ತರಬೇತಿ ಪಡೆಯಲು ಬಂದವಳನ್ನೇ ರೇಪ್ ಮಾಡಿದ ಯೋಗ ಗುರು
ಬಾಬಾ ನೀಡುವ ಯೋಗ ತರಬೇತಿಗಾಗಿ ಅಮೆರಿಕದಿಂದಲೇ ಆನ್ ಲೈನ್ ಮೂಲಕ ಹೆಸರು ನೋಂದಾಯಿಸಿಕೊಂಡು ಬಂದಿದ್ದ ಮಹಿಳೆ; ವಿಶೇಷ ಮಸಾಜ್ ತರಬೇತಿ ನೆಪದಲ್ಲಿ ಅತ್ಯಾಚಾರವೆಸಗಿದ ಪ್ರತೀಕ್.
ಪಣಜಿ, ಫೆಬ್ರವರಿ 8: ಮಸಾಜ್ ಮಾಡುವುದರ ಬಗ್ಗೆ ತರಬೇತಿ ನೀಡುವುದಾಗಿ ಹೇಳಿ, ಅದರ ತರಬೇತಿಗಾಗಿ ಬಂದ ಅಮೆರಿಕದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಗೋವಾ ಪೊಲೀಸರು ಯೋಗ ಗುರುವೊಬ್ಬನನ್ನು ಬಂಧಿಸಿದ್ದಾರೆ. ಈ ಪ್ರಕರಣವು, ಉತ್ತರ ಗೋವಾದ ಪೆರ್ನೆಮ್ ಕರಾವಳಿ ಪ್ರದೇಶದ ಕೋರ್ಗಾವೊ ಗ್ರಾಮದಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.[ವಿಡಿಯೋ ವಿಡಂಬನೆ : ಅತ್ಯಾಚಾರಕ್ಕೆ ಕಾರಣ ಯಾರು?]
ಆರೋಪಿಯನ್ನು ಪ್ರತೀಕ್ ಕುಮಾರ್ ಅಗರ್ ವಾಲ್ (38) ಎಂದು ಗುರುತಿಸಲಾಗಿದ್ದು, ಅಮೆರಿಕ ಮೂಲದ ಮಹಿಳೆ ಮಂಗಳವಾರ ಪೆರ್ನೆಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.[ನಿಯಮಿತ ಯೋಗ ಮಹಿಳೆಯ ಸೌಂದರ್ಯಕ್ಕೆ ರಾಮಬಾಣ]

ಆರೋಪಿಯು ಯೋಗ ಶಿಕ್ಷಕ ತರಬೇತಿ ನೀಡುವುದಾಗಿ ಜಾಹೀರಾತು ನೀಡಿದ್ದ. ಹಾಗಾಗಿ, ಅಮೆರಿಕದ ಈ ಪ್ರಜೆ, ಆನ್ ಲೈನ್ ಮೂಲಕವೇ ತರಬೇತಿಗಾಗಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಇವರಷ್ಟೇ ಅಲ್ಲದೆ, ನಾನಾ ದೇಶಗಳಿಂದ ಸುಮಾರು ಏಳು ಮಹಿಳೆಯರು ತರಬೇತಿಗಾಗಿ ಆಗಮಿಸಿದ್ದರು.['ರೇಪ್ ಮಾಡುವ ಮುನ್ನ ಈಕೆಯ ವಿಡಿಯೋ ನೋಡಿ']
ಇವರಲ್ಲೊಬ್ಬರಾಗಿದ್ದ ಅಮೆರಿಕದ ಪ್ರಜೆ ಬಳಿ ತಾಂತ್ರಿಕ ಮಸಾಜ್ ತರಬೇತಿ ನೀಡುವುದಾಗಿ ಆಕೆಯೊಬ್ಬರನ್ನು ಕರೆಸಿಕೊಂಡಿದ್ದ ಪ್ರತೀಕ್ ಕುಮಾರ್ ಅತ್ಯಾಚಾರವೆಸಗಿದ್ದಾನೆಂದು ಹೇಳಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications