ಶಾರುಖ್ ಖಾನ್, ಹಫೀಜ್ ಸಯೀದ್ ಇಬ್ಬರು ಒಂದೇ: ಯೋಗಿ
ನವದೆಹಲಿ, ನ.04: ಕಿಂಗ್ ಖಾನ್ ಶಾರುಖ್ ಗೆ ಹುಟ್ಟುಹಬ್ಬದ ದಿನದಿಂದ ಯಾಕೋ ಟೈಂ ಸರಿಯಿಲ್ಲ. ಶಾರುಖ್ ಖಾನ್ ಅವರು ಅಸಹಿಷ್ಣುತೆ ಬಗ್ಗೆ ಮಾತನಾಡಿದ್ದೇ ತಡ, ಬಿಜೆಪಿ ಮುಖಂಡರು ಒಬ್ಬರಾದ ಮೇಲೆ ಒಬ್ಬರು ಶಾರುಖ್ ವಿರುದ್ಧ ಹರಿಹಾಯ್ದಿದ್ದಾರೆ.
ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಗೂ ಶಾರುಖ್ ಖಾನ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.
ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗಿಯಾ ಅವರು ಶಾರುಖ್ ಖಾನ್ ಅವರ ವಿರುದ್ಧ ಕಿಡಿಕಾರಿ, ಪಾಕಿಸ್ತಾನಕ್ಕೆ ಬೇಕಾದರೆ ಹೋಗಲಿ ಎಂದು ನಂತರ ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು. [ಸೂರ್ಯ ನಮಸ್ಕಾರ ವಿರೋಧಿಗಳನ್ನು ಕೂಪಕ್ಕೆ ತಳ್ಳಿ: ಯೋಗಿ]
ಬುಧವಾರದಂದು ಹರಿತ ನಾಲಿಗೆಯ ಗೋರಖ್ ಪುರದ ಸಂಸದ ಯೋಗಿ ಆದಿತ್ಯನಾಥ್ ಅವರು ಶಾರುಖ್ ಖಾನ್ ರನ್ನು ಉಗ್ರ ಸಂಘಟನೆಯ ಮುಖ್ಯಸ್ಥ, 2008ರ ಮುಂಬೈ ಉಗ್ರರ ದಾಳಿಯ ರೂವಾರಿ ಹಫೀಜ್ ಸಯೀದ್ ಗೆ ಹೋಲಿಸಿದ್ದಾರೆ.
"Mujhe lagta hai Shah Rukh Khan ki bhasha mein aur Hafiz Saeed ki bhaasha mein koi antar nahi hai" ಇಬ್ಬರ ಭಾಷೆ ಪ್ರಯೋಗದಲ್ಲಿ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ ಎಂದಿದ್ದಾರೆ.
ಕೆಲ ದಿನಗಳ ಹಿಂದೆ ಸಾಧ್ವಿ ಪ್ರಾಚಿ ಅವರು ಮಾತನಾಡಿ, ಶಾರುಖ್ ರನ್ನು ಪಾಕಿಸ್ತಾನಿ ಐಎಸ್ ಐ ಏಜೆಂಟ್ ಎಂದು ಕರೆದಿದ್ದರು. ಶಾರುಖ್ ಖಾನ್ ಗೆ ನೀಡಿದ ಪ್ರಶಸ್ತಿಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು.

ಬಿಜೆಪಿ ಮುಖಂಡ ವಿಜಯ್ ವರ್ಗಿಯಾ ಕಿಡಿಕಾರಿದ್ದರು
ಶಾರುಖ್ ಖಾನ್ ಅವರು ಭಾರತದಲ್ಲಿ ನೆಲೆಸಿದ್ದಾರೆ. ಆದರೆ, ಅವರ ಆತ್ಮ ಪಾಕಿಸ್ತಾನದಲ್ಲಿದೆ. ಆತನ ಸಿನಿಮಾಗಳು ಇಲ್ಲಿ ಕೋಟಿಗಟ್ಟಲೇ ಗಳಿಸುತ್ತವೆ ಅದರೆ, ಭಾರತದಲ್ಲಿ ಅಸಹಿಷ್ಣುತೆ ಎದ್ದು ಕಾಣುತ್ತಿದೆಯಮ್ತೆ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಮುಖಂಡ ವಿಜಯ್ ವರ್ಗಿಯಾ ಕಿಡಿಕಾರಿದ್ದರು.

ಮೋದಿ ಸರ್ಕಾರದ ಪ್ರತಿಕ್ರಿಯೆ
ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಭೂ ಸಾರಿಗೆ ಸಚಿವ ವೆಂಕಯ್ಯ ನಾಯ್ಡು, ವಿಜಯ್ ಹಾಗೂ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಶಾರುಖ್ ಅವರ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯಿಸಬೇಕಾಗಿಲ್ಲ ಎಂದಿದ್ದಾರೆ.
|
ಪಾಕಿಸ್ತಾನಕ್ಕೆ ಬಂದರೆ ಭವ್ಯ ಸ್ವಾಗತ ನೀಡುತ್ತೇವೆ
ಶಾರುಖ್ ಖಾನ್ ಅವರು ಪಾಕಿಸ್ತಾನಕ್ಕೆ ಬಂದರೆ ಭವ್ಯ ಸ್ವಾಗತ ನೀಡುತ್ತೇವೆ ಎಂದು ಉಗ್ರ ಸಂಘಟನೆ ಮುಖ್ಯಸ್ಥರು ಘೋಷಿಸಿದ್ದಾರೆ.
|
ಎಲ್ಲರಿಗೂ ಮುಕ್ತ ಸ್ವಾಗತವಿದೆ
ಭಾರತದಲ್ಲಿರುವ ಮುಸ್ಲಿಮರು ಕ್ರೀಡೆ, ಶೈಕ್ಷಣಿಕ, ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದಾರೆ. ಆದರೆ, ಸೂಕ್ತ ಬೆಲೆ ಸಿಗದ ಕಾರಣ ಮೂಲೆಗುಂಪಾಗುತ್ತಿದ್ದಾರೆ. ಕಷ್ಟದ ಪರಿಸ್ಥಿತಿ ಎದುರಿಸಿ ವ್ಯಕ್ತಿತ್ವ ಕಳೆದುಕೊಳ್ಳುವುದಕ್ಕಿಂತ ಪಾಕಿಸ್ತಾನಕ್ಕೆ ಬನ್ನಿ ಎಂದ ಉಗ್ರ ಸಂಘಟನೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications