''ಒಬ್ಬ ಉಗ್ರರನ್ನು ಕೊಂದರೆ, 10 ಉಗ್ರರು ಹುಟ್ಟುತ್ತಾರೆ''
ಕಾಶ್ಮೀರದಲ್ಲಿ ಒಬ್ಬ ಉಗ್ರರನ್ನು ಕೊಂದರೆ 10 ಉಗ್ರರು ಹುಟ್ಟಿಕೊಳ್ಳುತ್ತಾರೆ. ಹುರಿಯತ್ ಕಾನ್ಫರೆನ್ಸ್ ಸಂಘಟನೆಯ ನಾಯಕ ಮೀರ್ವಾಜ್ ತಿಳಿಸಿದ್ದಾರೆ.
ಶ್ರೀನಗರ, ಆಗಸ್ಟ್ 18: 'ಭಾರತೀಯ ಸೇನೆಯು ಒಬ್ಬ ಉಗ್ರನನ್ನು ಕೊಂದರೆ, ಹತ್ತು ಉಗ್ರರು ಹುಟ್ಟಿಕೊಳ್ಳುತ್ತಾರೆ'' - ಇದು ಕಾಶ್ಮೀರದ ಪ್ರತ್ಯೇಕತಾವಾದಿ ಹಾಗೂ ಹುರಿಯತ್ ಕಾನ್ಫರೆನ್ಸ್ ನ ನಾಯಕ ಮೀರ್ವಾಯಿಜ್ ಫಾರೂಕ್ ಮಾತು.
ಕಾಶ್ಮೀರದಲ್ಲಿ ಇತ್ತೀಚೆಗೆ ಭಾರತೀಯ ಸೇನೆಯು ಕೈಗೊಂಡ ಕೆಲವಾರು ಕಾರ್ಯಾಚರಣೆಗಳಲ್ಲಿ ಅತ್ಯಂತ ಕುಖ್ಯಾತ ಉಗ್ರರೇ ಬಲಿಯಾಗಿರುವ ಹಿನ್ನೆಲೆಯಲ್ಲಿ ಅವರು ಹೀಗೆ ಹೇಳಿದ್ದಾರೆ.

''ಕಾಶ್ಮೀರದಲ್ಲಿ ಸೇನೆಯು ಹಲವಾರು ಉಗ್ರರನ್ನು ಕೊಂದಿರಬಹುದು. ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುವ ಜನರನ್ನು ಮಟ್ಟ ಹಾಕಬಹುದು. ಆದರೆ, ಭಾರತೀಯ ಸೇನೆಯು ಒಬ್ಬ ಉಗ್ರನನ್ನು ಕೊಂದರೆ, 10 ಉಗ್ರರು ನಿಲ್ಲುವರು. ಉಗ್ರರನ್ನು ಕೊಲ್ಲುವುದರಿಂದ ಮಾತ್ರ ಕಾಶ್ಮೀರದಲ್ಲಿ ಶಾಂತಿ ತರುತ್ತೇವೆ ಎಂಬ ಭಾರತೀಯ ಸೇನೆಯ ಅನಿಸಿಕೆ ಕೇವಲ ಭ್ರಮೆಯಷ್ಟೇ'' ಎಂದು ತಿಳಿಸಿದರು.
ದಕ್ಷಿಣ ಕಾಶ್ಮೀರವನ್ನು ಭಾರತೀಯ ಸೇನೆಯು ಹತ್ಯಾಕಾಂಡದ ತಾಣವನ್ನಾಗಿಸಿದೆ ಎಂದು ಆರೋಪಿಸಿದ ಅವರು, ಕಾಶ್ಮೀರದ ಯುವಕರನ್ನು ಇಲ್ಲಿ ಅನಾಮತ್ತಾಗಿ ಕೊಲ್ಲಲಾಗುತ್ತಿದೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications