ಸೋನಿಯಾ, ರಾಹುಲ್ ವಿರುದ್ದ ಬಾಬಾ ರಾಮದೇವ್ ಭಯಾನಕ ಆರೋಪ
Recommended Video
ನೋಯ್ಡಾ (ಉ.ಪ್ರ), ಸೆ 25: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ಯೋಗಗುರು ಬಾಬಾ ರಾಮದೇವ್ ಗಂಭೀರ ಆರೋಪವನ್ನು ಮಾಡಿದ್ದಾರೆ,
ಮಂಗಳವಾರ (ಸೆ 24) ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ರಾಮದೇವ್, " ಗಾಂಧಿ ಕುಟುಂಬ, ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಜೀವಂತವಾಗಿರಲು ಬಯಸಿರಲಿಲ್ಲ" ಎನ್ನುವ ಗಂಭೀರ ಆರೋಪವನ್ನು ಮಾಡಿದ್ದಾರೆ.
" ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರದಲ್ಲಿದ್ದ ವೇಳೆ, ಅಮಿತ್ ಶಾ ಜೈಲಿನಲ್ಲೇ ಸಾಯಬೇಕೆಂದು ಸೋನಿಯಾ ಮತ್ತು ರಾಹುಲ್ ಬಯಸಿದ್ದರು" ಎನ್ನುವ ಆರೋಪವನ್ನು ರಾಮದೇವ್, ಸೋನಿಯಾ ಕುಟುಂಬದ ಮೇಲೆ ಹೊರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ದವೂ ರಾಮದೇವ್ ಕಿಡಿಕಾರಿದ್ದಾರೆ. " ಅಮಿತ್ ಶಾ ಅವರನ್ನು ಜೈಲಿಗೆ ಕಳುಹಿಸಿದ್ದ ಚಿದಂಬರಂ, ಮುಂದೆ ತಾವೇ ಕಾನೂನು ತೊಂದರೆಗೆ ಸಿಲುಕಿಕೊಳ್ಳುತ್ತಾರೆ ಎಂದು ಅವರ ಕನಸಿನಲ್ಲಿಯೂ ಯೋಚಿಸಿರಲಿಕ್ಕಿಲ್ಲ" ಎಂದು ಲೇವಡಿ ಮಾಡಿದ್ದಾರೆ.
"ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಅವರು ಖಾಸಗಿಯಾಗಿಯಾದರೂ ಯೋಗ ಮಾಡುತ್ತಿದ್ದರು. ಆದರೆ ಅವರ ಉತ್ತರಾಧಿಕಾರಿಗಳ್ಯಾರೂ ಯೋಗಕ್ಕೆ ಗೌರವ ನೀಡಲಿಲ್ಲ. ಆದ್ದರಿಂದಲೇ ಅವರಿಗೆ ಅಧಿಕಾರ ದೊರೆತಿಲ್ಲ" ಎಂದು ರಾಮದೇವ್, ಪರೋಕ್ಷವಾಗಿ ಸೋನಿಯಾ ಮತ್ತು ರಾಹುಲ್ ಉಲ್ಲೇಖಿಸಿ ಹೇಳಿದ್ದರು.
"ಯೋಗ ಮಾಡುವವರಿಗೆ ನೇರವಾಗಿ ದೇವರ ಆಶೀರ್ವಾದ ಸಿಗುತ್ತದೆ. ಯೋಗಕ್ಕೆ ಸಿಗಬೇಕಿದ್ದ ಗೌರವವನ್ನು ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಅವರು. ಬಿಜೆಪಿಯ ಎಲ್ಲಾ ಶಾಸಕ, ಸಂಸದರು, ಸಚಿವರು ಯೋಗ ಮಾಡುತ್ತಾರೆ' ಎಂದು ಅವರು ಮೋದಿ ಸರಕಾರವನ್ನು ಹೊಗಳಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications