Get Updates
Get notified of breaking news, exclusive insights, and must-see stories!

ಬೆಂಬಲಿಗರ ಬಣಕ್ಕೆ ಧನ್ಯವಾದ ಅರ್ಪಿಸಿದ ಯಶವಂತ್‌ ಸಿನ್ಹಾ

ನವದೆಹೆಲಿ, ಜೂ. 27: ರಾಷ್ಟ್ರಪತಿ ಚುನಾವಣೆಗೆ ಯುಪಿಎ ಬಣದಿಂದ ಅಭ್ಯರ್ಥಿಯಾಗಿರುವ ಯಶವಂತ್‌ ಸಿನ್ಹಾ ಚುನಾವಣೆಗೆ ತಮ್ಮನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕಾಗಿ ಬೆಂಬಲಿಗ ಪಕ್ಷಗಳಿಗೆ ಧನ್ಯವಾದ ಹೇಳಿದ್ದಾರೆ.

"ಒಟ್ಟಾಗಿ ಬಂದು ನನ್ನನ್ನು ತಮ್ಮ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಎಲ್ಲಾ ವಿರೋಧ ಪಕ್ಷಗಳಿಗೆ ನಾನು ಕೃತಜ್ಞನಾಗಿದ್ದೇನೆ. ನಾನು ರಾಷ್ಟ್ರಪತಿ ಚುನಾವಣೆಗೆ ನಾಲ್ಕನೇ ಆಯ್ಕೆಯಾಗಿದ್ದೇ ಎಂದು ಹೇಳಲಾಗುತ್ತಿದೆ. ಆದರೆ ನಾನು ಹತ್ತನೇ ಸಂಖ್ಯೆಯಲ್ಲಿದ್ದರೂ ನಾನು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ರಾಷ್ಟ್ರಪತಿ ಚುನಾವಣೆ ದೊಡ್ಡ ಕದನ" ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದರು.

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಎಲ್ಲ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿವೆ. ನಾವು ವ್ಯಕ್ತಿಯನ್ನು ಬೆಂಬಲಿಸುತ್ತೇವೆ. ಆದರೆ ಇದರ ನಿಜವಾದ ಹೋರಾಟ ಎರಡು ಸಿದ್ಧಾಂತಗಳ ನಡುವೆ. ಆರ್‌ಎಸ್‌ಎಸ್‌ನ ಕೋಪ ಮತ್ತು ದ್ವೇಷದ ಸಿದ್ಧಾಂತ ಒಂದು ಕಡೆಯಾದರೆ ವಿರೋಧ ಪಕ್ಷಗಳದ್ದು ಕರುಣೆಯ ಸಿದ್ಧಾಂತ ಇನ್ನೊಂದು ಬದಿಯಲ್ಲಿದೆ" ಎಂದರು.

"17 ಕ್ಕೂ ಹೆಚ್ಚು ಪಕ್ಷಗಳು ನಮಗೆ ಬೆಂಬಲ ನೀಡುತ್ತಿವೆ. ಭಾರತೀಯ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ನಮ್ಮ ಸಂವಿಧಾನವನ್ನು ರಕ್ಷಿಸಲು, ಬಿಜೆಪಿ ವಿರುದ್ಧದ ನಮ್ಮ ಹೋರಾಟದಲ್ಲಿ ನಾವೆಲ್ಲರೂ ಒಂದಾಗಬೇಕು. ನಾವೆಲ್ಲರೂ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿದ್ದೇವೆ" ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸೋಮವಾರ ಯಶವಂತ್‌ ಸಿನ್ಹಾ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಟಿಎಂಸಿಯ ಸಂಸದ ಅಭಿಷೇಕ್ ಬ್ಯಾನರ್ಜಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮುಂತಾದವರು ಜೊತೆಗಿದ್ದರು.

ಯಶವಂತ್ ಸಿನ್ಹಾ ಜಿಗೆ ನಮ್ಮ ಬೆಂಬಲ: ಕೆ. ಟಿ. ರಾಮರಾವ್

ಯಶವಂತ್ ಸಿನ್ಹಾ ಜಿಗೆ ನಮ್ಮ ಬೆಂಬಲ: ಕೆ. ಟಿ. ರಾಮರಾವ್

ಭಾರತದ ರಾಷ್ಟ್ರಪತಿ ಹುದ್ದೆಗೆ ಜುಲೈ 18 ರಂದು ಚುನಾವಣೆ ನಿಗದಿಯಾಗಿದ್ದು, ಮತ ಎಣಿಕೆ ಅಗತ್ಯವಿದ್ದಲ್ಲಿ ಜುಲೈ 21 ರಂದು ನಡೆಯಲಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಟಿಆರ್‌ಎಸ್ ಸೋಮವಾರ ಬೆಂಬಲ ಘೋಷಿಸಿದೆ. ಕೆ. ಟಿ. ರಾಮರಾವ್, ಭಾರತದ ರಾಷ್ಟ್ರಪತಿ ಚುನಾವಣೆಯಲ್ಲಿ ಯಶವಂತ್ ಸಿನ್ಹಾ ಜಿ ಅವರ ಉಮೇದುವಾರಿಕೆಗೆ ಬೆಂಬಲ ನೀಡಲು ಟಿಎಸ್‌ಆರ್‌ ಪಕ್ಷದ ಅಧ್ಯಕ್ಷ ಕೆಸಿಆರ್ ಅವರು ನಿರ್ಧರಿಸಿದ್ದಾರೆ. ಇಂದು ಟಿಆರ್‌ಎಸ್‌ನ ನಮ್ಮ ಸಂಸತ್ತಿನ ಸದಸ್ಯರೊಂದಿಗೆ ಬೆಂಬಲಿಗನಾಗಿ ನಾನು ಪ್ರತಿನಿಧಿಸುತ್ತೇನೆ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಸಂವಿಧಾನದ ಮೂಲ ಮೌಲ್ಯಗಳನ್ನು ಎತ್ತಿಹಿಡಿಯುವೆ

ಸಂವಿಧಾನದ ಮೂಲ ಮೌಲ್ಯಗಳನ್ನು ಎತ್ತಿಹಿಡಿಯುವೆ

ಯಶವಂತ್ ಸಿನ್ಹಾ ಚುನಾವಣೆಯಲ್ಲಿ ಗೆದ್ದರೆ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕರು, ಮಹಿಳೆಯರು ಮತ್ತು ಸಮಾಜದ ಎಲ್ಲಾ ಅಂಚಿನಲ್ಲಿರುವ ವರ್ಗಗಳ ಪರವಾಗಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ. ಶುಕ್ರವಾರ ವಿರೋಧ ಪಕ್ಷಗಳಿಗೆ ಬರೆದ ಪತ್ರದಲ್ಲಿ ಸಿನ್ಹಾ ತಮ್ಮನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಸಂವಿಧಾನದ ಮೂಲ ಮೌಲ್ಯಗಳು ಮತ್ತು ಮಾರ್ಗದರ್ಶಿ ಆದರ್ಶಗಳನ್ನು ಭಯ ಅಥವಾ ಪರವಾಗಿ ಇಲ್ಲದೆ ಆತ್ಮಸಾಕ್ಷಿಯಾಗಿ ಎತ್ತಿಹಿಡಿಯುತ್ತೇನೆ ಎಂದು ಭರವಸೆ ನೀಡಿದರು.

ನಂಬಿಕೆ ಮತ್ತು ವಿಶ್ವಾಸಕ್ಕೆ ಧನ್ಯವಾದಗಳು

ನಂಬಿಕೆ ಮತ್ತು ವಿಶ್ವಾಸಕ್ಕೆ ಧನ್ಯವಾದಗಳು

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿಮ್ಮ ಸಾಮಾನ್ಯ ಅಭ್ಯರ್ಥಿಯಾಗಿ ನನ್ನನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಕ್ಕಾಗಿ ನಿಮ್ಮ ಮತ್ತು ಎಲ್ಲಾ ವಿರೋಧ ಪಕ್ಷಗಳ ನಾಯಕರ ಬಗ್ಗೆ ಕೃತಜ್ಞತೆಯ ಭಾವನೆಗಳಿಂದ ನಾನು ಮುಳುಗಿದ್ದೇನೆ. ನಾನು ನಿಮ್ಮ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಧನ್ಯವಾದಗಳು. ನಾನು ನಿಮಗೆ ಮತ್ತು ಭಾರತದ ಜನತೆಗೆ ನಾನು ಭರವಸೆ ನೀಡುತ್ತೇನೆ. ನಾನು ಆಯ್ಕೆಯಾದರೆ, ಭಯದಿಂದಲೋ ಅಥವಾ ಪರವಾಗಿ ಇಲ್ಲದೆ, ಭಾರತೀಯ ಸಂವಿಧಾನದ ಮೂಲಭೂತ ಮೌಲ್ಯಗಳು ಮತ್ತು ಮಾರ್ಗದರ್ಶಿ ಆದರ್ಶಗಳನ್ನು ಆತ್ಮಸಾಕ್ಷಿಯಾಗಿ ಎತ್ತಿಹಿಡಿಯುತ್ತೇನೆ. ಸಂವಿಧಾನದ ಪಾಲಕನಾಗಿ ಕಾರ್ಯಾಂಗದಿಂದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯ ಬೆಳಕನ್ನು ಮಬ್ಬಾಗಿಸಲು ನಾನು ಬಿಡುವುದಿಲ್ಲ ಎಂದು ಯಶವಂತ್ ಸಿನ್ಹಾ ಪತ್ರದಲ್ಲಿ ತಿಳಿಸಿದ್ದಾರೆ.

ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು

ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು

ಜೂನ್ 21ರಂದು ವಿರೋಧ ಪಕ್ಷ ಕಾಂಗ್ರೆಸ್‌ನ ಸಾಮಾನ್ಯ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಅವರನ್ನು ಹೆಸರಿಸಲಾಯಿತು. ಯಶವಂತ್ ಸಿನ್ಹಾ ಅವರು 2018ರಲ್ಲಿ ಭಾರತೀಯ ಜನತಾ ಪಕ್ಷವನ್ನು ತೊರೆದು ಕಳೆದ ವರ್ಷ ಟಿಎಂಸಿ ಸೇರಿದ್ದರು. ನಂತರ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು. ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಜೂನ್ 24 ರಂದು ನಾಮಪತ್ರ ಸಲ್ಲಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+