Year end 2022: ಮಹಿಳೆಯರ ಪರ ಸುಪ್ರೀಂ ಕೋರ್ಟ್ ನೀಡಿದ 5 ಮಹತ್ವದ ತೀರ್ಪುಗಳು
ನವದೆಹಲಿ, ಡಿ. 23: 2022 ಮುಗಿದ್ದು, 2023ಕ್ಕೆ ಸ್ವಾಗತ ಕೋರಲು ಇನ್ನೇಲು ಕೆಲವೇ ದಿನಗಳು ಬಾಕಿಯಿದೆ. ಈ ವರ್ಷ ನಡೆದ ಹಲವು ಘಟನೆಗಳನ್ನು ಒಮ್ಮೆ ಹಿಂತಿರುಗಿ ನೋಡುವಾಗ ಸುಪ್ರೀಂ ಕೋರ್ಟ್ ನೀಡಿದ ಕೆಲವು ತೀರ್ಪುಗಳು ಮಹತ್ವದ್ದಾಗಿವೆ. ಅದರಲ್ಲೂ ಮಹಿಳೆಯರ ಪರ ನೀಡಿರುವ ಕೆಲವು ತೀರ್ಪುಗಳ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.
ಈ ವರ್ಷ ಸುಪ್ರೀಂ ಕೋರ್ಟ್ ತೆಗೆದುಕೊಂಡ ಮಹತ್ವದ ತೀರ್ಪುಗಳ ಪಟ್ಟಿ ಇಲ್ಲಿದೆ.
*ವೈವಾಹಿಕ ಅತ್ಯಾಚಾರವೂ ಅತ್ಯಾಚಾರವೇ*
ಭಾರತದಲ್ಲಿ ವೈವಾಹಿಕ ಅತ್ಯಾಚಾರಕ್ಕೆ ಮೊದಲ ಕಾನೂನು ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್, ಗಂಡನಿಂದ ಲೈಂಗಿಕ ದೌರ್ಜನ್ಯವು ಅತ್ಯಾಚಾರದ ರೂಪವನ್ನು ಪಡೆಯಬಹುದು ಎಂದು ಹೇಳಿದೆ. "ಎಲ್ಲ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರಾಗಿದ್ದಾರೆ" ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮಹತ್ವದ ಆದೇಶವನ್ನು ನೀಡಿದ್ದರು.
"ಎಂಟಿಪಿ ಕಾಯಿದೆಯಡಿ, ಅತ್ಯಾಚಾರಗಳಲ್ಲಿ ವೈವಾಹಿಕ ಅತ್ಯಾಚಾರವನ್ನೂ ಒಳಗೊಂಡಿರುತ್ತವೆ. ಗಂಡನಿಂದಾದ ಲೈಂಗಿಕ ದೌರ್ಜನ್ಯವು ಅತ್ಯಾಚಾರದ ರೂಪವನ್ನು ಪಡೆಯಬಹುದು" ಎಂದು ನ್ಯಾಯಾಲಯ ಹೇಳಿದೆ.

ಈ ಮಹತ್ವದ ತೀರ್ಪು ವೈವಾಹಿಕ ಅತ್ಯಾಚಾರವನ್ನು ಸಂಪೂರ್ಣವಾಗಿ ಗರ್ಭಪಾತದ ವ್ಯಾಪ್ತಿಯಲ್ಲಿ ಗುರುತಿಸುತ್ತದೆ. ಆದರೂ ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಪರಿಗಣಿಸದ ನಮ್ಮ ದೇಶದಲ್ಲಿ ಇದು ಒಂದು ಅದ್ಭುತ ತೀರ್ಪು.
*ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತವು ಪ್ರತಿ ಮಹಿಳೆಯ ಹಕ್ಕು*
ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಕುರಿತಾದ ಮಹತ್ವದ ತೀರ್ಪಿನಲ್ಲಿ, ಸರ್ವೋಚ್ಚ ನ್ಯಾಯಾಲಯವು ಗರ್ಭಾವಸ್ಥೆಯ 24 ವಾರಗಳವರೆಗೆ ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರಾಗಿರುತ್ತಾರೆ. ವೈದ್ಯಕೀಯ ಗರ್ಭಪಾತದ (ಎಂಟಿಪಿ) ಕಾಯಿದೆಯಡಿಯಲ್ಲಿ ಮತ್ತು ಅವರ ವೈವಾಹಿಕ ಜೀವನದ ಆಧಾರದ ಮೇಲೆ ಗರ್ಭಪಾತಕ್ಕೆ ಅವಕಾಶವಿದೆ.
"ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಮಹಿಳೆಯ ಸಂತಾನೋತ್ಪತ್ತಿ ಆಯ್ಕೆಯ ಹಕ್ಕು ಅವಳ ವೈಯಕ್ತಿಕ ಸ್ವಾತಂತ್ರ್ಯವಾಗಿದೆ. ಜೊತೆಗೆ ಇದು ಆಕೆಯ ದೇಹದ ಮೇಲೆ ಆಕೆಗೆ ಹಕ್ಕಿದೆ" ಎಂದು ನ್ಯಾಯಾಲಯ ಹೇಳಿದೆ. ಮಹಿಳೆಯ ವೈವಾಹಿಕ ಸ್ಥಿತಿಯ ಆಧಾರದ ಮೇಲೆ ತಾರತಮ್ಯವು ಸಮಾನತೆಯ ಹಕ್ಕಿನ ವಿರುದ್ಧವಾಗಿದೆ ಎಂದು ಪೀಠ ಹೇಳಿದೆ.

2003 ರ ವೈದ್ಯಕೀಯ ನಿಯಮಗಳ ನಿಯಮ 3B ರ ಪ್ರಕಾರ, ಕೆಲವು ಅಸಾಧಾರಣ ಸಂದರ್ಭಗಳಲ್ಲಿ 20 ರಿಂದ 24 ವಾರಗಳ ನಡುವೆ ಗರ್ಭಪಾತ ಮಾಡಿಸಿಕೊಳ್ಳಲು ಕೆಲವು ವರ್ಗದ ಮಹಿಳೆಯರಿಗೆ ಅನುಮತಿಸಲಾಗಿದೆ.
*ಮಗುವಿನ ಉಪನಾಮವನ್ನು ನಿರ್ಧರಿಸುವ ಹಕ್ಕು ತಾಯಿಗೆ ಇದೆ*
ಮತ್ತೊಂದು ಮಹತ್ವದ ತೀರ್ಪಿನಲ್ಲಿ, ತನ್ನ ತಂದೆಯ ಮರಣದ ನಂತರ ಮಗುವಿನ ಉಪನಾಮವನ್ನು ನಿರ್ಧರಿಸುವ ಹಕ್ಕು ತಾಯಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಮತ್ತು ಕೃಷ್ಣ ಮುರಾರಿ ಅವರ ಪೀಠವು, ತಾಯಿ ಮಾತ್ರ ಮಗುವಿನ ನೈಸರ್ಗಿಕ ಪೋಷಕರಾಗಿರುವುದರಿಂದ ತನ್ನ ಎರಡನೇ ಗಂಡನ ಹೆಸರನ್ನು ನೀಡಬಹುದು ಎಂದು ಹೇಳಿದರು.
*ಕನ್ಯತ್ವ ಪರೀಕ್ಷೆಯು ಪಿತೃಪ್ರಭುತ್ವದ ಮನಸ್ಥಿತಿಯನ್ನು ತೋರಿಸುತ್ತದೆ*
ಅಕ್ಟೋಬರ್ 31, 2022 ರಂದು, ಎರಡು ಬೆರಳುಗಳ ಪರೀಕ್ಷೆಯ ಮೇಲಿನ ನಿಷೇಧವನ್ನು ಸುಪ್ರೀಂ ಪುನರುಚ್ಚರಿಸಿತು. ಕೇವಲ ಲೈಂಗಿಕವಾಗಿ ಸಕ್ರಿಯವಾಗಿರುವ ಕಾರಣ ತನ್ನ ಮೇಲೆ ಅತ್ಯಾಚಾರವೆಸಗಿದೆ ಎಂದು ಮಹಿಳೆ ಹೇಳಿದಾಗ ಅದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳುವುದು ಪಿತೃಪ್ರಭುತ್ವ ಮತ್ತು ಲೈಂಗಿಕತೆಯಾಗಿದೆ ಎಂದು ಹೇಳಿದೆ.
ಅತ್ಯಾಚಾರ ಸಂತ್ರಸ್ತರಿಗೆ ಎರಡು ಬೆರಳಿನ (ಕನ್ಯತ್ವ) ಪರೀಕ್ಷೆ ನಡೆಸುತ್ತಿರುವವರ ವಿರುದ್ಧ ಕ್ರಿಮಿನಲ್ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಾಲಯ ಹೇಳಿದೆ. 2013 ರಿಂದ ಪ್ರಾರಂಭವಾಗುವ ಹಲವಾರು ತೀರ್ಪುಗಳ ಮೂಲಕ ಕನ್ಯತ್ವ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ ಎಂದು ನ್ಯಾಯಾಲಯ ಹೇಳಿದೆ.
*ಮನೆ ನಿರ್ಮಾಣಕ್ಕೆ ಹಣ ಕೇಳುವುದು ವರದಕ್ಷಿಣೆ ಎಂದು ಪರಿಗಣನೆ*
ವರದಕ್ಷಿಣೆ ಸಾವು ಪ್ರಕರಣವೊಂದರಲ್ಲಿ ಪತಿ ಮತ್ತು ಆತನ ತಂದೆಗೆ ವಿಧಿಸಿದ್ದ ಶಿಕ್ಷೆಯನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್, ಮನೆ ನಿರ್ಮಾಣಕ್ಕಾಗಿ ಹಣವನ್ನು ಕೇಳುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಬಿ ಅಡಿಯಲ್ಲಿ 'ವರದಕ್ಷಿಣೆ ಬೇಡಿಕೆ' ಎಂದು ಹೇಳಿದೆ.
ವರದಕ್ಷಿಣೆ ಬೇಡಿಕೆಯಂತಹ ಸಾಮಾಜಿಕ ಅನಿಷ್ಟವನ್ನು ಬೇರುಸಹಿತ ಕಿತ್ತೊಗೆಯುವ ಶಾಸಕಾಂಗದ ಉದ್ದೇಶವನ್ನು ಸೋಲಿಸುವ ಕಾನೂನಿನ ನಿಬಂಧನೆಯ ವ್ಯಾಖ್ಯಾನವನ್ನು ದೂರವಿಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications