Yogi Adityanath: ಸನಾತನವೇ ಭಾರತದ ರಾಷ್ಟ್ರೀಯ ಧರ್ಮ; ಯೋಗಿ ಆದಿತ್ಯನಾಥ್
ಸನಾತನ ಧರ್ಮವೇ ಭಾರತದ ರಾಷ್ಟ್ರೀಯ ಧರ್ಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವು ಯಾವುದೇ ಒಂದು ಜಾತಿ ಅಥವಾ ಧರ್ಮಕ್ಕೆ ಮೀಸಲಾಗಿಲ್ಲ ಎಂದು ಹೇಳಿದ್ದಾರೆ.
ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮ. ಅದು ಮಾನವೀಯತೆಯ ಧರ್ಮ, ಪೂಜೆಯ ವಿಧಾನ ಬೇರೆಯಾಗಿರಬಹುದು. ಆದರೆ ಅದು ಒಂದೇ ಆಗಿದೆ, ಆ ಧರ್ಮವು ಸನಾತನ ಧರ್ಮವಾಗಿದೆ. ಕುಂಭ ಮೇಳವೂ ಸನಾತನ ಧರ್ಮದ ಪ್ರತಿನಿಧಿಯಾಗಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

ಮಹಾ ಕುಂಭ ಮೇಳದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಆರು ಕೋಟಿ ಭಕ್ತರು ಈವರೆಗೂ ಸ್ನಾನ ಮಾಡಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
"ಈ ಏಕತೆಯ ಸಂದೇಶವನ್ನು ಮಹಾಕುಂಭದಿಂದ ನೀರಲಾಗಿದೆ. ಯಾವುದೇ ತಾರತಮ್ಯವಿರಲಿಲ್ಲ, ಸನಾತನ ಧರ್ಮವನ್ನು ಟೀಕಿಸುತ್ತಿದ್ದ ಜನರಿಗೆ ಇದನ್ನು ನೋಡಲು ಬನ್ನಿ ಎಂದು ನಾವು ಕರೆ ನೀಡುತ್ತೇವೆ. ಧೃತರಾಷ್ಟ್ರರಂತೆ ವರ್ತಿಸಬೇಡಿ ನೀವೇ ಬಂದು ನೋಡಿ" ಎಂದು ಅವರು ಹೇಳಿದರು.
11 ಕೋಟಿ ಭಕ್ತರಿಂದ ಸ್ನಾನ
ತ್ರಿವೇಣಿ ಸಂಗಮದಲ್ಲಿ ಇದುವರೆಗೆ 11 ಕೋಟಿ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. ಮೊದಲ 14 ದಿನಗಳಲ್ಲಿ 11 ಕೋಟಿ ಸಂಗಮದಲ್ಲಿ ಮಿಂದೆದಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡಿದ್ದರು. ಪ್ರಯಾಗ್ ರಾಜ್ಗೆ ಭೇಟಿ ನಿಡಿದ ಅವರು ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಜನರು ನಂಬಿಕೆಯಿಂದ ಇಲ್ಲಿಗೆ ಬರುತ್ತಾರೆ. ನಾನು 11 ಬಾರಿ ಪವಿತ್ರ ಸ್ನಾನ ಮಾಡಿದ್ದೇನೆ. ಇಲ್ಲಿ ಒಡೆದು ಆಳುವ, ಕೆಟ್ಟ ರಾಜಕೀಯಕ್ಕೆ ಜಾಗವಿಲ್ಲ. ನಾನು ಹರಿದ್ವಾರದಲ್ಲಿ ಹಬ್ಬದ ದಿನ ಸ್ನಾನ ಮಾಡಿದ್ದು, ಇಂದು ಪ್ರಯಾಗ್ ರಾಜ್ನಲ್ಲಿ ಸ್ನಾನ ಮಾಡುವ ಅವಕಾಶ ಸಿಕ್ಕಿತು" ಎಂದು ಹೇಳಿದ್ದಾರೆ.
ಮಹಾ ಕುಂಭ ಮೇಳ 44 ದಿನ ನಡೆಯಲಿದ್ದು ಈ ಬಾರಿ 45 ಕೋಟಿಗೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಭಾರತೀಯರು ಮಾತ್ರವಲ್ಲದೆ ವಿದೇಶಿಯರು, ಗಣ್ಯರು, ಉದ್ಯಮಿಗಳು ಕೂಡ ಈ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿದ್ದಾರೆ.
ಇಸ್ಕಾನ್ ಜೊತೆ ಕೈಜೋಡಿಸಿರುವ ಅದಾನಿ ಫೌಂಡೇಶನ್ ಪ್ರತಿದಿನ 1 ಲಕ್ಷ ಮಂದಿಗೆ ಉಚಿತ ಅನ್ನಪ್ರಸಾದ ವಿತರಣೆ ಮಾಡುತ್ತಿದೆ. ಹಲವು ಪ್ರಮುಖ ಉದ್ಯಮಿಗಳು, ನಾಯಕರು ಮಹಾಕುಂಭ ಮೇಳದಲ್ಲಿ ದಾನ ಧರ್ಮ ಮಾಡುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಣೆ ಮಾಡುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications