ನಾಯಕತ್ವ ಪ್ರಶ್ನಿಸಿದ ಯಾದವ್, ಭೂಷಣ್ ಗೆ ಉಚ್ಚಾಟನೆ ಶಿಕ್ಷೆ
ನವದೆಹಲಿ, ಮಾ, 28 : ಕಳೆದ ಕೆಲ ದಿನಗಳಿಂದ ಆಮ್ ಆದ್ಮಿ ಪಕ್ಷದಲ್ಲಿ ಹೊಗೆಯಾಡುತ್ತಿದ್ದ ಭಿನ್ನಮತ ಶನಿವಾರ ತಾರಕ್ಕೇರಿದ್ದು, ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾತನಾಡಿದ ಸಂಸ್ಥಾಪಕ ಸದಸ್ಯರು ಸ್ಥಾನ ಕಳೆದುಕೊಂಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ನಾಯಕತ್ವವನ್ನು ಪ್ರಶ್ನಿಸಿದ್ದಕ್ಕೆ ಪಕ್ಷದ ಸಂಸ್ಥಾಪಕ ಸದಸ್ಯರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರನ್ನು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಉಚ್ಛಾಟಿಸಲಾಗಿದೆ.[ಎಎಪಿ ಹಿರಿಯ ನಾಯಕರಿಗೆ ಉಚ್ಚಾಟನೆ ಭೀತಿ]
ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೊದಲು ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಯಕರ ಉಚ್ಚಾಟನೆಗೂ ಮುನ್ನ ಸಭೆಯಿಂದ ಹೊರನಡೆದರು.

ನಂತರ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಉಚ್ಚಾಟನೆ ಪ್ರಸ್ತಾವನೆಯನ್ನು ಸಭೆಯ ಮುಂದಿಟ್ಟಾಗ ಬಹುಮತದಲ್ಲಿ ಅಂಗೀಕಾರವಾಯಿತು. 300 ಜನ ಸದಸ್ಯರಲ್ಲಿ 200 ಜನ ಉಚ್ಚಾಟನೆ ಪರ ಮತ ಹಾಕಿದರು.[ಆಮ್ ಆದ್ಮಿ ಪಕ್ಷದೊಳಗಿನ ಭಿನ್ನಮತಕ್ಕೆ ಕಾರಣವೇನು?]
ಸಭೆ ಆರಂಭಕ್ಕೂ ಮುನ್ನ ಯೋಗೆಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಧರಣಿ ಕುಳಿತಿದ್ದರು. ಈ ವೇಳೆ ಘರ್ಷಣೆ ನಡೆದಿದ್ದು ಕೇಜ್ರಿವಾಲ್ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪ್ರಶಾಂತ್ ಭೂಷಣ್ ಆರೋಪ ಮಾಡಿದ್ದಾರೆ. ಜತೆಗೆ ಯೋಗೇಂದ್ರ ಯಾದವ್ ಬೆಂಬಲಿಗರಾದ ಆನಂದ್ ಕುಮಾರ್ ಮತ್ತು ಅಜಿತ್ ಝಾ ಅವರನ್ನು ಸಹ ರಾಷ್ಟೀಯ ಕಾರ್ಯಕಾರಿಣಿ ಸಮಿತಿಯಿಂದ ಉಚ್ಚಾಟಿಸಲಾಗಿದೆ. ಆದರೆ ಯಾದವ್ ಅವರ ಬಹುತೇಕ ಬೆಂಬಲಿಗರು ಸಭೆಗೆ ಗೈರಾಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications