ಗಲ್ಲು ಶಿಕ್ಷೆಗೆ ತಡೆ ಕೋರಿ ಸುಪ್ರೀಂ ಮೊರೆ ಹೋದ ಯಾಕೂಬ್
ನವದೆಹಲಿ, ಜುಲೈ 23 : ತನಗೆ ವಿಧಿಸಿರುವ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ ಯಾಕೂಬ್ ಅಬ್ದುಲ್ ರಜಾಕ್ ಮೆಮನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾನೆ. ಎರಡು ದಿನಗಳ ಹಿಂದೆ ಯಾಕೂಬ್ ಕ್ಯೂರೇಟರ್ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.
ಮಹಾರಾಷ್ಟ್ರ
ಸರ್ಕಾರ
ಜುಲೈ
30ರಂದು
ಯಾಕೂಬ್ನನ್ನು
ಗಲ್ಲಿಗೇರಿಸಲು
ನಿರ್ಧರಿಸಿದೆ.
ಆದ್ದರಿಂದ
ಗುರುವಾರ
ಯಾಕೂಬ್
ಸುಪ್ರೀಂಕೋರ್ಟ್
ಮೊರೆ
ಹೋಗಿದ್ದು,
ತನಗೆ
ವಿಧಿಸಿರುವ
ಗಲ್ಲುಶಿಕ್ಷೆಗೆ
ತಡೆಯಾಜ್ಞೆ
ನೀಡಬೇಕು
ಎಂದು
ಮನವಿ
ಮಾಡಿದ್ದಾನೆ.
[ಯಾಕೂಬ್
ಗೆ
ಗಲ್ಲು
ಖಾಯಂ]
ರಾಜ್ಯಪಾಲರ ಮುಂದೆ ತನ್ನ ಕ್ಷಮಾದಾನ ಅರ್ಜಿ ಬಾಕಿ ಇದೆ. ಆದ್ದರಿಂದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಎಂದು ಯಾಕೂಬ್ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾನೆ. ಯಾಕೂಬ್ ಸಲ್ಲಿಸಿದ್ದ ಕ್ಯೂರೇಟರ್ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 21ರಂದು ತಿರಸ್ಕರಿಸಿತ್ತು. [1993ರ ಮುಂಬೈ ಸ್ಫೋಟ 2 ದಶಕದ ನಂತರ ತೀರ್ಪು]
ಮಹಾರಾಷ್ಟ್ರ ಸರ್ಕಾರ ಜುಲೈ 30ರಂದು ನಾಗ್ಪುರ ಜೈಲಿನಲ್ಲಿ ಯಾಕೂಬ್ನನ್ನು ಗಲ್ಲಿಗೇರಿಸಲು ಸಿದ್ಧತೆ ನಡೆಸುತ್ತಿದೆ. ಆದರೆ, ಮಹಾರಾಷ್ಟ್ರ ರಾಜ್ಯಪಾಲರ ಮುಂದೆ ಯಾಕೂಬ್ ಸಲ್ಲಿಸಿರುವ ಕ್ಷಮಾದಾನ ಅರ್ಜಿ ಬಾಕಿ ಇದೆ. ಆದ್ದರಿಂದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಎಂದು ಯಾಕೂಬ್ ಕೋರ್ಟ್ಗೆ ಮನವಿ ಮಾಡಿದ್ದಾನೆ. ["ದಾವೂದ್ ಎಲ್ಲೇ ಇರಲಿ ಅವನನ್ನು ಹಿಡಿದು ಕಟಕಟೆ ಏರಿಸ್ತೇವೆ"]
ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಯಾಕೂಬ್ ಸೇರಿದಂತೆ 10 ಮಂದಿಗೆ ಮುಂಬೈ ವಿಶೇಷ ಟಾಡಾ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಯಾಕೂಬ್ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ 2015ರ ಏಪ್ರಿಲ್ನಲ್ಲಿ ತಿರಸ್ಕರಿಸಿತ್ತು.
1993ರ ಮಾರ್ಚ್ 12 ರಂದು ಮುಂಬೈನಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿತ್ತು. ಸ್ಫೋಟದಲ್ಲಿ 257 ಮಂದಿ ಮೃತಪಟ್ಟು, 713 ಮಂದಿ ಗಾಯಗೊಂಡಿದ್ದರು. ಸ್ಫೋಟದ ತನಿಖೆ ನಡೆಸಿದ ಸಿಬಿಐ ದಾವೂದ್ ಇಬ್ರಾಹಿಂ ಸೇರಿದಂತೆ ಹಲವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಯಾಕೂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.