವಿಚಾರಣೆಗೆ ತೆಗೆದುಕೊಂಡಿದ್ದ ದ್ವಿಸದಸ್ಯ ಪೀಠದ ಸದಸ್ಯ ನ್ಯಾಯಮೂರ್ತಿ ಜೋಸೆಫ್ ಕುರಿಯನ್ ಕೆಲ ಪ್ರಶ್ನೆಗಳನ್ನು ಎತ್ತಿರುವುದು ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ.
ಈಗಾಗಲೆ ನೀಡಲಾಗಿರುವ ಡೆತ್ ವಾರಂಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಜುಲೈ 30ರಂದು ಗಲ್ಲಿಗೇರಿಸುವ ಪ್ರಕ್ರಿಯೆಯನ್ನು ತಡೆಯಲು ನ್ಯಾಯಮೂರ್ತಿ ಎಆರ್ ದಾವೆ ಅವರು ನಿರಾಕರಿಸಿದರೆ, ತಾವು ಎತ್ತಿರುವ ಪ್ರಶ್ನೆಗಳಿಗೆ ಸೂಕ್ತ ಉತ್ತರ ಸಿಗುವವರೆಗೆ ಗಲ್ಲು ಶಿಕ್ಷೆ ನೀಡಬಾರದು ಎಂಬುದು ನ್ಯಾಯಮೂರ್ತಿ ಜೋಸೆಫ್ ಕುರಿಯನ್ ಅವರ ತೀರ್ಮಾನವಾಗಿದೆ. [ನೇಣು ಕುಣಿಕೆಯಿಂದ ಯಾಕೂಬ್ ಗೆ ತಾತ್ಕಾಲಿಕ ರಿಲೀಫ್]
ನ್ಯಾ. ಕುರಿಯನ್ ಎತ್ತಿರುವ ಪ್ರಶ್ನೆ : ಯಾಕೂಬ್ನ ಕ್ಯೂರೇಟಿವ್ ಅರ್ಜಿಯನ್ನು ತ್ರಿಸದಸ್ಯ ಪೀಠ ಜುಲೈ 21ರಂದು ಅಸಮಂಜಸವಾಗಿ ತಳ್ಳಿಹಾಕಿದೆ. ಕ್ಯೂರೇಟಿವ್ ಅರ್ಜಿ ತಳ್ಳಿಹಾಕಿದ ತೀರ್ಪನ್ನು ಪುನರ್ ಪರಿಶೀಲನಾ ಅರ್ಜಿಯನ್ನು ಆಲಿಸಿದ್ದ ಇನ್ನಿಬ್ಬರು ನ್ಯಾಯಮೂರ್ತಿಗಳಿಗೆ ನೀಡಿದ್ದಿಲ್ಲ ಎಂಬುದು ನ್ಯಾ. ಕುರಿಯನ್ ಅವರು ಎತ್ತಿರುವ ಪ್ರಶ್ನೆ.
ಪುನರ್ ಪರಿಶೀಲನಾ ಅರ್ಜಿಯನ್ನು ನ್ಯಾ. ಚಾಮಲೇಶ್ವರ್, ನ್ಯಾ. ಕುರಿಯನ್ ಮತ್ತು ನ್ಯಾ. ದಾವೆ ಆಲಿಸಿದ್ದರು. ಆದರೆ, ಕ್ಯೂರೇಟಿವ್ ಅರ್ಜಿ ಆಲಿಸಿದ್ದ ವಿಭಾಗೀಯ ಪೀಠದಲ್ಲಿ ನ್ಯಾ. ದಾವೆ ಮಾತ್ರ ಇದ್ದರು, ಉಳಿದಿಬ್ಬರು ನ್ಯಾಯಮೂರ್ತಿಗಳಾದ ಚಾಮಲೇಶ್ವರ್ ಮತ್ತು ಕುರಿಯನ್ ಇರಲಿಲ್ಲ. ಇದೇ ಸಂಗತಿ ಈಗ ಕಗ್ಗಂಟಾಗಿರುವುದು.
ನ್ಯಾ.ಕುರಿಯನ್ ಅವರ ಈ ವಾದ ಮಹಾರಾಷ್ಟ್ರ ಸರಕಾರದ ಪರ ವಾದ ಮಂಡಿಸುತ್ತಿದ್ದ ಅಡ್ವೊಕೇಟ್ ಜನರಲ್ ಮುಕುಲ್ ರೋಹತ್ಗಿ ಅವರನ್ನು ಮಾತ್ರ ಆಶ್ಚರ್ಯ ಚಕಿತಗೊಳಿಸಲಿಲ್ಲ, ಯಾಕೂಬ್ ಮೆಮನ್ ಪರ ವಾದ ಮಂಡಿಸುತ್ತಿದ್ದ ರಾಮಚಂದ್ರನ್ ಅವರನ್ನು ಕೂಡ ಅಚ್ಚರಿಗೆ ತಳ್ಳಿತು. [ಸಲ್ಲೂ ವಿರುದ್ಧ ಬಿಜೆಪಿ ಪ್ರತಿಭಟನೆ]
ಯಾಕೂಬ್ ಪರ ವಕೀಲರಾದ ರಾಮಚಂದ್ರನ್ ಇನ್ನೆರಡು ಸಂಗತಿಗಳನ್ನು ಇಲ್ಲಿ ಎತ್ತಿದ್ದಾರೆ. ಒಂದು, ಯಾಕೂಬ್ ಕ್ಯೂರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸುವ ಮೊದಲೇ ಡೆತ್ ವಾರಂಟ್ ಹೊರಡಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯ ಇತ್ತೀಚೆಗೆ ನೀಡಿರುವ ತೀರ್ಪಿನ ಪ್ರಕಾರ, ಕ್ಯೂರೇಟಿವ್ ಅರ್ಜಿ ವಿಚಾರಣೆ ಇನ್ನೂ ಚಾಲ್ತಿಯಲ್ಲಿದ್ದಾಗ ಡೆತ್ ವಾರಂಟ್ ಹೊರಡಿಸುವುದು ಕಾನೂನಿಗೆ ವಿರುದ್ಧ.
ಎರಡು, ಜುಲೈ 21ರಂದು ಕ್ಯೂರೇಟಿವ್ ಅರ್ಜಿ ತಿರಸ್ಕೃತವಾಗಿದ್ದರಿಂದ, ಮಹಾರಾಷ್ಟ್ರ ರಾಜ್ಯಪಾಲ ಮತ್ತು ಭಾರತದ ರಾಷ್ಟ್ರಪತಿ ತಿರಸ್ಕರಿಸಿದ್ದ ಕ್ಷಮಾಪಣಾ ಅರ್ಜಿಗಳೂ ಲೆಕ್ಕಕ್ಕಿಲ್ಲದಂತಾಗಿವೆ. ಈ ಕಾರಣದಿಂದಾಗಿ ಯಾಕೂಬ್ ಮೆಮನ್ ಮತ್ತೊಬ್ಬ ಕ್ಷಮಾಪಣಾ ಅರ್ಜಿ ಸಲ್ಲಿಸಲು ಅರ್ಹ ಎಂಬುದು.
ಒಟ್ಟಿನಲ್ಲಿ ಈ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿ ದತ್ತು ಅವರ ಅಂಗಳಕ್ಕೆ ಬಂದಿದ್ದು, ಅವರು ನಿಯೋಜಿಸಲಿರುವ ತ್ರಿಸದಸ್ಯ ಪೀಠ ಈ ಗೊಂದಲಗಳಿಗೆ ಇತಿಶ್ರೀ ಹಾಡಬೇಕಾಗಿದೆ. ಇದು ತೀರ್ಮಾನವಾದ ನಂತರವಷ್ಟೇ ಯಾಕೂಬ್ ಮೆಮನ್ ನನ್ನು ನಾಗಪುರ ಜೈಲಿನಲ್ಲಿ ಗಲ್ಲಿಗೇರಿಸಲು ಸಾಧ್ಯ. [ಕಸಬ್ನಿಗೆ ವಿದಾಯ ಹೇಳಿದ ವ್ಯಕ್ತಿಯೇ ಯಾಕೂಬ್ ಕತ್ತಿನ ಹಗ್ಗ ಎಳೆಯಲಿದ್ದಾನೆ]
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ













Click it and Unblock the Notifications