ವಿಂಧ್ಯವಾಸಿನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಯೋಗಿ ಆದಿತ್ಯನಾಥ್

ಲಕ್ನೋ, ಅಕ್ಟೋಬರ್‌ 30: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಉತ್ತರ ಪ್ರದೇಶದ ಮಿರ್ಜಾಪುರದ ಮಾ ವಿಂಧ್ಯವಾಸಿನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮುಖ್ಯಮಂತ್ರಿಯವರು ದೇವಸ್ಥಾನವನ್ನು ಪರಿಶೀಲಿಸಿದರು. ಅವರು ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ಆವರಣದಲ್ಲಿ ಬೋರ್ಡ್‌ನಲ್ಲಿ ಪಿನ್‌ಅಪ್ ಮಾಡಿದ ಸ್ಥಳದ ನಕ್ಷೆ ಮತ್ತು ಸ್ಥಳದ ಕೆಲವು ಚಿತ್ರಗಳನ್ನು ಗಮನಿಸಿದರು.

Yogi Adityanath offered prayers at Vindhyavasini temple

ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲ ಮಾರುಕಟ್ಟೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಅವರು ಸ್ಥಳೀಯ ಮಾರಾಟಗಾರರೊಂದಿಗೆ ಸಂವಾದ ನಡೆಸಿದರು ಮತ್ತು ದೇವಸ್ಥಾನಕ್ಕೆ ಬಂದ ಕೆಲವು ಪುಟ್ಟ ಮಕ್ಕಳನ್ನು ಎತ್ತಿ ಆಡಿಸಿದರು. ಇದಕ್ಕೂ ಮುನ್ನ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆದ ಭಾರತ ಮತ್ತು ಹಾಲಿ ಚಾಂಪಿಯನ್ ಇಂಗ್ಲೆಂಡ್ ನಡುವಿನ ಪಂದ್ಯ ವೀಕ್ಷಿಸಿದರು.

ಪಂದ್ಯದಲ್ಲಿ ಭಾರತದ ಗೆಲುವಿನ ನಂತರ ಯೋಗಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಭಾರತೀಯ ಕ್ರಿಕೆಟ್ ತಂಡದ ವಿಜಯದ ಅಭಿಯಾನವು ಅಡೆತಡೆಯಿಲ್ಲದೆ ಮುಂದುವರಿಯುತ್ತದೆ ಎಂದು ಹೇಳಿದರು.

"ಮತ್ತೊಂದು ಅವಿಸ್ಮರಣೀಯ ಗೆಲುವು. ಇಂಗ್ಲೆಂಡ್ ವಿರುದ್ಧದ ಅದ್ಭುತ ವಿಜಯಕ್ಕಾಗಿ ಇಡೀ ದೇಶಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಎಲ್ಲಾ ಆಟಗಾರರಿಗೆ ಅಭಿನಂದನೆಗಳು. ಭಾರತೀಯ ಕ್ರಿಕೆಟ್ ತಂಡದ ವಿಜಯದ ಅಭಿಯಾನವು ಅಡೆತಡೆಯಿಲ್ಲದೆ ಮುಂದುವರಿಯಲಿ. ಜೈ ಹಿಂದ್," ಎಂದು ಬರೆದಿದ್ದಾರೆ.

ಇತ್ತೀಚೆಗೆ ಯೋಗಿ ಆದಿತ್ಯನಾಥ್ ಅವರು 'ಮೇರಿ ಮತಿ ಮೇರಾ ದೇಶ್ - ಅಮೃತ್ ಕಲಶ ಯಾತ್ರೆ' ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, "ನಾವು ಅಮೃತ ಕಲಶ (ಸ್ವಾತಂತ್ರ್ಯ) ಯುಗದ ಮೊದಲ ವರ್ಷಕ್ಕೆ ಕಾಲಿಟ್ಟಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ನಮಗೆ ಮುಂದಿನ 25 ವರ್ಷಗಳ ಮಹತ್ವದ 'ಪ್ರಾಂಚ್ ಪ್ರಾಣ' ನೀಡಿದ್ದಾರೆ. ಪ್ರತಿಯೊಬ್ಬ ನಾಗರಿಕರು ಈ ನಿರ್ಣಯವನ್ನು ಅನುಸರಿಸಿದರೆ, ಭಾರತ ಮುಂಬರುವ ವರ್ಷಗಳಲ್ಲಿ ಖಂಡಿತವಾಗಿಯೂ ವಿಶ್ವದ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತದೆ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+