1 ಕ್ವಿಂಟಾಲ್ ರೇಷನ್ ಬೇಕಿದ್ದರೆ, 20 ಮಕ್ಕಳನ್ನು ಹೊಂದಬೇಕು; ಸಿಎಂ ಬಾಯಲ್ಲಿ ಇದೆಂಥಾ ಮಾತು?
ನವದೆಹಲಿ, ಮಾರ್ಚ್ 22: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಬಡ ಕುಟುಂಬಗಳು ಆಹಾರ ಧಾನ್ಯಗಳಿಲ್ಲದೇ ನರಳಾಡಿವೆ ಎಂದಿರುವ ಉತ್ತರಾಖಂಡ್ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉತ್ತರಾಖಂಡದ ರಾಮ್ ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳ ಅಡಿಯಲ್ಲಿ ಬಡ ಕುಟುಂಬಗಳು ಹೆಚ್ಚು ಹೆಚ್ಚು ಪಡಿತರ ಪಡೆದುಕೊಳ್ಳಲು 20 ಮಕ್ಕಳನ್ನು ಹೊಂದಬೇಕಿದೆ ಎನ್ನುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.

"ರಾಜ್ಯದಲ್ಲಿ ಪ್ರತಿಯೊಂದು ಮನೆಗೆ 5 ಕೆಜಿ ಪಡಿತರವನ್ನು ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಒಂದು ವೇಳೆ 10 ಜನರಿದ್ದರೆ 50 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ. 20 ಜನರಿದ್ದರೆ 1 ಕ್ವಿಂಟಾಲ್ ಪಡಿತರವನ್ನು ನೀಡಲಾಗುತ್ತದೆ. 20 ಜನರ ಕುಟುಂಬಕ್ಕೆ 100 ಕೆಜಿ ಪಡಿತರ ಸಿಕ್ಕಿದ್ದನ್ನು ನೋಡಿ, 10 ಕೆಜಿ ಪಡಿತರ ಪಡೆದ ಇಬ್ಬರು ಅಸೂಯೆ ಪಟ್ಟರು. ಏಕೆ, ನೀವು ಸಮಯವಿದ್ದಾಗ ಇಬ್ಬರಿಗೆ ಮಾತ್ರ ಜನ್ಮ ನೀಡಿದ್ದೇಕೆ, 20 ಜನರು ಏಕೆ ಆಗಲಿಲ್ಲ" ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
#WATCH हर घर में पर यूनिट 5 किलो राशन दिया गया।10 थे तो 50 किलो, 20 थे तो क्विंटल राशन दिया। फिर भी जलन होने लगी कि 2 वालों को 10 किलो और 20 वालों को क्विंटल मिला। इसमें जलन कैसी? जब समय था तो आपने 2 ही पैदा किए 20 क्यों नहीं पैदा किए: उत्तराखंड CM मुख्यमंत्री तीरथ सिंह रावत pic.twitter.com/cjh2hH5VKh
— ANI_HindiNews (@AHindinews) March 21, 2021
ಭಾರತ ಲಾಕ್ ಡೌನ್ ವೇಳೆ ಮನೆಮನೆಗೆ ಪಡಿತರ:
ಕಳೆದ 2020ರ ಮಾರ್ಚ್ ಮತ್ತು ಏಪ್ರಿಲ್ ಅವಧಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಈ ಅವಧಿಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿ ಪ್ರತಿ ಮನೆಗೂ 5 ಕೆಜಿ ಅಕ್ಕಿ, ಆಹಾರ ಧಾನ್ಯ ಮತ್ತು 1 ಕೆಜಿ ಬೇಳೆಕಾಳುಗಳನ್ನು ವಿತರಿಸಲಾಗಿತ್ತು. ಈ ಬಗ್ಗೆ ಉಲ್ಲೇಖಿಸಿದ ಉತ್ತರಾಖಂಡ್ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲರನ್ನೂ ಸಮಾನ ದೃಷ್ಟಿಕೋನದಿಂದ ನೋಡಿದ್ದಾರೆ ಎಂದರು. ನೀವು 10 ಕೆಜಿ ಪಡಿತರ ಪಡೆಯುವುದಕ್ಕೂ, 1 ಕ್ವಿಂಟಾಲ್ ಪಡಿತರ ಪಡೆಯುವುದಕ್ಕೂ ನೀವೇ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Recommended Video
-
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
Prem controversy: ಅಸಹ್ಯ ಆಗ್ತಿದೆ ಪ್ರೇಮ್, ಎಲ್ಲಿ ಹೋದ್ರು ವಕೀಲರು: ಕೆಡಿ ಹಾಡಿನ ವಿರುದ್ಧ ತಣಿಯದ ಆಕ್ರೋಶ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications